AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ತಿಂಡಿಗೆ ಬೆಸ್ಟ್ ಕೂರ್ಗ್ ಸ್ಪೆಷಲ್ ಪಾಪುಟ್ಟು, ಮಾಡೋದು ಹೇಗೆ?

ರಾತ್ರಿಯಾಗುತ್ತಿದ್ದಂತೆ ಗೃಹಿಣಿಯರು ಬೆಳಗ್ಗೆ ತಿಂಡಿಗೆ ಏನಪ್ಪಾ ಮಾಡೋದು ಎಂದು ಯೋಚಿಸುತ್ತಾರೆ. ಇಲ್ಲದಿದ್ದರೆ ಮಕ್ಕಳು ಅಥವಾ ಗಂಡನ ಮನೆಯಲ್ಲಿ ಬೆಳಗ್ಗೆ ಏನು ತಿಂಡಿ ಮಾಡ್ಲಿ ಎಂದು ಕೇಳುವುದು ಇದೆ. ಆದರೆ ಬೆಳಗ್ಗಿನ ತಿಂಡಿಗೆ ರುಚಿಕರವಾದ ತಿನಿಸುವೆಂದರೆ ಪಾಪುಟ್ಟು. ಇದು ಕೊಡಗಿನ ಸ್ಪೆಷಲ್ ತಿಂಡಿಯಾಗಿದ್ದು, ಬೆಳಗ್ಗೆ ಉಪಹಾರಕ್ಕೆ ಮಾಡಿ ಸವಿಯಬಹುದು. ಹಾಗಾದ್ರೆ ಪಾಪುಟ್ಟು ರೆಸಿಪಿಯ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

ಬೆಳಗ್ಗೆ ತಿಂಡಿಗೆ ಬೆಸ್ಟ್ ಕೂರ್ಗ್ ಸ್ಪೆಷಲ್ ಪಾಪುಟ್ಟು, ಮಾಡೋದು ಹೇಗೆ?
ಕೂರ್ಗ್ ಸ್ಪೆಷಲ್ ಪಾಪುಟ್ಟು
ಸಾಯಿನಂದಾ
| Edited By: |

Updated on: Jul 24, 2024 | 4:32 PM

Share

ಕೊಡಗು ಎಂದ ಕೂಡಲೇ ಮೊದಲು ನೆನಪಾಗುವುದೇ ಆಚಾರ, ವಿಚಾರ ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ಪದ್ಧತಿಯಲ್ಲಿ ವಿಭಿನ್ನತೆ. ಈ ಭಾಗದ ಜನರ ಆಹಾರವು ಮಾಂಸ ಹಾಗೂ ಮದ್ಯವಾಗಿದೆ. ಅದರಲ್ಲಿ ಈ ಪಂದಿ ಕರಿಯಂತೂ ಪ್ರಸಿದ್ಧ ಆಹಾರಗಳಲ್ಲಿ ಒಂದಾಗಿದೆ. ಇಲ್ಲಿನ ಕೆಲ ತಿನಿಸುಗಳು ಸಿಕ್ಕಾಪಟ್ಟೆ ಫೇಮಸ್ ಆಗಿದ್ದು, ಹೆಸರು ವಿಭಿನ್ನವಾಗಿದ್ದರೂ ರುಚಿ ಮಾತ್ರ ಅದ್ಭುತವಾಗಿರುತ್ತದೆ. ಕೊಡವರ ವಿಶೇಷ ಅಡುಗೆಗಳಲ್ಲಿ ಪಾಪುಟ್ಟು ಕೂಡ ಒಂದಾಗಿದ್ದು, ಇದನ್ನು ಮಾಡಲು ಕೆಲವೇ ಕೆಲವು ಐಟಂಗಳಿದ್ದರೂ ಸಾಕು. ಇಲ್ಲಿನವರು ಬೆಳಗ್ಗಿನ ತಿಂಡಿಗೆ ಪಾಪುಟ್ಟು ಮಾಡಿ ಸವಿಯುತ್ತಾರೆ.

ಪಾಪುಟ್ಟು ಮಾಡಲು ಬೇಕಾಗುವ ಸಾಮಾಗ್ರಿಗಳು

* ನುಚ್ಚಕ್ಕಿ

* ತೆಂಗಿನ ತುರಿ

* ನೀರು

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಆಹಾ! ರುಚಿಯಲ್ಲಿ ಅದ್ಭುತ ಉತ್ತರ ಕರ್ನಾಟಕದ ಸ್ಪೆಷಲ್ ಜೋಳದ ರೊಟ್ಟಿ ಮುಟಿಗಿ, ಇಲ್ಲಿದೆ ರೆಸಿಪಿ

ಪಾಪುಟ್ಟು ಮಾಡುವ ವಿಧಾನ

* ಮೊದಲಿಗೆ ನುಚ್ಚಕ್ಕಿಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು.

* ನಂತರದಲ್ಲಿ ಒಂದು ಪ್ಲೇಟ್ ತೆಗೆದು ಅದರ ಅರ್ಧ ಪ್ಲೇಟ್ ಅಕ್ಕಿ ಹಾಕಿ, ದುಪ್ಪಟ್ಟು ನೀರು ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ತೆಂಗಿನ ತುರಿ ಹಾಕಿ ಮಿಶ್ರಣ ಮಾಡಿಕೊಳ್ಳಬೇಕು.

* ಆ ಬಳಿಕ ಇಡ್ಲಿ ಪಾತ್ರೆಯಲ್ಲಿ ನೀರನ್ನು ಹಾಕಿ ಇಡ್ಲಿ ಪ್ಲೇಟ್ ಇಡಬೇಕು. ಅದರ ಮೇಲೆ ನುಚ್ಚಕ್ಕಿಯ ಪ್ಲೇಟ್ ಇಟ್ಟು ಇಡ್ಲಿ ಪಾತ್ರೆಯ ಬಾಯಿಯನ್ನು ಮುಚ್ಚಿ ಹಬೆಯಲ್ಲಿ ಬೇಯಿಸಿಕೊಳ್ಳಬೇಕು.

* 15-20 ನಿಮಿಷಗಳ ಕಾಲ ಹಾಗೆಯೇ ಬಿಟ್ಟರೆ ರುಚಿಕರವಾದ ಪಾಪುಟ್ಟು ಸಿದ್ಧವಾಗುತ್ತದೆ. ಈ ಪಾಪುಟ್ಟನ್ನು ನಾಲ್ಕು ಭಾಗ ಮಾಡಿ ಚಟ್ನಿ ಅಥವಾ ಸಾಂಬಾರು ಜೊತೆಗೆ ಸವಿಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು