AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಸುಡು ಬೇಸಿಗೆಯ ಸಮಯದಲ್ಲಿನ ತೀವ್ರ ಹವಾಮಾನ ವೈಪರಿತ್ಯದಿಂದಾಗಿ ದೇಹದ ತೇವಾಂಶ ಸಂಪೂರ್ಣವಾಗಿ ಕುಂದಿ ಹೋವಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಸಾಕಷ್ಟು ನೀರು ಕುಡಿಯುವುದು ತುಂಬಾನೇ ಮುಖ್ಯ. ನೀರಿನ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ಸುಡು ಬೇಸಿಗೆಯಲ್ಲಿ ನಿರ್ಜಲೀಕರಣದ ಸಮಸ್ಯೆಯಿಂದ ಪಾರಾಗಬಹುದು.

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು  ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ
ಸಾಂದರ್ಭಿಕ ಚಿತ್ರImage Credit source: vecteezy
ಮಾಲಾಶ್ರೀ ಅಂಚನ್​
|

Updated on: Mar 28, 2026 | 9:11 PM

Share

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು ಪ್ರಮಾಣದ ನೀರಿನಾಂಶವನ್ನು ಕಾಪಾಡಿಕೊಳ್ಳಬಹುದು.

ನಿರ್ಜಲೀಕರಣದಿಂದ ಪಾರಾಗಲು ಸೇವನೆ ಮಾಡಿ ಈ ಹಣ್ಣು:

ಕಿತ್ತಳೆ: ಕಿತ್ತಳೆ ಹಣ್ಣು ನೀರಿನಾಂಶದ ಉತ್ತಮ ಮೂಲವಾಗಿದ್ದು, ಇದು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಅವುಗಳ ಹೆಚ್ಚಿನ ನೀರಿನ ಅಂಶವು ಬಿಸಿ ವಾತಾವರಣದಲ್ಲಿ ದೇಹಕ್ಕೆ ಉತ್ತಮ ಜಲಸಂಚಯನವನ್ನು ಒದಗಿಸುತ್ತವೆ. ಇದಲ್ಲದೆ, ಇದರಲ್ಲಿರುವ ವಿಟಮಿನ್‌ ಸಿ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ

ಕಲ್ಲಂಗಡಿ: ಬೇಸಿಗೆಯಲ್ಲಿ  ನಿರ್ಜಲೀಕರಣ ಸಮಸ್ಯೆಯಿಂದ ಪಾರಾಗಲು ಮತ್ತು ದೇಹದಲ್ಲಿ  ನೀರಿನಂಶವನ್ನು ಕಾಪಾಡಿಕೊಳ್ಳಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡುವುದು ಉತ್ತಮ. ಇದರಲ್ಲಿ ಶೇಕಡಾ 92 ರಷ್ಟು ನೀರು ಇರುವುದರಿಂದ ಇದು ಬೇಸಿಗೆಗೆ ಸೂಕ್ತವಾದ ಹಣ್ಣಾಗಿದೆ. ಇದು ಜಲಸಂಚಯನವನ್ನು ಒದಗಿಸುವುದಲ್ಲದೆ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ.

ಸ್ಟ್ರಾಬೆರಿ: ತಿನ್ನಲು ರುಚಿಕರವಾಗಿರುವ ಸ್ಟ್ರಾಬೆರಿ ಉತ್ತಮ ಪ್ರಮಾಣದ ನೀರನ್ನು ಸಹ ಹೊಂದಿರುತ್ತವೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಸ್ಟ್ರಾಬೆರಿಗಳು  ಸ್ವತಂತ್ರ ರಾಡಿಕಲ್ ಹಾನಿ ಮತ್ತು ಶಾಖದಿಂದ ದೇಹವನ್ನು ರಕ್ಷಿಸುತ್ತವೆ.

ಇದನ್ನೂ ಓದಿ: ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್: ಅನಾನಸ್ ಬೇಸಿಗೆಯಲ್ಲಿ ಸೇವಿಸಬಹುದಾದ ಒಂದು ಉತ್ತಮ ಹಣ್ಣು. ಈ ಹಣ್ಣು ರುಚಿಕರವಾಗಿರುವುದಲ್ಲದೆ, ದೇಹಕ್ಕೆ ಜಲಸಂಚಯನವನ್ನೂ ಒದಗಿಸುತ್ತದೆ. ಇದಲ್ಲದೆ, ಅನಾನಸ್ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ.

ಸೌತೆಕಾಯಿ: ಸೌತೆಕಾಯಿಗಳು 96 ಪ್ರತಿಶತದಷ್ಟು ನೀರನ್ನು ಹೊಂದಿರುತ್ತವೆ, ಇದು ದೇಹಕ್ಕೆ ಉತ್ತಮ ಪ್ರಮಾಣದ ಜಲ ಸಂಚಯನವನ್ನು ಒದಗಿಸುತ್ತದೆ. ಹಾಗಾಗಿ ಈ ಬೇಸಿಗೆಯಲ್ಲಿ ನೀವು ದಿನನಿತ್ಯ ಸೌತೆಕಾಯಿ ಸೇವನೆ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ