AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂಗಾತಿ ಯಾವಾಗ್ಲೂ ಎಮೋಷನಲ್ ಬ್ಲ್ಯಾಕ್​ಮೇಲ್ ಮಾಡ್ತಾರಾ? ಇದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

Emotional Blackmail: ಪ್ರತಿಯೊಂದು ವಿಚಾರದಲ್ಲೂ ಸಂಗಾತಿ ನಿಮ್ಮನ್ನು ಬ್ಲ್ಯಾಕ್​ಮೇಲ್ ಮಾಡುತ್ತಿದ್ದರೆ ಅದು ನಿಮ್ಮ ಮಾನಸಿಕ ಆರೋಗ್ಯವನ್ನು ಹದಗೆಡಿಸಬಹುದು. ನೀವು ಆರ್ಥಿಕವಾಗಿ ಸದೃಢರಾಗಿ ಬೇರೆಯವರ ಮೇಲೆ ಅವಲಂಬಿತವಾಗುವುದನ್ನು ತಪ್ಪಿಸಿದರೆ ನೀವು ಜೀವನದಲ್ಲಿ ಸಂತೋಷವಾಗಿರಬಹುದು.

ನಿಮ್ಮ ಸಂಗಾತಿ ಯಾವಾಗ್ಲೂ ಎಮೋಷನಲ್ ಬ್ಲ್ಯಾಕ್​ಮೇಲ್ ಮಾಡ್ತಾರಾ? ಇದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
ನಯನಾ ರಾಜೀವ್
|

Updated on: May 28, 2024 | 3:10 PM

Share

ನೀವು ಹೊಂದಾಣಿಕೆ ಮಾಡಿಕೊಳ್ಳುವುದರಿಂದ ಜೀವನ ಪೂರ್ತಿ ಸಂಗಾತಿ ಜತೆಗೆ ಸಂತೋಷವಾಗಿಬಹುದು ಎಂಬುದು ನಿಜ, ಆದ್ರೆ ಎಲ್ಲಾ ವಿಚಾರಗಳಲ್ಲಿ ಅಲ್ಲ. ನೀವು ಒತ್ತಾಯಪೂರ್ವಕವಾಗಿ ಹೊಂದಾಣಿಕೆ ಮಾಡಿಕೊಂಡಲ್ಲಿ ಒಂದಲ್ಲಾ ಒಂದು ದಿನ ನಿಮ್ಮಲ್ಲಿರುವ ಭಾವನೆ ಚಿಮ್ಮುತ್ತದೆ ಆಗ ನಿಮ್ಮನ್ನು ನೀವು ನಿಯಂತ್ರಿಸುವುದು ಕಷ್ಟವಾಗಬಹುದು.

ಸಂಗಾತಿ ಹೇಳಿದ್ದೆಲ್ಲವನ್ನೂ ಸರಿ ಎಂದು ಹೇಳಿ ತಲೆ ಅಲ್ಲಾಡಿಸುವ ಅಗತ್ಯವಿಲ್ಲ, ಅವರು ಸರಿ ಇದ್ದಾಗ ಅವರು, ನೀವು ಸರಿ ಎಂದೆನಿಸಿದಾಗ ನೀವು ಮಾತನಾಡುವುದು ಉತ್ತಮ. ಇಬ್ಬರ ಹೊಂದಾಣಿಕೆ ಇಲ್ಲಿ ಮುಖ್ಯವಾಗುತ್ತದೆ. ಈ ಎಮೋಷನಲ್​ ಬ್ಲ್ಯಾಕ್​ಮೇಲ್​(Emotional Blackmail) ನಿಮ್ಮ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಹೀಗಾಗಿ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ.

ನಿಮ್ಮ ಕಾಳಜಿ ನೀವು ನೋಡಿಕೊಳ್ಳಿ ಇತರರ ಬಗ್ಗೆ ಚಿಂತಿಸುವ ಮೊದಲು ನಿಮ್ಮ ಬಗ್ಗೆ ನೀವು ಕಾಳಜಿ ಮಾಡುವುದು ಉತ್ತಮ. ಕೆಲವೊಮ್ಮೆ ಇಲ್ಲ ಆಗುವುದಿಲ್ಲ ಎಂದು ಹೇಳುವುದನ್ನೂ ಕಲಿಯಿರಿ.

ನಿಮ್ಮ ಪ್ರಾಮುಖ್ಯತೆ ಅರ್ಥ ಮಾಡಿಕೊಳ್ಳಿ ಪ್ರತಿಯೊಬ್ಬ ವ್ಯಕ್ತಿಯು ವಿಭಿನ್ನ ಮಹತ್ವಾಕಾಂಕ್ಷೆಯನ್ನು ಹೊಂದಿರುತ್ತಾನೆ. ಅದನ್ನು ಜೀವನದಲ್ಲಿ ತ್ಯಾಗ ಮಾಡಲು ಸಾಧ್ಯವಿಲ್ಲ, ನಿಮ್ಮ ಆಸೆ, ಆಕಾಂಕ್ಷೆಗಳ ಮೇಲೆ ಕೇಂದ್ರೀಕರಿಸಿ, ನಿಮ್ಮ ಸಂಗಾತಿಕ ನಕಾರಾತ್ಮಕ ಮನೋಭಾವದಿಂದ ನಿಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಬೇಡಿ. ಪ್ರತಿ ತಪ್ಪಿಗೆ ನಿಮ್ಮನ್ನು ದೂಷಿಸಬೇಡಿ.

ಮತ್ತಷ್ಟು ಓದಿ: Social media: ಯುವ ಜನತೆಯಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಕಾರಣವೇ?

ಸ್ವತಂತ್ರರಾಗಿ ನೀವು ಎಲ್ಲದಕ್ಕೂ ನಿಮ್ಮ ಸಂಗಾತಿಯ ಮೇಲೆ ಅವಲಂಬಿತರಾಗಿದ್ದಾಗ ಅವರು ನಿಮ್ಮನ್ನು ಲಘುವಾಗಿ ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ. ಎಲ್ಲಾ ಬಾರಿಯೂ ಆರೋಪಗಳು ನಿಮ್ಮ ಮೇಲೆ ಬಾರದಂತೆ ರಕ್ಷಿಸಿಕೊಳ್ಳಿ. ಆರ್ಥಿಕವಾಗಿ ಸ್ವತಂತ್ರರಾಗುವುದರಿಂದ ನಿಮ್ಮ ಜೀವನದಲ್ಲಿ ನೀವು ಸುಲಭವಾಗಿ ಸಣ್ಣ ನಿರ್ಧಾರಗಳನ್ನು ತೆಗದುಕೊಳ್ಳಲು ಸಾಧ್ಯವಾಗುತ್ತದೆ ಮತ್ತು ನಿಮ್ಮ ಸಂಗಾತಿ ನಿಮಗೆ ಬ್ಲ್ಯಾಕ್​ ಮೇಲ್ ಮಾಡುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ನಿಮ್ಮ ಸಂಗಾತಿಯ ಮಿತಿಯನ್ನು ನೆನಪಿಸಿ ನಿಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸಲು ಘಟನೆಗಳು ನಡೆಯುತ್ತಿದ್ದಾಗ ನಿಮ್ಮ ಸಂಗಾತಿಯ ಮಿತಿಯನ್ನು ಒಮ್ಮೆ ನೆನಪಿಸಿ.

ನಿಮ್ಮ ಇಚ್ಛೆಗೆ ಪ್ರಾಮುಖ್ಯತೆ ನೀಡಿ ಪ್ರತಿ ಕೆಲಸಕ್ಕೂ ನಿಮ್ಮ ಸಂಗಾತಿಯಿಂದ ಅನುಮತಿ ತೆಗೆದುಕೊಳ್ಳುವುದರಿಂದ ಅವರ ಮೇಲೆ ಅವಲಂಬಿತವಾಗುತ್ತೀರಿ. ವ್ಯಕ್ತಿ ಸ್ವಂತ ಆಸೆ, ಆಕಾಂಕ್ಷೆಗಳನ್ನು ಮರೆತುಬಿಡುತ್ತೀರಿ. ನಿಮ್ಮ ಸಂಗಾತಿಯ ಇಚ್ಛೆಯ ಪ್ರಕಾರ ಪ್ರತಿಯೊಂದು ಕೆಲಸ ಮಾಡುವುದನ್ನು ನಿಲ್ಲಿಸಿ.

ಹೆಚ್ಚು ಹೊರೆ ಮಾಡಿಕೊಳ್ಳಬೇಡಿ ಪ್ರತಿಯೊಂದು ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೊರೆಯನ್ನು ಹೆಚ್ಚಿಸಿಕೊಳ್ಳಬೇಡಿ. ಆರೋಗ್ಯಕರವಾಗಿರಲು ಪ್ರಯತ್ನಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ