AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಸುಡು ಬೇಸಿಗೆಯ ಸಮಯದಲ್ಲಿನ ತೀವ್ರ ಹವಾಮಾನ ವೈಪರಿತ್ಯದಿಂದಾಗಿ ದೇಹದ ತೇವಾಂಶ ಸಂಪೂರ್ಣವಾಗಿ ಕುಂದಿ ಹೋವಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಸಾಕಷ್ಟು ನೀರು ಕುಡಿಯುವುದು ತುಂಬಾನೇ ಮುಖ್ಯ. ನೀರಿನ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ಸುಡು ಬೇಸಿಗೆಯಲ್ಲಿ ನಿರ್ಜಲೀಕರಣದ ಸಮಸ್ಯೆಯಿಂದ ಪಾರಾಗಬಹುದು.

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು  ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ
ಸಾಂದರ್ಭಿಕ ಚಿತ್ರImage Credit source: vecteezy
ಮಾಲಾಶ್ರೀ ಅಂಚನ್​
|

Updated on: Mar 28, 2026 | 9:11 PM

Share

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು ಪ್ರಮಾಣದ ನೀರಿನಾಂಶವನ್ನು ಕಾಪಾಡಿಕೊಳ್ಳಬಹುದು.

ನಿರ್ಜಲೀಕರಣದಿಂದ ಪಾರಾಗಲು ಸೇವನೆ ಮಾಡಿ ಈ ಹಣ್ಣು:

ಕಿತ್ತಳೆ: ಕಿತ್ತಳೆ ಹಣ್ಣು ನೀರಿನಾಂಶದ ಉತ್ತಮ ಮೂಲವಾಗಿದ್ದು, ಇದು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಅವುಗಳ ಹೆಚ್ಚಿನ ನೀರಿನ ಅಂಶವು ಬಿಸಿ ವಾತಾವರಣದಲ್ಲಿ ದೇಹಕ್ಕೆ ಉತ್ತಮ ಜಲಸಂಚಯನವನ್ನು ಒದಗಿಸುತ್ತವೆ. ಇದಲ್ಲದೆ, ಇದರಲ್ಲಿರುವ ವಿಟಮಿನ್‌ ಸಿ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ

ಕಲ್ಲಂಗಡಿ: ಬೇಸಿಗೆಯಲ್ಲಿ  ನಿರ್ಜಲೀಕರಣ ಸಮಸ್ಯೆಯಿಂದ ಪಾರಾಗಲು ಮತ್ತು ದೇಹದಲ್ಲಿ  ನೀರಿನಂಶವನ್ನು ಕಾಪಾಡಿಕೊಳ್ಳಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡುವುದು ಉತ್ತಮ. ಇದರಲ್ಲಿ ಶೇಕಡಾ 92 ರಷ್ಟು ನೀರು ಇರುವುದರಿಂದ ಇದು ಬೇಸಿಗೆಗೆ ಸೂಕ್ತವಾದ ಹಣ್ಣಾಗಿದೆ. ಇದು ಜಲಸಂಚಯನವನ್ನು ಒದಗಿಸುವುದಲ್ಲದೆ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ.

ಸ್ಟ್ರಾಬೆರಿ: ತಿನ್ನಲು ರುಚಿಕರವಾಗಿರುವ ಸ್ಟ್ರಾಬೆರಿ ಉತ್ತಮ ಪ್ರಮಾಣದ ನೀರನ್ನು ಸಹ ಹೊಂದಿರುತ್ತವೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಸ್ಟ್ರಾಬೆರಿಗಳು  ಸ್ವತಂತ್ರ ರಾಡಿಕಲ್ ಹಾನಿ ಮತ್ತು ಶಾಖದಿಂದ ದೇಹವನ್ನು ರಕ್ಷಿಸುತ್ತವೆ.

ಇದನ್ನೂ ಓದಿ: ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್: ಅನಾನಸ್ ಬೇಸಿಗೆಯಲ್ಲಿ ಸೇವಿಸಬಹುದಾದ ಒಂದು ಉತ್ತಮ ಹಣ್ಣು. ಈ ಹಣ್ಣು ರುಚಿಕರವಾಗಿರುವುದಲ್ಲದೆ, ದೇಹಕ್ಕೆ ಜಲಸಂಚಯನವನ್ನೂ ಒದಗಿಸುತ್ತದೆ. ಇದಲ್ಲದೆ, ಅನಾನಸ್ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ.

ಸೌತೆಕಾಯಿ: ಸೌತೆಕಾಯಿಗಳು 96 ಪ್ರತಿಶತದಷ್ಟು ನೀರನ್ನು ಹೊಂದಿರುತ್ತವೆ, ಇದು ದೇಹಕ್ಕೆ ಉತ್ತಮ ಪ್ರಮಾಣದ ಜಲ ಸಂಚಯನವನ್ನು ಒದಗಿಸುತ್ತದೆ. ಹಾಗಾಗಿ ಈ ಬೇಸಿಗೆಯಲ್ಲಿ ನೀವು ದಿನನಿತ್ಯ ಸೌತೆಕಾಯಿ ಸೇವನೆ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್
ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ
ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ
ಐಪಿಎಲ್ ಪಂದ್ಯದ ಟಿಕೆಟ್‌ಗಳು ಮುಗಿದು ಮೂರು ದಿನಗಳಾಗಿವೆ
ಐಪಿಎಲ್ ಪಂದ್ಯದ ಟಿಕೆಟ್‌ಗಳು ಮುಗಿದು ಮೂರು ದಿನಗಳಾಗಿವೆ
ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು
ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು
ಜಮೀರ್​ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಮಲ್ಲಿಕಾರ್ಜುನ ಏನಂದ್ರು ನೋಡಿ
ಜಮೀರ್​ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಮಲ್ಲಿಕಾರ್ಜುನ ಏನಂದ್ರು ನೋಡಿ
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್