AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Carrot Ginger Soup Recipe: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸುತ್ತೆ ಈ ಕ್ಯಾರೆಟ್ ಶುಂಠಿ ಸೂಪ್

ಚಳಿಗಾಲದಲ್ಲಿ ತಂಪಾದ ವಾತಾವರಣವಿರುವ ಕಾರಣ ಶೀತ, ಕೆಮ್ಮು ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಸರ್ವೇ ಸಾಮಾನ್ಯ. ಹೀಗಾಗಿ ಈ ಋತುವಿನಲ್ಲಿ ಸೇವಿಸುವ ಆಹಾರದ ಕಡೆಗೂ ಹೆಚ್ಚು ಗಮನ ಕೊಡಬೇಕಾಗುತ್ತದೆ. ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಆರೋಗ್ಯ ಸಮಸ್ಯೆಯಿಂದ ಪಾರಾಗಲು ಕ್ಯಾರೆಟ್ ಶುಂಠಿ ಮಿಶ್ರಿತ ಆರೋಗ್ಯಕರ ಸೂಪ್ ತಯಾರಿಸಿ ಸೇವಿಸಿದರೆ ಉತ್ತಮ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ? ಎನ್ನುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Carrot Ginger Soup Recipe: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸುತ್ತೆ ಈ ಕ್ಯಾರೆಟ್ ಶುಂಠಿ ಸೂಪ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 27, 2024 | 5:38 PM

Share

ಮೈಕೊರೆಯುವ ಚಳಿಯಲ್ಲಿ ಏನಾದರೂ ಬಿಸಿ ಬಿಸಿ ಆಹಾರವಿದ್ದರೆ ಬೇರೇನೂ ಬೇಕಿಲ್ಲ. ಈ ಋತುವಿನಲ್ಲಿ ಬಿಸಿ ಬಿಸಿ ಆಹಾರ ತಿನ್ನಲು ಪ್ರೇರೇಪಿಸುತ್ತಿದ್ದರೆ ಬೆಚ್ಚಗಿನ ಬಿಸಿ ಬಿಸಿ ಸೂಪ್ ಗಿಂತ ಉತ್ತಮವಾದ ಆಯ್ಕೆ ಮತ್ತೊಂದಿಲ್ಲ. ಅಡುಗೆ ಮನೆಯಲ್ಲಿರುವ ಈ ಕೆಲವು ಸಾಮಗ್ರಿಗಳನ್ನು ಬಳಸಿ ಸೂಪ್ ತಯಾರಿಸಿ ಸೇವಿಸಿದರೆ ದೇಹವು ಬೆಚ್ಚರಿಗಿರುವುದರೊಂದಿಗೆ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು. ಹಾಗಾದ್ರೆ ಮನೆಯಲ್ಲೇ ಮಾಡಬಹುದಾದ ಕ್ಯಾರೆಟ್ ಶುಂಠಿ ಸೂಪ್ ರೆಸಿಪಿಯೂ ಇಲ್ಲಿದೆ.

ಕ್ಯಾರೆಟ್ ಶುಂಠಿ ಸೂಪ್ ಮಾಡಲು ಬೇಕಾಗುವ ಸಾಮಗ್ರಿಗಳು

* ಮೂರು ಕ್ಯಾರೆಟ್

* ದೊಡ್ಡ ಗಾತ್ರದ ಶುಂಠಿ

* ಒಂದು ಕಪ್ ತರಕಾರಿಗಳು

* ಎರಡು ಈರುಳ್ಳಿ

* ಅರ್ಧ ಕಪ್ ಕಿತ್ತಳೆ ರಸ

* ಸ್ವಲ್ಪ ಕರಿಮೆಣಸಿನ ಪುಡಿ

* ಎರಡು ಚಮಚ ಅಡುಗೆ ಎಣ್ಣೆ

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಇವು ಗರ್ಭಾಶಯದ ರೋಗಗಳ ಆರಂಭಿಕ ಲಕ್ಷಣಗಳು

ಕ್ಯಾರೆಟ್ ಶುಂಠಿ ಸೂಪ್ ತಯಾರಿಸುವ ವಿಧಾನ

* ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿಯಾಗುತ್ತಿದ್ದಂತೆ ಕತ್ತರಿಸಿಟ್ಟ ಈರುಳ್ಳಿ ಮತ್ತು ಶುಂಠಿ ಹಾಕಿ ಬಣ್ಣ ಬದಲಾಗುವವರೆಗೂ ಹುರಿದುಕೊಳ್ಳಿ.

* ಇದಕ್ಕೆ ಕ್ಯಾರೆಟ್ ಹಾಕಿಕೊಳ್ಳಿ, ಅಗತ್ಯವಿದ್ದಷ್ಟು ನೀರು ಹಾಗೂ ರುಚಿಗೆ ತಕ್ಕ ಉಪ್ಪು ಹಾಕಿ ಬೇಯಲು ಬಿಡಿ.

* ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಿಕೊಳ್ಳಿ. ನಂತರದಲ್ಲಿ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಯಲು ಬಿಡಿ.

* ಆ ಬಳಿಕ ಈ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಬಿಡಿ. ಬೇಯಿಸಿಟ್ಟ ಮಿಶ್ರಣವನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ.

* ರುಬ್ಬಿದ ಮಿಶ್ರಣವನ್ನು ಮತ್ತೆ ಕುದಿಯಲು ಸ್ಟವ್ ಮೇಲೆ ಇಡಿ. ಕುದಿಯುತ್ತಿದ್ದಂತೆ ಇದಕ್ಕೆ ಕರಿಮೆಣಸಿನ ಪುಡಿ ಸೇರಿಸಿದರೆ ಕ್ಯಾರೆಟ್ ಶುಂಠಿ ಸೂಪ್ ಸವಿಯಲು ಸಿದ್ಧ.

* ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಕರವಾಗಿದ್ದು, ಇದರ ಸೇವನೆಯಿಂದ ಶೀತ ಹಾಗೂ ಕೆಮ್ಮಿನಂತಹ ಸಮಸ್ಯೆಯೂ ದೂರವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್