AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Carrot Ginger Soup Recipe: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸುತ್ತೆ ಈ ಕ್ಯಾರೆಟ್ ಶುಂಠಿ ಸೂಪ್

ಚಳಿಗಾಲದಲ್ಲಿ ತಂಪಾದ ವಾತಾವರಣವಿರುವ ಕಾರಣ ಶೀತ, ಕೆಮ್ಮು ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಸರ್ವೇ ಸಾಮಾನ್ಯ. ಹೀಗಾಗಿ ಈ ಋತುವಿನಲ್ಲಿ ಸೇವಿಸುವ ಆಹಾರದ ಕಡೆಗೂ ಹೆಚ್ಚು ಗಮನ ಕೊಡಬೇಕಾಗುತ್ತದೆ. ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಆರೋಗ್ಯ ಸಮಸ್ಯೆಯಿಂದ ಪಾರಾಗಲು ಕ್ಯಾರೆಟ್ ಶುಂಠಿ ಮಿಶ್ರಿತ ಆರೋಗ್ಯಕರ ಸೂಪ್ ತಯಾರಿಸಿ ಸೇವಿಸಿದರೆ ಉತ್ತಮ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ? ಎನ್ನುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Carrot Ginger Soup Recipe: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸುತ್ತೆ ಈ ಕ್ಯಾರೆಟ್ ಶುಂಠಿ ಸೂಪ್
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 27, 2024 | 5:38 PM

ಮೈಕೊರೆಯುವ ಚಳಿಯಲ್ಲಿ ಏನಾದರೂ ಬಿಸಿ ಬಿಸಿ ಆಹಾರವಿದ್ದರೆ ಬೇರೇನೂ ಬೇಕಿಲ್ಲ. ಈ ಋತುವಿನಲ್ಲಿ ಬಿಸಿ ಬಿಸಿ ಆಹಾರ ತಿನ್ನಲು ಪ್ರೇರೇಪಿಸುತ್ತಿದ್ದರೆ ಬೆಚ್ಚಗಿನ ಬಿಸಿ ಬಿಸಿ ಸೂಪ್ ಗಿಂತ ಉತ್ತಮವಾದ ಆಯ್ಕೆ ಮತ್ತೊಂದಿಲ್ಲ. ಅಡುಗೆ ಮನೆಯಲ್ಲಿರುವ ಈ ಕೆಲವು ಸಾಮಗ್ರಿಗಳನ್ನು ಬಳಸಿ ಸೂಪ್ ತಯಾರಿಸಿ ಸೇವಿಸಿದರೆ ದೇಹವು ಬೆಚ್ಚರಿಗಿರುವುದರೊಂದಿಗೆ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು. ಹಾಗಾದ್ರೆ ಮನೆಯಲ್ಲೇ ಮಾಡಬಹುದಾದ ಕ್ಯಾರೆಟ್ ಶುಂಠಿ ಸೂಪ್ ರೆಸಿಪಿಯೂ ಇಲ್ಲಿದೆ.

ಕ್ಯಾರೆಟ್ ಶುಂಠಿ ಸೂಪ್ ಮಾಡಲು ಬೇಕಾಗುವ ಸಾಮಗ್ರಿಗಳು

* ಮೂರು ಕ್ಯಾರೆಟ್

* ದೊಡ್ಡ ಗಾತ್ರದ ಶುಂಠಿ

* ಒಂದು ಕಪ್ ತರಕಾರಿಗಳು

* ಎರಡು ಈರುಳ್ಳಿ

* ಅರ್ಧ ಕಪ್ ಕಿತ್ತಳೆ ರಸ

* ಸ್ವಲ್ಪ ಕರಿಮೆಣಸಿನ ಪುಡಿ

* ಎರಡು ಚಮಚ ಅಡುಗೆ ಎಣ್ಣೆ

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಇವು ಗರ್ಭಾಶಯದ ರೋಗಗಳ ಆರಂಭಿಕ ಲಕ್ಷಣಗಳು

ಕ್ಯಾರೆಟ್ ಶುಂಠಿ ಸೂಪ್ ತಯಾರಿಸುವ ವಿಧಾನ

* ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿಯಾಗುತ್ತಿದ್ದಂತೆ ಕತ್ತರಿಸಿಟ್ಟ ಈರುಳ್ಳಿ ಮತ್ತು ಶುಂಠಿ ಹಾಕಿ ಬಣ್ಣ ಬದಲಾಗುವವರೆಗೂ ಹುರಿದುಕೊಳ್ಳಿ.

* ಇದಕ್ಕೆ ಕ್ಯಾರೆಟ್ ಹಾಕಿಕೊಳ್ಳಿ, ಅಗತ್ಯವಿದ್ದಷ್ಟು ನೀರು ಹಾಗೂ ರುಚಿಗೆ ತಕ್ಕ ಉಪ್ಪು ಹಾಕಿ ಬೇಯಲು ಬಿಡಿ.

* ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಿಕೊಳ್ಳಿ. ನಂತರದಲ್ಲಿ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಯಲು ಬಿಡಿ.

* ಆ ಬಳಿಕ ಈ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಬಿಡಿ. ಬೇಯಿಸಿಟ್ಟ ಮಿಶ್ರಣವನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ.

* ರುಬ್ಬಿದ ಮಿಶ್ರಣವನ್ನು ಮತ್ತೆ ಕುದಿಯಲು ಸ್ಟವ್ ಮೇಲೆ ಇಡಿ. ಕುದಿಯುತ್ತಿದ್ದಂತೆ ಇದಕ್ಕೆ ಕರಿಮೆಣಸಿನ ಪುಡಿ ಸೇರಿಸಿದರೆ ಕ್ಯಾರೆಟ್ ಶುಂಠಿ ಸೂಪ್ ಸವಿಯಲು ಸಿದ್ಧ.

* ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಕರವಾಗಿದ್ದು, ಇದರ ಸೇವನೆಯಿಂದ ಶೀತ ಹಾಗೂ ಕೆಮ್ಮಿನಂತಹ ಸಮಸ್ಯೆಯೂ ದೂರವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ