AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Energy Boosting food : ಕೆಲಸ ಮಾಡಿ ಸುಸ್ತಾಗಿದ್ದರೆ ದೇಹಕ್ಕೆ ಎನರ್ಜಿ ಕೊಡುತ್ತೆ ಈ ಆಹಾರ! ಒಮ್ಮೆ ಸೇವಿಸಿ ನೋಡಿ

ಇತ್ತೀಚೆಗಿನ ದಿನಗಳಲ್ಲಿ ಎಲ್ಲರದ್ದೂ ಒತ್ತಡ ತುಂಬಿದ ಬದುಕು, ಆರೋಗ್ಯ ಹಾಗೂ ಆಹಾರದ ಬಗ್ಗೆ ಗಮನವೇ ಇಲ್ಲ. ಸ್ವಲ್ಪವು ಬಿಡುವಿಲ್ಲದೆ ದುಡಿಯುವ ಕಾರಣ ಆಗಾಗ ಸುಸ್ತು, ಆಯಾಸ ಸೇರಿದಂತೆ ಆರೋಗ್ಯ ಸಮಸ್ಯೆಗಳು ಕಾಡುತ್ತಿರುತ್ತದೆ. ಕೆಲವೊಮ್ಮೆ ಕೆಲಸ ಮಾಡಿ ದಣಿವಾದಾಗ ಮಾತನಾಡಲು ತ್ರಾಣವಿಲ್ಲದಂತಾಗುತ್ತದೆ. ಹೀಗಾದಾಗ ಈ ಆಹಾರವನ್ನು ಸೇವಿಸಿದರೆ ಮತ್ತೆ ಎನರ್ಜಿಯನ್ನು ಮರಳಿ ಪಡೆಯಬಹುದು.

Energy Boosting food : ಕೆಲಸ ಮಾಡಿ ಸುಸ್ತಾಗಿದ್ದರೆ ದೇಹಕ್ಕೆ ಎನರ್ಜಿ ಕೊಡುತ್ತೆ ಈ ಆಹಾರ! ಒಮ್ಮೆ ಸೇವಿಸಿ ನೋಡಿ
ಸಾಯಿನಂದಾ
| Edited By: |

Updated on: Jun 03, 2024 | 3:47 PM

Share

ಕೆಲಸ ಮಾಡಿ ಸುಸ್ತೋ ಸುಸ್ತು ಎನ್ನುವವರನ್ನು ನೋಡುತ್ತಿರುತ್ತೇವೆ. ವಿಶ್ರಾಂತಿ, ಆಹಾರ ಹಾಗೂ ನಿದ್ದೆಯ ಕೊರತೆಯು ಇದಕ್ಕೆ ಮುಖ್ಯ ಕಾರಣವಾಗಿರಬಹುದು. ಪೋಷಕಾಂಶಭರಿತ ಆಹಾರ ಸೇವಿಸಿದರೆ ದೇಹಕ್ಕೆ ಶಕ್ತಿ ಸಿಗುತ್ತದೆ ಕೆಲಸ ಮಾಡಲು ದೇಹ ಹಾಗೂ ಮನಸ್ಸು ಸಿದ್ಧವಾಗುತ್ತದೆ. ಬಿಡುವಿಲ್ಲದೆ ಕೆಲಸ ಮಾಡಿ ಸುಸ್ತಾದಾಗ ಈ ಆಹಾರಗಳನ್ನು ಸೇವಿಸಿದರೆ ಸದಾ ಉಲ್ಲಾಸದಿಂದಿರಬಹುದು.

* ಬಾಳೆಹಣ್ಣು : ಬಾಳೆಹಣ್ಣಿನಲ್ಲಿ ಸುಕ್ರೋಸ್, ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶಗಳು ಸೇರಿವೆ. ಹೀಗಾಗಿ ಪ್ರತಿ ನಿತ್ಯ ಬಾಳೆಹಣ್ಣು ಸೇವನೆ ಮಾಡುತ್ತ ಬಂದರೆ ಆಯಾಸವನ್ನು ದೂರವಾಗಿಸಿ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

* ಖರ್ಜೂರ: ಪ್ರತಿದಿನ 2-3 ಖರ್ಜೂರಗಳನ್ನು ಸೇವಿಸುವುದರಿಂದ ದೇಹಕ್ಕೆ ಉತ್ತಮ ಶಕ್ತಿ ದೊರೆಯುವುದಲ್ಲದೆ ಆಯಾಸ ಸುಸ್ತನ್ನು ದೂರ ಮಾಡಿ ದೇಹಕ್ಕೆ ಚೈತನ್ಯ ನೀಡುತ್ತದೆ.

* ಮೊಟ್ಟೆ : ಮೊಟ್ಟೆಯಲ್ಲೂ ಪ್ರೋಟೀನ್, ಆರೋಗ್ಯಕರ ಕೊಬ್ಬು, ಕೋಲೀನ್, ಕಬ್ಬಿಣ, ವಿಟಮಿನ್ ಡಿ ಮತ್ತು ಬಿ12 ಪೌಷ್ಟಿಕಾಂಶಗಳು ಹೇರಳವಾಗಿದ್ದು, ಆರೋಗ್ಯಕ್ಕೂ ಒಳ್ಳೆಯದು. ಪ್ರತಿ ನಿತ್ಯ ಮೊಟ್ಟೆ ಸೇವಿಸುತ್ತಿದ್ದರೆ, ದೇಹಕ್ಕೆ ಶಕ್ತಿಯು ಸಿಗುತ್ತದೆ. ಇದರಿಂದ ಸದಾ ಲವಲವಿಕೆಯಿಂದಿರಲು ಸಾಧ್ಯ.

ಇದನ್ನೂ ಓದಿ: ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್

* ಬೀಟ್ ರೂಟ್ : ಬೀಟ್ ರೂಟ್ ನಲ್ಲಿ ನೈಟ್ರೇಟ್ ಸಮೃದ್ಧವಾಗಿದ್ದು, ಇದರ ಸೇವನೆಯು ಜೀವಕೋಶಗಳನ್ನು ಉತ್ತಮಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತದೆ.

* ಮೊಸರು : ಮೊಸರಿನಲ್ಲಿ ಪ್ರೋಟೀನ್ ಮತ್ತು ವಿಟಮಿನ್ ಬಿ 12 ನಲ್ಲಿ ಸಮೃದ್ಧವಾಗಿರುವ ತ್ವರಿತ ಶಕ್ತಿ ವರ್ಧಕ ಆಹಾರವಾಗಿದೆ. ನಿಯಮಿತವಾಗಿ ಮೊಸರನ್ನು ಸೇವಿಸಿದರೆ ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ