AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Energy Boosting Foods: ಆಯಾಸ ಹೋಗಲಾಡಿಸಲು, ಶಕ್ತಿಯುತವಾಗಿರಲು ಈ ಆಹಾರಗಳನ್ನು ಸೇವಿಸಿ

ದೇಹವನ್ನು ಕ್ರಿಯಾಶೀಲವಾಗಿಡಲು ಸಾಕಷ್ಟು ಪ್ರಮಾಣದ ಶಕ್ತಿಯ ಅಗತ್ಯವಿದೆ. ಹೆಚ್ಚಿನ ಜನರು ಶಕ್ತಿಯ  ಕೊರತೆಯಿಂದಾಗಿ ದಿನವಿಡೀ ಸೋಮಾರಿತನ ಮತ್ತು ಆಯಾಸವನ್ನು ಅನುಭವಿಸುತ್ತಾರೆ.   ಹಾಗಿರುವಾಗ ದೇಹಕ್ಕೆ ಶಕ್ತಿಯನ್ನು ತುಂಬಲು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಹಾರವನ್ನು ಸೇವನೆ ಮಾಡುವುದು ಮುಖ್ಯ. ನೀವು ಈ ಕೆಲವು ಆಹಾರವನ್ನು ಸೇವನೆ ಮಾಡುವ ಮೂಲಕ ತ್ವರಿತ ಶಕ್ತಿಯನ್ನು ಪಡೆಯಬಹುದು.  

Energy Boosting Foods: ಆಯಾಸ ಹೋಗಲಾಡಿಸಲು, ಶಕ್ತಿಯುತವಾಗಿರಲು ಈ ಆಹಾರಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Oct 10, 2023 | 6:10 PM

Share

ದೇಹವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲು ಶಕ್ತಿಯ ಅಗತ್ಯವಿದೆ. ಶಕ್ತಿಯ ಮುಖ್ಯ ಮೂಲವೆಂದರೆ ಆಹಾರ. ನಿಮ್ಮ ಆಹಾರವು ಅಗತ್ಯ ಪೌಷ್ಠಿಕಾಂಶ, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿಲ್ಲದಿದ್ದರೆ, ನೀವು ಆಗಾಗ್ಗೆ ದಣಿದ ಭಾವನೆ ಮತ್ತು ದುರ್ಬಲತೆಯನ್ನು ಅನುಭವಿಸುವ ಸಾಧ್ಯತೆ ಇರುತ್ತದೆ. ಇದಲ್ಲದೆ ಕೆಲವು ಸಂದರ್ಭಗಳಲ್ಲಿ ರಕ್ತಹೀನತೆ, ಮಧುಮೇಹದಂತಹ ಆರೋಗ್ಯ ಸಮಸ್ಯೆಗಳಿಂದಲೂ ದೇಹದ ಶಕ್ತಿಯು ಕಡಿಮೆಯಾಗಲು ಆರಂಭಿಸುತ್ತದೆ.  ಈ ಸಮಸ್ಯೆಯನ್ನು  ತಪ್ಪಿಸಲು ನೀವು ಆಹಾರದ ಗುಣಮಟ್ಟವನ್ನು ಸುಧಾರಿಸುವುದು ಅವಶ್ಯಕ. ಕೆಲವು ಜನರು ಆಯಾಸ ಮತ್ತು ಬಲಹೀನತೆಯನ್ನು ಹೋಗಲಾಡಿಸಲು ತ್ವರಿತ ಶಕ್ತಿ ನೀಡುವ ತರಹೇವಾರಿ (ಎನರ್ಜಿ ಡ್ರಿಂಕ್ಸ್)ಪಾನೀಯಗಳನ್ನು ಸೇವಿಸುತ್ತಾರೆ. ಆದರೆ ಈ ರೀತಿಯ ಪಾನೀಯಗಳು ಆರೋಗ್ಯಕ್ಕೆ ತುಂಬಾ ಹಾನಿಕಾರಕವೆಂದು ಪರಿಗಣಿಸಲಾಗಿದೆ. ಹೀಗಿರುವಾಗ ನೀವು ದೇಹಕ್ಕೆ ಶಕ್ತಿ ತುಂಬಲು ಬಯಸಿದರೆ ಈ ಕೆಲವೊಂದು ಆಹಾರಗಳನ್ನು ಸೇವನೆ ಮಾಡಬಹುದು.

ದೇಹಕ್ಕೆ ತ್ವರಿತ ಶಕ್ತಿ ತುಂಬಲು ಸಹಕಾರಿ ಈ ಕೆಲವು ಆಹಾರಗಳು:

ಮೊಟ್ಟೆ: ನೀವು ಆಗಾಗ್ಗೆ ದಣಿವು ಮತ್ತು ಬಲಹೀನತೆಯನ್ನು ಅನುಭವಿಸುತ್ತಿದ್ದರೆ, ಅದನ್ನು ತೊಡೆದುಹಾಕಲು ಉತ್ತಮ ಮಾರ್ಗವೆಂದರೆ ನಿಮ್ಮ ಆಹಾರದಲ್ಲಿ ಮೊಟ್ಟೆಯನ್ನು ಸೇರಿಸುವುದು. ಪ್ರೋಟೀನ್ ಭರಿತ ಮೊಟ್ಟೆಗಳು ದೇಹಕ್ಕೆ ಶಕ್ತಿ ತುಂಬಲು ಸಹಾಯ ಮಾಡುತ್ತದೆ.  ಇದು ಅಮೈನೋ ಆಮ್ಲಗಳಿಂದ ಸಮೃದ್ಧವಾಗಿದೆ ಮತ್ತು ಮೊಟ್ಟೆಯಲ್ಲಿ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಪೋಷಕಾಂಶಗಳಿವೆ. ಇದಲ್ಲದೆ, ವಿಟಮಿನ್ ಎ, ವಿಟಮಿನ್ ಬಿ 12, ಸೆಲೆನಿಮಯಮ್ ಮತ್ತು ಇತರ ಅನೇಕ ಪೋಷಕಾಂಶಗಳು ಮೊಟ್ಟೆಯಲ್ಲಿ ಕಂಡುಬರುತ್ತವೆ, ಇದು ದೇಹದಲ್ಲಿ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.

ಸೇಬು: ಸೇಬು ಫೈಬರ್​​​ನ ಸಮೃದ್ಧ ಮೂಲವಾಗಿದೆ. ಆರೋಗ್ಯ ತಜ್ಞರ ಪ್ರಕಾರ ದಿನನಿತ್ಯ ಸೇಬು ತಿನ್ನುವುದರಿಂದ ದೇಹದಿಂದ ಅನೇಕ ರೋಗಗಳು ದೂರವಾಗುತ್ತವೆ. ಅಲ್ಲದೆ ಸೇಬು ಹಣ್ಣನ್ನು ತಿನ್ನುವುದರಿಂದ ದೇಹಕ್ಕೆ ತ್ವರಿತ ಶಕ್ತಿ ದೊರೆಯುತ್ತದೆ. ಇದರೊಂದಿಗೆ ಸಾಕಷ್ಟು ಪ್ರಮಾಣದ ಉತ್ಕರ್ಷಣ ನಿರೋಧಕ ಗುಣಗಳೂ ಇದರಲ್ಲಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು  ಅನೇಕ ರೋಗಗಳು ಭಾದಿಸದಂತೆ ನಿಮ್ಮನ್ನು ರಕ್ಷಿಸುತ್ತದೆ.

ಸೋಯಾಬಿನ್: ಸೋಯಬೀನ್​​ನಲ್ಲಿ ಆಂಟಿಆಕ್ಸಿಡೆಂಟ್ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗೂ ಇದು ಸಸ್ಯಹಾರಿಗಳಿಗೆ ಪ್ರೋಟೀನ್ನ ಅತ್ಯುತ್ತಮ ಮೂಲವಾಗಿದೆ. ದೇಹವನ್ನು ಶಕ್ತಿಯುತವಾಗಿರಿಸಲು ಬಯಸಿದರೆ ನಿಮ್ಮ ಆಹಾರದಲ್ಲಿ ಸೋಯಾಬೀನ್ ಸೇರಿಸಿಕೊಳ್ಳಬಹುದು.

ಇದನ್ನೂ ಓದಿ: ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ 5 ಆಹಾರ ಪದಾರ್ಥಗಳಿವು

ಬಾದಾಮಿ: ವಿಟಮಿನ್ ಇ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಪ್ರೋಟೀನ್ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಬಾದಾಮಿ ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಅಲ್ಲದೆ ಬಾದಾಮಿಯಲ್ಲಿ ಮ್ಯಾಂಗನೀಸ್ ಮತ್ತು ಪೊಟ್ಯಾಸಿಯಮ್ ಕೂಡ ಕಂಡುಬರುತ್ತದೆ, ಇದು ಮೂಳೆಗಳನ್ನು ಬಲಪಡಿಸಲು ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಬಾಳೆಹಣ್ಣು: ಬಾಳೆ ಹಣ್ಣು ತಿನ್ನುವುದರಿಂದ ದೇಹಕ್ಕೆ ತ್ವರಿತ ಶಕ್ತಿ ದೊರೆಯುತ್ತದೆ.  ಅಲ್ಲದೆ ಬಾಳೆಹಣ್ಣಿನಲ್ಲಿ ವಿಟಮಿನ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಆಂಟಿಆಕ್ಸಿಡೆಂಟ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಈ ಎಲ್ಲಾ ಪೋಷಕಾಂಶಗಳು ದೇಹದಿಂದ ಆಯಾಸ ಮತ್ತು ಬಲಹೀನತೆಯನ್ನು ಹೋಗಲಾಡಿಸಲು ಸಹಕಾರಿಯಾಗಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್