AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ತಿಂಡಿಗೆ ಬೆಸ್ಟ್ ಕೂರ್ಗ್ ಸ್ಪೆಷಲ್ ಪಾಪುಟ್ಟು, ಮಾಡೋದು ಹೇಗೆ?

ರಾತ್ರಿಯಾಗುತ್ತಿದ್ದಂತೆ ಗೃಹಿಣಿಯರು ಬೆಳಗ್ಗೆ ತಿಂಡಿಗೆ ಏನಪ್ಪಾ ಮಾಡೋದು ಎಂದು ಯೋಚಿಸುತ್ತಾರೆ. ಇಲ್ಲದಿದ್ದರೆ ಮಕ್ಕಳು ಅಥವಾ ಗಂಡನ ಮನೆಯಲ್ಲಿ ಬೆಳಗ್ಗೆ ಏನು ತಿಂಡಿ ಮಾಡ್ಲಿ ಎಂದು ಕೇಳುವುದು ಇದೆ. ಆದರೆ ಬೆಳಗ್ಗಿನ ತಿಂಡಿಗೆ ರುಚಿಕರವಾದ ತಿನಿಸುವೆಂದರೆ ಪಾಪುಟ್ಟು. ಇದು ಕೊಡಗಿನ ಸ್ಪೆಷಲ್ ತಿಂಡಿಯಾಗಿದ್ದು, ಬೆಳಗ್ಗೆ ಉಪಹಾರಕ್ಕೆ ಮಾಡಿ ಸವಿಯಬಹುದು. ಹಾಗಾದ್ರೆ ಪಾಪುಟ್ಟು ರೆಸಿಪಿಯ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

ಬೆಳಗ್ಗೆ ತಿಂಡಿಗೆ ಬೆಸ್ಟ್ ಕೂರ್ಗ್ ಸ್ಪೆಷಲ್ ಪಾಪುಟ್ಟು, ಮಾಡೋದು ಹೇಗೆ?
ಕೂರ್ಗ್ ಸ್ಪೆಷಲ್ ಪಾಪುಟ್ಟು
ಸಾಯಿನಂದಾ
| Edited By: |

Updated on: Jul 24, 2024 | 4:32 PM

Share

ಕೊಡಗು ಎಂದ ಕೂಡಲೇ ಮೊದಲು ನೆನಪಾಗುವುದೇ ಆಚಾರ, ವಿಚಾರ ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ಪದ್ಧತಿಯಲ್ಲಿ ವಿಭಿನ್ನತೆ. ಈ ಭಾಗದ ಜನರ ಆಹಾರವು ಮಾಂಸ ಹಾಗೂ ಮದ್ಯವಾಗಿದೆ. ಅದರಲ್ಲಿ ಈ ಪಂದಿ ಕರಿಯಂತೂ ಪ್ರಸಿದ್ಧ ಆಹಾರಗಳಲ್ಲಿ ಒಂದಾಗಿದೆ. ಇಲ್ಲಿನ ಕೆಲ ತಿನಿಸುಗಳು ಸಿಕ್ಕಾಪಟ್ಟೆ ಫೇಮಸ್ ಆಗಿದ್ದು, ಹೆಸರು ವಿಭಿನ್ನವಾಗಿದ್ದರೂ ರುಚಿ ಮಾತ್ರ ಅದ್ಭುತವಾಗಿರುತ್ತದೆ. ಕೊಡವರ ವಿಶೇಷ ಅಡುಗೆಗಳಲ್ಲಿ ಪಾಪುಟ್ಟು ಕೂಡ ಒಂದಾಗಿದ್ದು, ಇದನ್ನು ಮಾಡಲು ಕೆಲವೇ ಕೆಲವು ಐಟಂಗಳಿದ್ದರೂ ಸಾಕು. ಇಲ್ಲಿನವರು ಬೆಳಗ್ಗಿನ ತಿಂಡಿಗೆ ಪಾಪುಟ್ಟು ಮಾಡಿ ಸವಿಯುತ್ತಾರೆ.

ಪಾಪುಟ್ಟು ಮಾಡಲು ಬೇಕಾಗುವ ಸಾಮಾಗ್ರಿಗಳು

* ನುಚ್ಚಕ್ಕಿ

* ತೆಂಗಿನ ತುರಿ

* ನೀರು

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಆಹಾ! ರುಚಿಯಲ್ಲಿ ಅದ್ಭುತ ಉತ್ತರ ಕರ್ನಾಟಕದ ಸ್ಪೆಷಲ್ ಜೋಳದ ರೊಟ್ಟಿ ಮುಟಿಗಿ, ಇಲ್ಲಿದೆ ರೆಸಿಪಿ

ಪಾಪುಟ್ಟು ಮಾಡುವ ವಿಧಾನ

* ಮೊದಲಿಗೆ ನುಚ್ಚಕ್ಕಿಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು.

* ನಂತರದಲ್ಲಿ ಒಂದು ಪ್ಲೇಟ್ ತೆಗೆದು ಅದರ ಅರ್ಧ ಪ್ಲೇಟ್ ಅಕ್ಕಿ ಹಾಕಿ, ದುಪ್ಪಟ್ಟು ನೀರು ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ತೆಂಗಿನ ತುರಿ ಹಾಕಿ ಮಿಶ್ರಣ ಮಾಡಿಕೊಳ್ಳಬೇಕು.

* ಆ ಬಳಿಕ ಇಡ್ಲಿ ಪಾತ್ರೆಯಲ್ಲಿ ನೀರನ್ನು ಹಾಕಿ ಇಡ್ಲಿ ಪ್ಲೇಟ್ ಇಡಬೇಕು. ಅದರ ಮೇಲೆ ನುಚ್ಚಕ್ಕಿಯ ಪ್ಲೇಟ್ ಇಟ್ಟು ಇಡ್ಲಿ ಪಾತ್ರೆಯ ಬಾಯಿಯನ್ನು ಮುಚ್ಚಿ ಹಬೆಯಲ್ಲಿ ಬೇಯಿಸಿಕೊಳ್ಳಬೇಕು.

* 15-20 ನಿಮಿಷಗಳ ಕಾಲ ಹಾಗೆಯೇ ಬಿಟ್ಟರೆ ರುಚಿಕರವಾದ ಪಾಪುಟ್ಟು ಸಿದ್ಧವಾಗುತ್ತದೆ. ಈ ಪಾಪುಟ್ಟನ್ನು ನಾಲ್ಕು ಭಾಗ ಮಾಡಿ ಚಟ್ನಿ ಅಥವಾ ಸಾಂಬಾರು ಜೊತೆಗೆ ಸವಿಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ