AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maneka Gandhi: ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಬಳಸಿದರೆ ಮಹಿಳೆಯ ದೇಹ ಸೌಂದರ್ಯ ದೀರ್ಘವಾಗಿರುತ್ತದೆ – ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ

Maneka Gandhi: ಕ್ಲಿಯೋಪಾತ್ರಾ ಅದರಲ್ಲೇ ಸ್ನಾನ ಮಾಡ್ತಾ ಇದ್ದಿದ್ದು! ಅದಕ್ಕೇ ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯ ದೇಹ ಸೌಂದರ್ಯವನ್ನು ಸುದೀರ್ಘ ಕಾಲ ಸುಂದರವಾಗಿಡುತ್ತದೆ -ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ

Maneka Gandhi: ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಬಳಸಿದರೆ ಮಹಿಳೆಯ ದೇಹ ಸೌಂದರ್ಯ ದೀರ್ಘವಾಗಿರುತ್ತದೆ - ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ
ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಮತ್ತು ಬಿಜೆಪಿ ಮಾಜಿ ಸಚಿವೆ ಮೇನಕಾ ಗಾಂಧಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 03, 2023 | 6:16 PM

ಈಜಿಪ್ಟಿನ ರಾಣಿ ಕ್ಲಿಯೋಪಾತ್ರಾ (Cleopatra) ಕತ್ತೆಯ ಹಾಲನ್ನು (donkey’s milk) ಮೈಮೇಲೆ ಸುರಿದುಕೊಂಡು ಸ್ನಾನ ಮಾಡುತ್ತಿದ್ದಳು. ಅದಕ್ಕೆ ಅವಳು ಸೌಂದರ್ಯದ ಖನಿಯಾಗಿದ್ದಳು. ಅದಕ್ಕೇ ಈಗಿನ ಕಾಲದ ಮಹಿಳೆಯರಿಗೂ ಅದು ಅನ್ವಯವಾಗುತ್ತದೆಂದು ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನನ್ನು ಬಳಸಿದರೆ ಮಹಿಳೆ ತನ್ನ ದೇಹ ಸಿರಿಯನ್ನು ಸುಂದರವಾಗಿಟ್ಟುಕೊಳ್ಳಬಹುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಮಾಜಿ ಸಚಿವೆ ಮೇನಕಾ ಗಾಂಧಿ (Maneka Gandhi) ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ (BJP) ಜೊತೆ ಗುರುತಿಸಿಕೊಂಡಿರುವ ಮನೇಕಾ ಗಾಂಧಿ, ಪ್ರಾಣಿ ಹಕ್ಕು ಹೋರಾಟಗಾರರಾಗಿಯೂ ಪ್ರಸಿದ್ಧಿ ಪಡೆದಿದ್ದಾರೆ.

ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆ ಹಾಲನ್ನು ಬಳಸುತ್ತದೆ. ಇದು ಮಹಿಳೆಯರ ಚರ್ಮವನ್ನು ಸುಂದರವಾಗಿಡುತ್ತದೆ ಎಂದು ಮೇನಕಾ ಗಾಂಧಿ ಹೇಳಿದ್ದಾರೆ. ಬಿಜೆಪಿ ಸಂಸದೆ ಮತ್ತು ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ಮಾಡಿದ ಭಾಷಣವು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ, ಅಲ್ಲಿ ಅವರು ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯ ದೇಹವನ್ನು ಸುಂದರವಾಗಿಡಲು ಸಹಾಯ ಮಾಡುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

Also Read:

ಕೋಟೆನಾಡಿನ ಮದ್ದೇರು ಗ್ರಾಮದ ಜಾತ್ರೆಯಲ್ಲಿ ಸಾವಿಗೀಡಾದ ಕತ್ತೆ: ದೇವರಂತೆ ಪೂಜಿಸಿ, ಭಾವಪೂರ್ಣ ಶ್ರದ್ದಾಂಜಲಿ!

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಚೌಪಾಲ್‌ ಯೋಜನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಈಜಿಪ್ಟ್‌ನ ರಾಣಿ ಕ್ಲಿಯೋಪಾತ್ರಾ ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದರು. ದೆಹಲಿಯಲ್ಲಿ ಕತ್ತೆ ಹಾಲಿನಿಂದ ತಯಾರಿಸಿದ ಸೋಪ್‌ಗಳು 500 ರೂ ದರದಲ್ಲಿದೆ ಎಂದು ತಿಳಿಸಿದರು. ಲಡಾಖ್‌ನಲ್ಲಿ ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುವ ಸಮುದಾಯದ ಕುರಿತು ಅವರು ಮಾತನಾಡಿದರು.

“ನೀವು ಕೊನೆಯ ಬಾರಿಗೆ ಕತ್ತೆಯನ್ನು ಯಾವಾಗ ನೋಡಿದ್ದೀರಿ? ಅವುಗಳ ಸಂಖ್ಯೆಯೇ ಕುಸಿಯುತ್ತಿದೆ. ಬಟ್ಟೆ ಒಗೆಯುವವರು ಕತ್ತೆಗಳ ಬಳಕೆಯನ್ನು ನಿಲ್ಲಿಸಿದ್ದಾರೆ. ಲಡಾಖ್‌ನಲ್ಲಿ ಈ ಸಮುದಾಯವು ಕತ್ತೆಗಳ ಸಂಖ್ಯೆಯಲ್ಲಿ ಕುಸಿತವನ್ನು ಕಾಣತೊಡಗಿದರು. ಆದ್ದರಿಂದ ಅವರು ಕತ್ತೆಯ ಹಾಲನ್ನು ಸಾಬೂನು ತಯಾರಿಸಲು ಪ್ರಾರಂಭಿಸಿದರು. ಕತ್ತೆಯ ಹಾಲಿನಿಂದ ತಯಾರಿಸಿದ ಸಾಬೂನುಗಳು ಮಹಿಳೆಯ ದೇಹವನ್ನು ಶಾಶ್ವತವಾಗಿ ಸುಂದರವಾಗಿ ಇಡುತ್ತದೆ ಎಂದು ಸಚಿವೆ ಮೇನಕಾ ಹೇಳಿದ್ರು. ಆದರೆ “ಪ್ರಾಣಿಗಳಿಂದ ಹಣ ಸಂಪಾದಿಸುವ” ಜನರ ವಿರುದ್ಧ ತಾನು ಬಲವಾಗಿ ನಿಲ್ಲುವುದಾಗಿ ಗಾಂಧಿ ಹೇಳಿದರು. ಮಾಜಿ ಕೇಂದ್ರ ಸಚಿವರು ಅನೇಕ ಪ್ರದೇಶಗಳಲ್ಲಿ ಶೀಘ್ರಗತಿಯಲ್ಲಿ ಅರಣ್ಯನಾಶ ಆಗುತ್ತಿರುವ ಬಗ್ಗೆಯೂ ಮಾತನಾಡಿದರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ