AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies : ಅವಧಿಗೂ ಮೊದಲೇ ತಿಂಗಳ ಮುಟ್ಟು ಆಗ್ಬೇಕಾ? ಇಲ್ಲಿದೆ ಸರಳ ಮನೆ ಮದ್ದು

ಹೆಣ್ಣು ಮಕ್ಕಳ ಮುಟ್ಟಿನ ದಿನಾಂಕವು ಏರುಪೇರಾಗುವುದು ಸಹಜ. ಹೀಗಾಗಿ ಕೆಲವೊಮ್ಮೆ ಅಂದುಕೊಂಡ ದಿನಾಂಕಕ್ಕೆ ಮುಟ್ಟು ಆಗದೇ ಇರಬಹುದು. ಮನೆಯಲ್ಲಿ ಪೂಜೆ ಹಾಗೂ ಶುಭಕಾರ್ಯಗಳು ಇದ್ದ ಸಮಯದಲ್ಲಿ ಈ ಸಮಸ್ಯೆಯೂ ಹೆಚ್ಚು ಕಾಡುತ್ತದೆ. ಹೀಗಾದಾಗ ಮಹಿಳೆಯರು ಬೇಗ ಮುಟ್ಟಾಗಲು ಅಥವಾ ಮುಂದಕ್ಕೆ ಹಾಕಲು ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಮನೆಯಲ್ಲೇ ಈ ಸರಳ ಮನೆಮದ್ದನ್ನು ಮಾಡಿಕೊಂಡರೆ ಸಮಯಕ್ಕಿಂತ ಮೊದಲು ಮುಟ್ಟಾಗುತ್ತದೆ.

Home Remedies : ಅವಧಿಗೂ ಮೊದಲೇ ತಿಂಗಳ ಮುಟ್ಟು ಆಗ್ಬೇಕಾ? ಇಲ್ಲಿದೆ ಸರಳ ಮನೆ ಮದ್ದು
ಸಾಯಿನಂದಾ
| Edited By: |

Updated on: Jun 04, 2024 | 4:20 PM

Share

ಹೆಣ್ಣು ಮಕ್ಕಳಲ್ಲಿ ಪ್ರತಿ ತಿಂಗಳು ಕಾಡುವ ಸಮಸ್ಯೆಗಳಲ್ಲಿ ಮುಟ್ಟಿನ ಸಮಸ್ಯೆಯೂ ಕೂಡ ಒಂದು. ಸ್ವಾಭಾವಿಕ ಪ್ರಕ್ರಿಯೆಯಾಗಿದ್ದರೂ ಕೂಡ ಮೂರು ದಿನಗಳ ಕಾಲ ನರಕಯಾತನೆಯನ್ನು ಅನುಭವಿಸುತ್ತಾರೆ. ತಿಂಗಳ ಮುಟ್ಟು ಯಾವಾಗ ಆಗುತ್ತದೆ ಎಂದು ತಿಳಿದಿರುತ್ತದೆ. ಆ ಸಮಯದಲ್ಲಿ ಮನೆಯಲ್ಲಿ ಪೂಜೆ ಹಾಗೂ ಶುಭಕಾರ್ಯಗಳಿದ್ದರೆ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಯಾಗುತ್ತದೆ ಎನ್ನುವ ಕಾರಣಕ್ಕೆ ಅದಕ್ಕಿಂತ ಮುಂಚೆ ಮುಟ್ಟಾಗಲು ಮಾತ್ರೆಗಳತ್ತ ಮೊರೆ ಹೋಗುವವರೇ ಹೆಚ್ಚು. ಆದರೆ ಈ ಮಾತ್ರೆಗಳು ಆರೋಗ್ಯಕ್ಕೆ ಮಾರಕವೆಂದು ತಿಳಿದಿದ್ದರೂ ಸೇವಿಸುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ

ಮುಟ್ಟು ಬೇಗ ಆಗಲು ಸರಳ ಮನೆ ಮದ್ದುಗಳಿವು

* ತಿಂಗಳ ಮುಟ್ಟು ಐದು ದಿನ ಮೊದಲೇ ಆಗಲು ಅರಿಶಿನ ಉತ್ತಮ ಔಷಧಿಯಾಗಿದೆ. ಮುಟ್ಟಿನ ದಿನಾಂಕಕ್ಕಿಂತ ಒಂದು ವಾರ ಮೊದಲು ಕುದಿಯುತ್ತಿರುವ ನೀರಿಗೆ ಒಂದು ಚಿಟಕಿ ಅರಿಶಿನ ಹಾಕಿ ಬೆಳಿಗ್ಗೆ ಹಾಗೂ ರಾತ್ರಿ ಕುಡಿಯುತ್ತ ಬಂದರೆ ಮುಟ್ಟು ಬೇಗನೇ ಆಗುತ್ತದೆ.

* ನಿಮ್ಮ ತಿಂಗಳ ಮುಟ್ಟು ಪ್ರಾರಂಭವಾಗುವ ಕೆಲವು ದಿನಗಳಿಗಿಂತ ಮುಂಚೆ ಕೊತ್ತಂಬರಿ ಬೀಜವನ್ನು ನೀರಿಗೆ ಹಾಕಿ ಕುದಿಸಿ, ದಿನಕ್ಕೆ ಮೂರು ಬಾರಿ ಕುಡಿಯಿರಿ.

* ಮುಟ್ಟಿನ ದಿನಾಂಕಕ್ಕಿಂತ ಹದಿನೈದು ದಿನ ಮುಂಚಿತವಾಗಿ ಬಿಸಿ ನೀರಿಗೆ ಸ್ವಲ್ಪ ಎಳ್ಳನ್ನು ಸೇರಿಸಿ ದಿನಕ್ಕೆ ಎರಡು ಬಾರಿ ಕುಡಿಯುತ್ತಿದ್ದರೆ ಬೇಗ ಮುಟ್ಟಾಗುತ್ತದೆ.

* ಮುಟ್ಟು ಹಿಂದೆ ಬರಲು ಶುಂಠಿ ರಸಕ್ಕೆ ಸ್ವಲ್ಪ ಸಕ್ಕರೆ ಬೆರೆಸಿ ಸೇವಿಸುವುದು ಪರಿಣಾಮಕಾರಿಯಾಗಿದೆ.

ಇದನ್ನೂ ಓದಿ: ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ

* ನಿಯಮಿತವಾಗಿ ಪಪ್ಪಾಯಿಯನ್ನು ಸೇವಿಸುವುದರಿಂದಲೂ ಮುಟ್ಟನ್ನು ಮುಂದೆ ಹೋಗುವಂತೆ ಮಾಡಬೇಕು.

* ತಿಂಗಳ ಮುಟ್ಟು ಬೇಗ ಆಗಲು ಮುಟ್ಟಿನ ದಿನಗಳಿಗಿಂತ ಮುಂಚಿತವಾಗಿ ರಾತ್ರಿಯಿಡೀ ಸೋಂಪು ಕಾಳನ್ನು ನೀರಿನಲ್ಲಿ ನೆನೆಸಿಟ್ಟು ಕುದಿಸಿ ಕುಡಿಯುವುದರಿಂದ ಅವಧಿಕ್ಕಿಂತ ಬೇಗನೇ ಮುಟ್ಟಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ