AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Energy Boosting food : ಕೆಲಸ ಮಾಡಿ ಸುಸ್ತಾಗಿದ್ದರೆ ದೇಹಕ್ಕೆ ಎನರ್ಜಿ ಕೊಡುತ್ತೆ ಈ ಆಹಾರ! ಒಮ್ಮೆ ಸೇವಿಸಿ ನೋಡಿ

ಇತ್ತೀಚೆಗಿನ ದಿನಗಳಲ್ಲಿ ಎಲ್ಲರದ್ದೂ ಒತ್ತಡ ತುಂಬಿದ ಬದುಕು, ಆರೋಗ್ಯ ಹಾಗೂ ಆಹಾರದ ಬಗ್ಗೆ ಗಮನವೇ ಇಲ್ಲ. ಸ್ವಲ್ಪವು ಬಿಡುವಿಲ್ಲದೆ ದುಡಿಯುವ ಕಾರಣ ಆಗಾಗ ಸುಸ್ತು, ಆಯಾಸ ಸೇರಿದಂತೆ ಆರೋಗ್ಯ ಸಮಸ್ಯೆಗಳು ಕಾಡುತ್ತಿರುತ್ತದೆ. ಕೆಲವೊಮ್ಮೆ ಕೆಲಸ ಮಾಡಿ ದಣಿವಾದಾಗ ಮಾತನಾಡಲು ತ್ರಾಣವಿಲ್ಲದಂತಾಗುತ್ತದೆ. ಹೀಗಾದಾಗ ಈ ಆಹಾರವನ್ನು ಸೇವಿಸಿದರೆ ಮತ್ತೆ ಎನರ್ಜಿಯನ್ನು ಮರಳಿ ಪಡೆಯಬಹುದು.

Energy Boosting food : ಕೆಲಸ ಮಾಡಿ ಸುಸ್ತಾಗಿದ್ದರೆ ದೇಹಕ್ಕೆ ಎನರ್ಜಿ ಕೊಡುತ್ತೆ ಈ ಆಹಾರ! ಒಮ್ಮೆ ಸೇವಿಸಿ ನೋಡಿ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 03, 2024 | 3:47 PM

Share

ಕೆಲಸ ಮಾಡಿ ಸುಸ್ತೋ ಸುಸ್ತು ಎನ್ನುವವರನ್ನು ನೋಡುತ್ತಿರುತ್ತೇವೆ. ವಿಶ್ರಾಂತಿ, ಆಹಾರ ಹಾಗೂ ನಿದ್ದೆಯ ಕೊರತೆಯು ಇದಕ್ಕೆ ಮುಖ್ಯ ಕಾರಣವಾಗಿರಬಹುದು. ಪೋಷಕಾಂಶಭರಿತ ಆಹಾರ ಸೇವಿಸಿದರೆ ದೇಹಕ್ಕೆ ಶಕ್ತಿ ಸಿಗುತ್ತದೆ ಕೆಲಸ ಮಾಡಲು ದೇಹ ಹಾಗೂ ಮನಸ್ಸು ಸಿದ್ಧವಾಗುತ್ತದೆ. ಬಿಡುವಿಲ್ಲದೆ ಕೆಲಸ ಮಾಡಿ ಸುಸ್ತಾದಾಗ ಈ ಆಹಾರಗಳನ್ನು ಸೇವಿಸಿದರೆ ಸದಾ ಉಲ್ಲಾಸದಿಂದಿರಬಹುದು.

* ಬಾಳೆಹಣ್ಣು : ಬಾಳೆಹಣ್ಣಿನಲ್ಲಿ ಸುಕ್ರೋಸ್, ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶಗಳು ಸೇರಿವೆ. ಹೀಗಾಗಿ ಪ್ರತಿ ನಿತ್ಯ ಬಾಳೆಹಣ್ಣು ಸೇವನೆ ಮಾಡುತ್ತ ಬಂದರೆ ಆಯಾಸವನ್ನು ದೂರವಾಗಿಸಿ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

* ಖರ್ಜೂರ: ಪ್ರತಿದಿನ 2-3 ಖರ್ಜೂರಗಳನ್ನು ಸೇವಿಸುವುದರಿಂದ ದೇಹಕ್ಕೆ ಉತ್ತಮ ಶಕ್ತಿ ದೊರೆಯುವುದಲ್ಲದೆ ಆಯಾಸ ಸುಸ್ತನ್ನು ದೂರ ಮಾಡಿ ದೇಹಕ್ಕೆ ಚೈತನ್ಯ ನೀಡುತ್ತದೆ.

* ಮೊಟ್ಟೆ : ಮೊಟ್ಟೆಯಲ್ಲೂ ಪ್ರೋಟೀನ್, ಆರೋಗ್ಯಕರ ಕೊಬ್ಬು, ಕೋಲೀನ್, ಕಬ್ಬಿಣ, ವಿಟಮಿನ್ ಡಿ ಮತ್ತು ಬಿ12 ಪೌಷ್ಟಿಕಾಂಶಗಳು ಹೇರಳವಾಗಿದ್ದು, ಆರೋಗ್ಯಕ್ಕೂ ಒಳ್ಳೆಯದು. ಪ್ರತಿ ನಿತ್ಯ ಮೊಟ್ಟೆ ಸೇವಿಸುತ್ತಿದ್ದರೆ, ದೇಹಕ್ಕೆ ಶಕ್ತಿಯು ಸಿಗುತ್ತದೆ. ಇದರಿಂದ ಸದಾ ಲವಲವಿಕೆಯಿಂದಿರಲು ಸಾಧ್ಯ.

ಇದನ್ನೂ ಓದಿ: ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್

* ಬೀಟ್ ರೂಟ್ : ಬೀಟ್ ರೂಟ್ ನಲ್ಲಿ ನೈಟ್ರೇಟ್ ಸಮೃದ್ಧವಾಗಿದ್ದು, ಇದರ ಸೇವನೆಯು ಜೀವಕೋಶಗಳನ್ನು ಉತ್ತಮಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತದೆ.

* ಮೊಸರು : ಮೊಸರಿನಲ್ಲಿ ಪ್ರೋಟೀನ್ ಮತ್ತು ವಿಟಮಿನ್ ಬಿ 12 ನಲ್ಲಿ ಸಮೃದ್ಧವಾಗಿರುವ ತ್ವರಿತ ಶಕ್ತಿ ವರ್ಧಕ ಆಹಾರವಾಗಿದೆ. ನಿಯಮಿತವಾಗಿ ಮೊಸರನ್ನು ಸೇವಿಸಿದರೆ ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ