AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eid Milad Un Nabi 2023: ಈದ್ ಮಿಲಾದ್ ಹಬ್ಬದ ಮಹತ್ವ, ಆಚರಣೆಗಳ ಬಗ್ಗೆ ಇಲ್ಲಿದೆ ಮಾಹಿತಿ

ಮೌಲಿದ್ ಮತ್ತು ನಬಿದ್ ಎಂದೂ ಕರೆಯಲ್ಪಡುವ ಈದ್ ಮಿಲಾದ್- ಉನ್- ನಬಿ ಮುಸ್ಲಿಮರಿಗೆ ಮಹತ್ವದ ಹಬ್ಬವಾಗಿದ್ದು, ಈ ದಿನ ಪ್ರವಾದಿ ಮೊಹಮ್ಮದ್ ಅವರ ಜನ್ಮ ವಾರ್ಷಿಕೋತ್ಸವವನ್ನು ನೆನಪಿಸುತ್ತದೆ. ರಬಿ ಉಲ್ ಅವ್ವಾಲ್ ನ 12ನೇ ದಿನದಂದು ಆಚರಿಸಲಾಗುವ ಇದನ್ನು ವಿಶ್ವಾದ್ಯಂತ ಬಹಳ ಉತ್ಸಾಹ ಮತ್ತು ಸಂತೋಷದಿಂದ ಆಚರಿಸಲಾಗುತ್ತದೆ. ಹಬ್ಬ ಯಾವಾಗ? ಮಹತ್ವ ಮತ್ತು ಆಚರಣೆಗಳ ಬಗ್ಗೆ ಇಲ್ಲಿದೆ ಮಾಹಿತಿ.

Eid Milad Un Nabi 2023: ಈದ್ ಮಿಲಾದ್ ಹಬ್ಬದ ಮಹತ್ವ, ಆಚರಣೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 28, 2023 | 1:06 PM

ಪವಿತ್ರ ಇಸ್ಲಾಮಿಕ್ ಹಬ್ಬವಾದ ಈದ್ ಮಿಲಾದ್ ನ್ನು ಪ್ರಪಂಚದಾದ್ಯಂತದ ಮುಸ್ಲಿಮರು ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಚರಿಸಲು ಸಿದ್ಧರಾಗುತ್ತಿದ್ದಾರೆ. ಪ್ರವಾದಿ ಮೊಹಮ್ಮದರ ಜನ್ಮದಿನವನ್ನು ಈದ್ ಮಿಲಾದ್ ಹಬ್ಬವಾಗಿ ಮುಸ್ಲಿಮರು ಆಚರಿಸುತ್ತಾರೆ. ಸೆಪ್ಟೆಂಬರ್ 16 ರಿಂದ ಶುರುವಾದ ಆಚರಣೆ ಸೆಪ್ಟೆಂಬರ್ 27 ಮತ್ತು 28ರಂದು ಅಂತ್ಯಗೊಳ್ಳುತ್ತದೆ. ಈ ದಿನವನ್ನು ಮಾವ್ಲಿದ್ ಮತ್ತು ನಬಿದ್ ಎಂದೂ ಕರೆಯಲಾಗುತ್ತದೆ. ಈ ದಿನವು ಪ್ರತಿ ವರ್ಷ ರಬಿ ಉಲ್ ಅವಾಲ್ ಸಮಯದಲ್ಲಿ ಬರುತ್ತದೆ. ಈ ವರ್ಷ, ಈದ್ ಮಿಲಾದ್ ಹಬ್ಬವನ್ನು ಸೆಪ್ಟೆಂಬರ್ 28, 2023 ರಂದು ಆಚರಿಸಲಾಗುತ್ತದೆ. ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶದಂತಹ ಇತರ ದೇಶಗಳು ಸೆಪ್ಟೆಂಬರ್ 28 ರಂದು ಈದ್ ಮಿಲಾದ್- ಉನ್- ನಬಿಯನ್ನು ಆಚರಿಸಲಿವೆ. ಸೌದಿ ಅರೇಬಿಯಾದಲ್ಲಿ ಮಾತ್ರ ಈದ್ ಎ ಮಿಲಾದ್ ಅನ್ನು ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ.

ಈದ್- ಎ- ಮಿಲಾದ್ ಮಹತ್ವ:

ಈದ್- ಎ- ಮಿಲಾದ್ ಮುಸ್ಲಿಂ ಸಮುದಾಯದ ಜನರಲ್ಲಿ ಹೆಚ್ಚಿನ ಧಾರ್ಮಿಕ ಮಹತ್ವವನ್ನು ಹೊಂದಿದೆ. ಈ ದಿನವನ್ನು ಪ್ರಪಂಚದಾದ್ಯಂತದ ಎಲ್ಲಾ ಮುಸ್ಲಿಮರು ಬಹಳ ಉತ್ಸಾಹ ಮತ್ತು ಸಂತೋಷದಿಂದ ಆಚರಿಸುತ್ತಾರೆ. ಈದ್ ಮಿಲಾದ್ ಉನ್ ನಬಿಯನ್ನು ಇಸ್ಲಾಮಿಕ್ ಕ್ಯಾಲೆಂಡರ್ ನ ಮೂರನೇ ತಿಂಗಳಾದ ರಬಿ ಉಲ್ ಅವ್ವಾಲ್ ನ 12 ನೇ ದಿನದಂದು ಆಚರಿಸಲಾಗುತ್ತದೆ. ಈ ದಿನವು ಪ್ರವಾದಿ ಮೊಹಮ್ಮದ್ ಅವರ ಜನ್ಮದಿನವನ್ನು ಸೂಚಿಸುತ್ತದೆ. ಈ ದಿನವು ಪವಿತ್ರ ಪ್ರವಾದಿಯ ದಯೆ, ಸಹಾನುಭೂತಿ ಮತ್ತು ಬೋಧನೆಗಳನ್ನು ನೆನಪಿಸುವುದರಿಂದ ಈ ದಿನವನ್ನು ಅತ್ಯಂತ ಶುಭ ದಿನವೆಂದು ಪರಿಗಣಿಸಲಾಗಿದೆ. ಈ ಹಬ್ಬವನ್ನು ಶಿಯಾ ಮತ್ತು ಸುನ್ನಿ ಮುಸ್ಲಿಮರು ವಿಭಿನ್ನ ದಿನಾಂಕಗಳಲ್ಲಿ ಆಚರಿಸುತ್ತಾರೆ. ಸುನ್ನಿ ಮುಸ್ಲಿಮರು ಇಸ್ಲಾಮಿಕ್ ಧರ್ಮದ 12 ನೇ ದಿನದಂದು ಈ ದಿನವನ್ನು ಆಚರಿಸಿದರೆ, ಶಿಯಾ ಮುಸ್ಲಿಮರು ರಬಿ ಉಲ್ ಅವ್ವಾಲ್ ನ 17 ನೇ ದಿನದಂದು ಈ ದಿನವನ್ನು ಆಚರಿಸುತ್ತಾರೆ.

ಈದ್ ಮಿಲಾದ್ ಉನ್ ನಬಿಯನ್ನು ಹೇಗೆ ಆಚರಿಸುತ್ತಾರೆ?

ಜನರು ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ತಯಾರಿಯನ್ನು ಪ್ರಾರಂಭಿಸುತ್ತಾರೆ. ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸುಂದರ ವರ್ಣರಂಜಿತ ದೀಪಗಳು ಮತ್ತು ಧ್ವಜಗಳಿಂದ ಅಲಂಕರಿಸುತ್ತಾರೆ. ಅಲ್ಲದೆ ಈ ದಿನವನ್ನು ಬಹಳ ಆಡಂಭರದಿಂದ ಆಚರಿಸುತ್ತಾರೆ, ಹಸಿರು ಬಣ್ಣವು ಇಸ್ಲಾಂ ಅನ್ನು ಸೂಚಿಸುವುದರಿಂದ ಅವರು ತಮ್ಮ ಕೈಯಲ್ಲಿ ಹಸಿರು ಬ್ಯಾಂಡ್ಗಳನ್ನು ಕಟ್ಟುತ್ತಾರೆ. ಹೊಸ ಬಟ್ಟೆಗಳನ್ನು ಧರಿಸುವುದು, ಸಿಹಿ ತಿಂಡಿಗಳನ್ನು ವಿತರಿಸುವುದು ಮತ್ತು ಮಸೀದಿಗೆ ಭೇಟಿ ನೀಡುವುದು ಈ ದಿನದ ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ. ಮುಸ್ಲಿಂ ಜನರು ಈ ದಿನ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ ಮತ್ತು ಅಲ್ಲಾಹನ ಆಶೀರ್ವಾದವನ್ನು ಪಡೆಯುತ್ತಾರೆ. ಮಹಿಳೆಯರು ಶೀರ್ ಖುರ್ಮಾ ಮತ್ತು ಸೇವಾಯನ್ ನಂತಹ ವಿವಿಧ ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತಾರೆ. ಜೊತೆಗೆ ತಮ್ಮ ಸಂಬಂಧಿಕರನ್ನು ಮನೆಗೆ ಆಹ್ವಾನಿಸಿ ಅವರೊಂದಿಗೆ ಈ ದಿನವನ್ನು ಆಚರಿಸುತ್ತಾರೆ. ಕೆಲವರು ಅಲ್ಲಾಹನನ್ನು ಪೂಜಿಸಲು ಮತ್ತು ಆಶೀರ್ವಾದ ಪಡೆಯಲು ಹಾಜಿ ಅಲಿ ದರ್ಗಾ, ಜಮಾ ಮಜ್ಜಿದ್, ನಿಜಾಮುದ್ದೀನ್ ಔಲಿಯಾ, ಅಜ್ಮೀರ್ ಶರೀಫ್ ನಂತಹ ಪ್ರಮುಖ ಮತ್ತು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಾರೆ.

ಇದನ್ನೂ ಓದಿ:ಈದ್ ಮಿಲಾದ್ ಉನ್ ನಬಿ ದಿನದ ಮಹತ್ವ ಮತ್ತು ಆಚರಣೆ ಹೇಗೆ?

ಈ ಪವಿತ್ರ ದಿನದಂದು ದಾನ ಮಾಡುವುದು ಹೆಚ್ಚು ಲಾಭದಾಯಕವೆಂದು ಪರಿಗಣಿಸಲಾಗಿದೆ. ಪ್ರವಾದಿ ಮುಹಮ್ಮದ್ ದಯೆ ಮತ್ತು ಮಾನವೀಯತೆಯಲ್ಲಿ ನಂಬಿಕೆ ಇಟ್ಟಿದ್ದರು ಹಾಗಾಗಿ ಅಲ್ಲಾಹನಿಗೆ ನಿಜವಾಗಿಯೂ ಸಮರ್ಪಿತರಾಗಿರುವ ಜನರು, ದೇಣಿಗೆಗಳನ್ನು ನೀಡುತ್ತಾರೆ ಮತ್ತು ಅಗತ್ಯವಿರುವ ಬಡ ಜನರಿಗೆ ದಾನ ಮಾಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?