AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ, ಬಲಿದಾನ, ಅಚಲ ದೈವಭಕ್ತಿ ಹಾಗೂ ಅವರ ಪುತ್ರ ಹಜರತ್ ಇಸ್ಮಾಯಿಲ್ ಅವರ ದೈವಭಕ್ತಿಯನ್ನು ಸಾಂಕೇತಿಸುವ ದಿನವಾಗಿದೆ. ಈ ಬಕ್ರೀದ್ ಹಬ್ಬದಂದು ತ್ಯಾಗ-ಬಲಿದಾನವನ್ನು ಸ್ಮರಿಸಲಾಗುತ್ತದೆ. ಹಾಗಾದ್ರೆ ಈ ಬಕ್ರೀದ್ ಹಬ್ಬದ ವಿಶೇಷತೆ ಹಾಗೂ ಮಹತ್ವದ ಬಗೆಗಿನ ಮಾಹಿತಿ ಇಲ್ಲಿದೆ.

Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ 'ಬಕ್ರೀದ್ ' ಏನಿದರ ವಿಶೇಷತೆ?
Bakrid 2024
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Jun 16, 2024 | 4:11 PM

Share

ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಕೂಡ ಒಂದು. ಈ ಹಬ್ಬವನ್ನು ಈದ್-ಉಲ್-ಅಜಾ ಎಂದೂ ಕರೆಯುತ್ತಾರೆ. ರಂಜಾನ್ ಮುಗಿದ 70 ದಿನಗಳ ನಂತರ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ ಈ ಹಬ್ಬವನ್ನು ಇಸ್ಲಾಮಿಕ್ ಕ್ಯಾಲೆಂಡರ್‌ನ ಕೊನೆಯ ತಿಂಗಳ ಜು-ಅಲ್-ಹಿಜ್‌ನಲ್ಲಿ ಆಚರಿಸಲಾಗುತ್ತದೆ. ಆದರೆ ಈ ಈದ್-ಉಲ್-ಅದಾ ಆಚರಣೆಗೆ ನಿರ್ದಿಷ್ಟ ದಿನಾಂಕ ಎಂಬುದಿಲ್ಲ ಚಂದ್ರನು ಗೋಚರಿಸಿದ ನಂತರವೇ ಬಕ್ರೀದ್ ಆಚರಿಸುವ ಸಂಪ್ರದಾಯವಿದೆ. ಈ ಬಾರಿ ಬಕ್ರೀದ್ ಹಬ್ಬವನ್ನು ಜೂನ್ 17ರ ಸೋಮವಾರದಂದು ಆಚರಿಸಲಾಗುತ್ತಿದೆ.

ಬಕ್ರೀದ್ ಹಬ್ಬದ ಇತಿಹಾಸ:

ಬಕ್ರೀದ್ ಆಚರಣೆಯ ಹಿಂದೆ ಹಜರತ್ ಇಬ್ರಾಹಿಂ ಅವರ ತ್ಯಾಗ ಬಲಿದಾನದ ಕಥೆಯಿದೆ. ಹಜರತ್ ಇಬ್ರಾಹಿಂ ಎನ್ನುವವರು ದೇವರ ಮೇಲೆ ಅಪಾರ ನಂಬಿಕೆಯನ್ನು ಹೊಂದಿದ್ದ ವ್ಯಕ್ತಿಯಾಗಿದ್ದರು. ಹೀಗಿರುವಾಗ ಒಂದೊಮ್ಮೆ ಹಜರತ್ ಇಬ್ರಾಹಿಂ ತನ್ನ ಮಗನನ್ನು ತ್ಯಾಗ ಮಾಡುತ್ತಿದ್ದಾನೆ ಎಂದು ಕನಸು ಕಾಣುತ್ತಾನೆ. ಕನಸನ್ನು ಸಂದೇಶವೆಂದು ಭಾವಿಸಿ, ತನ್ನ ಮಗನನ್ನು ಬಲಿ ಕೊಡಲು ಮುಂದಾಗುತ್ತಾನೆ. ಆದರೆ ದೇವರು ಮಗನ ಬದಲು ಪ್ರಾಣಿಯನ್ನು ಬಲಿ ಕೊಡುವ ಸಂದೇಶವನ್ನು ನೀಡುತ್ತಿದ್ದಂತೆ, ಮಗನ ಬದಲಿಗೆ ತನ್ನ ಪ್ರೀತಿಯ ಕುರಿ ಮರಿಯನ್ನು ಬಲಿ ನೀಡುತ್ತಾನೆ. ಇದನ್ನು ಬಕ್ರಾ-ಈದ್’ ಅಂದರೆ ಬಕ್ರೀದ್ ಎಂದು ಕರೆಯಲಾಗುತ್ತದೆ. ಈ ಕಾರಣದಿಂದಲೇ ಈದ್-ಉಲ್-ಅಜಾ ದಿನದಂದು ಮೇಕೆಯನ್ನು ಬಲಿಕೊಡುವ ಸಂಪ್ರದಾಯವು ಪ್ರಾರಂಭವಾಯಿತು ಎನ್ನಬಹುದು.

ಇದನ್ನೂ ಓದಿ: ಅಪ್ಪಂದಿರ ದಿನವನ್ನು ವಿಶೇಷವಾಗಿ ಆಚರಿಸಿ, ನಿಮ್ಮ ತಂದೆಯನ್ನು ಖುಷಿಪಡಿಸಿ

ಬಕ್ರೀದ್ ಹಬ್ಬದ ಸಂಪ್ರದಾಯ ಹಾಗೂ ಆಚರಣೆ ಹೇಗೆ?

ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಈ ದಿನದಂದು ಮುಸ್ಲಿಂ ಬಾಂಧವರು ಬೆಳಿಗ್ಗೆ ಎದ್ದು ನಮಾಜ್ ಮಾಡಲು ಹೋಗುತ್ತಾರೆ. ಮುಸ್ಲಿಂರ ಈ ಹಬ್ಬದಂದು ತಮ್ಮ ಮನೆಗಳಲ್ಲಿ ಸಾಕಿರುವ ಅಥವಾ ಹಬ್ಬಕ್ಕೆ ಕೆಲವೇ ದಿನವಿರುವಾಗಲೇ ತಂದ ಮೇಕೆಗಳನ್ನು ಬಲಿ ಕೊಡುವ ಪದ್ಧತಿಯಿದೆ. ಮೇಕೆಯನ್ನು ಬಲಿ ಕೊಟ್ಟ ಬಳಿಕ, ಈ ಮಾಂಸವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗುತ್ತದೆ. ಮೊದಲ ಭಾಗವನ್ನು ಸಂಬಂಧಿಕರು, ಸ್ನೇಹಿತರು ಮತ್ತು ನೆರೆಹೊರೆಯವರಿಗೆ ನೀಡಲಾಗುತ್ತದೆ. ಎರಡನೆಯ ಭಾಗವನ್ನು ಬಡವರು ಮತ್ತು ನಿರ್ಗತಿಕರಿಗೆ ಹಾಗೂ ಮೂರನೇ ಭಾಗವನ್ನು ಕುಟುಂಬದವರು ಇಟ್ಟುಕೊಳ್ಳುತ್ತಾರೆ. ಈ ದೇವರ ಪ್ರಸಾದವನ್ನು ಅಡುಗೆ ಮಾಡಿ ಕುಟುಂಬ ಸದಸ್ಯರು ಸವಿದು ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: