AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ತಿಂಡಿಗೆ ಬೆಸ್ಟ್ ಕೂರ್ಗ್ ಸ್ಪೆಷಲ್ ಪಾಪುಟ್ಟು, ಮಾಡೋದು ಹೇಗೆ?

ರಾತ್ರಿಯಾಗುತ್ತಿದ್ದಂತೆ ಗೃಹಿಣಿಯರು ಬೆಳಗ್ಗೆ ತಿಂಡಿಗೆ ಏನಪ್ಪಾ ಮಾಡೋದು ಎಂದು ಯೋಚಿಸುತ್ತಾರೆ. ಇಲ್ಲದಿದ್ದರೆ ಮಕ್ಕಳು ಅಥವಾ ಗಂಡನ ಮನೆಯಲ್ಲಿ ಬೆಳಗ್ಗೆ ಏನು ತಿಂಡಿ ಮಾಡ್ಲಿ ಎಂದು ಕೇಳುವುದು ಇದೆ. ಆದರೆ ಬೆಳಗ್ಗಿನ ತಿಂಡಿಗೆ ರುಚಿಕರವಾದ ತಿನಿಸುವೆಂದರೆ ಪಾಪುಟ್ಟು. ಇದು ಕೊಡಗಿನ ಸ್ಪೆಷಲ್ ತಿಂಡಿಯಾಗಿದ್ದು, ಬೆಳಗ್ಗೆ ಉಪಹಾರಕ್ಕೆ ಮಾಡಿ ಸವಿಯಬಹುದು. ಹಾಗಾದ್ರೆ ಪಾಪುಟ್ಟು ರೆಸಿಪಿಯ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

ಬೆಳಗ್ಗೆ ತಿಂಡಿಗೆ ಬೆಸ್ಟ್ ಕೂರ್ಗ್ ಸ್ಪೆಷಲ್ ಪಾಪುಟ್ಟು, ಮಾಡೋದು ಹೇಗೆ?
ಕೂರ್ಗ್ ಸ್ಪೆಷಲ್ ಪಾಪುಟ್ಟು
ಸಾಯಿನಂದಾ
| Edited By: |

Updated on: Jul 24, 2024 | 4:32 PM

Share

ಕೊಡಗು ಎಂದ ಕೂಡಲೇ ಮೊದಲು ನೆನಪಾಗುವುದೇ ಆಚಾರ, ವಿಚಾರ ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ಪದ್ಧತಿಯಲ್ಲಿ ವಿಭಿನ್ನತೆ. ಈ ಭಾಗದ ಜನರ ಆಹಾರವು ಮಾಂಸ ಹಾಗೂ ಮದ್ಯವಾಗಿದೆ. ಅದರಲ್ಲಿ ಈ ಪಂದಿ ಕರಿಯಂತೂ ಪ್ರಸಿದ್ಧ ಆಹಾರಗಳಲ್ಲಿ ಒಂದಾಗಿದೆ. ಇಲ್ಲಿನ ಕೆಲ ತಿನಿಸುಗಳು ಸಿಕ್ಕಾಪಟ್ಟೆ ಫೇಮಸ್ ಆಗಿದ್ದು, ಹೆಸರು ವಿಭಿನ್ನವಾಗಿದ್ದರೂ ರುಚಿ ಮಾತ್ರ ಅದ್ಭುತವಾಗಿರುತ್ತದೆ. ಕೊಡವರ ವಿಶೇಷ ಅಡುಗೆಗಳಲ್ಲಿ ಪಾಪುಟ್ಟು ಕೂಡ ಒಂದಾಗಿದ್ದು, ಇದನ್ನು ಮಾಡಲು ಕೆಲವೇ ಕೆಲವು ಐಟಂಗಳಿದ್ದರೂ ಸಾಕು. ಇಲ್ಲಿನವರು ಬೆಳಗ್ಗಿನ ತಿಂಡಿಗೆ ಪಾಪುಟ್ಟು ಮಾಡಿ ಸವಿಯುತ್ತಾರೆ.

ಪಾಪುಟ್ಟು ಮಾಡಲು ಬೇಕಾಗುವ ಸಾಮಾಗ್ರಿಗಳು

* ನುಚ್ಚಕ್ಕಿ

* ತೆಂಗಿನ ತುರಿ

* ನೀರು

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಆಹಾ! ರುಚಿಯಲ್ಲಿ ಅದ್ಭುತ ಉತ್ತರ ಕರ್ನಾಟಕದ ಸ್ಪೆಷಲ್ ಜೋಳದ ರೊಟ್ಟಿ ಮುಟಿಗಿ, ಇಲ್ಲಿದೆ ರೆಸಿಪಿ

ಪಾಪುಟ್ಟು ಮಾಡುವ ವಿಧಾನ

* ಮೊದಲಿಗೆ ನುಚ್ಚಕ್ಕಿಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು.

* ನಂತರದಲ್ಲಿ ಒಂದು ಪ್ಲೇಟ್ ತೆಗೆದು ಅದರ ಅರ್ಧ ಪ್ಲೇಟ್ ಅಕ್ಕಿ ಹಾಕಿ, ದುಪ್ಪಟ್ಟು ನೀರು ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ತೆಂಗಿನ ತುರಿ ಹಾಕಿ ಮಿಶ್ರಣ ಮಾಡಿಕೊಳ್ಳಬೇಕು.

* ಆ ಬಳಿಕ ಇಡ್ಲಿ ಪಾತ್ರೆಯಲ್ಲಿ ನೀರನ್ನು ಹಾಕಿ ಇಡ್ಲಿ ಪ್ಲೇಟ್ ಇಡಬೇಕು. ಅದರ ಮೇಲೆ ನುಚ್ಚಕ್ಕಿಯ ಪ್ಲೇಟ್ ಇಟ್ಟು ಇಡ್ಲಿ ಪಾತ್ರೆಯ ಬಾಯಿಯನ್ನು ಮುಚ್ಚಿ ಹಬೆಯಲ್ಲಿ ಬೇಯಿಸಿಕೊಳ್ಳಬೇಕು.

* 15-20 ನಿಮಿಷಗಳ ಕಾಲ ಹಾಗೆಯೇ ಬಿಟ್ಟರೆ ರುಚಿಕರವಾದ ಪಾಪುಟ್ಟು ಸಿದ್ಧವಾಗುತ್ತದೆ. ಈ ಪಾಪುಟ್ಟನ್ನು ನಾಲ್ಕು ಭಾಗ ಮಾಡಿ ಚಟ್ನಿ ಅಥವಾ ಸಾಂಬಾರು ಜೊತೆಗೆ ಸವಿಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು