AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Engineers Day 2024: ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಇತಿಹಾಸ, ಮಹತ್ವವೇನು? ಈ ದಿನದ ಶುಭಾಶಯ ಈ ರೀತಿ ತಿಳಿಸಿ

ಪ್ರತಿವರ್ಷ ಸೆಪ್ಟೆಂಬರ್ 15 ರಂದು ರಾಷ್ಟ್ರೀಯ ಇಂಜಿನಿಯರ್‌ಗಳ (National Engineer’s Day) ದಿನವನ್ನು ಆಚರಿಸಲಾಗುತ್ತದೆ. ಡಾ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15, 1861 ರಂದು ಜನಿಸಿದರು. ಭಾರತದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ವ್ಯಕ್ತಿಗಳಲ್ಲಿ ಅವರು ಅಗ್ರಗಣ್ಯರು. ಕೃಷ್ಣ ರಾಜ ಸಾಗರ ಅಣೆಕಟ್ಟು, ಮೈಸೂರು ಅರಮನೆ ಮತ್ತು ಬೆಂಗಳೂರು ನೀರು ಸರಬರಾಜು ಯೋಜನೆ ಸೇರಿದಂತೆ ಹಲವಾರು ಸಾಂಪ್ರದಾಯಿಕ ರಚನೆಗಳನ್ನು ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಾಗಾಗಿಯೇ ಅವರ ಈ ಅತ್ಯಮೂಲ್ಯ ಕೊಡುಗೆಗಳನ್ನು ನೆನೆಯುವುದಕ್ಕಾಗಿ ಸೆಪ್ಟೆಂಬರ್ 15 ರಂದು ಇಂಜಿನಿಯರ್‌​ ದಿನವನ್ನು ಆಚರಿಸಲಾಗುತ್ತದೆ.

National Engineers Day 2024: ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಇತಿಹಾಸ, ಮಹತ್ವವೇನು? ಈ ದಿನದ ಶುಭಾಶಯ ಈ ರೀತಿ ತಿಳಿಸಿ
Engineer’s Day 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 15, 2024 | 10:26 AM

Share

ಭಾರತದ ಶ್ರೇಷ್ಠ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಡಾ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿಗಾಗಿ ಮತ್ತು ವಿಶ್ವದಾದ್ಯಂತ ಇಂಜಿನಿಯರ್‌ ಗಳ ಅಪಾರ ಕೊಡುಗೆಗಳು ಮತ್ತು ಸಾಧನೆಗಳನ್ನು ಗೌರವಿಸಲು ಪ್ರತಿವರ್ಷ ಸೆಪ್ಟೆಂಬರ್ 15 ರಂದು ರಾಷ್ಟ್ರೀಯ ಇಂಜಿನಿಯರ್‌ಗಳ (National Engineer’s Day) ದಿನವನ್ನು ಆಚರಿಸಲಾಗುತ್ತದೆ. ಡಾ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15, 1861 ರಂದು ಜನಿಸಿದರು. ಭಾರತದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ವ್ಯಕ್ತಿಗಳಲ್ಲಿ ಅವರು ಅಗ್ರಗಣ್ಯರು. ಕೃಷ್ಣ ರಾಜ ಸಾಗರ ಅಣೆಕಟ್ಟು, ಮೈಸೂರು ಅರಮನೆ ಮತ್ತು ಬೆಂಗಳೂರು ನೀರು ಸರಬರಾಜು ಯೋಜನೆ ಸೇರಿದಂತೆ ಹಲವಾರು ಸಾಂಪ್ರದಾಯಿಕ ರಚನೆಗಳನ್ನು ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಾಗಾಗಿಯೇ ಅವರ ಈ ಅತ್ಯಮೂಲ್ಯ ಕೊಡುಗೆಗಳನ್ನು ನೆನೆಯುವುದಕ್ಕಾಗಿ ಸೆಪ್ಟೆಂಬರ್ 15 ರಂದು ಇಂಜಿನಿಯರ್‌​ ದಿನವನ್ನು ಆಚರಿಸಲಾಗುತ್ತದೆ.

ಇಂಜಿನಿಯರ್‌​ ದಿನದ ಇತಿಹಾಸ:

ಸರ್ಕಾರವು 1968 ರಲ್ಲಿ ಸೆಪ್ಟೆಂಬರ್ 15 ಅನ್ನು ಇಂಜಿನಿಯರ್‌ಗಳ ದಿನವೆಂದು ಘೋಷಿಸಿತು. ವಿಶ್ವೇಶ್ವರಯ್ಯನವರ ಪರಂಪರೆಯನ್ನು ಗೌರವಿಸಲು ಮತ್ತು ಸಮಾಜಕ್ಕೆ ಎಲ್ಲಾ ಇಂಜಿನಿಯರ್‌ಗಳ ಕೊಡುಗೆಗಳನ್ನು ಗುರುತಿಸಲು ಭಾರತದಾದ್ಯಂತ ಇಂಜಿನಿಯರ್‌ಗಳು ಈ ದಿನವನ್ನು ಆಚರಿಸುತ್ತಾರೆ. ಅದಲ್ಲದೆ ಈ ದಿನವನ್ನು ಆಚರಿಸುವ ಮೂಲಕ, ನಮ್ಮ ಜೀವನವನ್ನು ಉತ್ತಮಗೊಳಿಸುವ ಇಂಜಿನಿಯರ್‌ಗಳಿಗೆ ನಾವು ನಮ್ಮ ಮೆಚ್ಚುಗೆಯನ್ನು ತೋರಿಸಬಹುದು.

ಇಂಜಿನಿಯರ್‌​ ದಿನದ ಮಹತ್ವ ಮತ್ತು ಆಚರಣೆಗಳು:

ಇಂಜಿನಿಯರ್‌ ಗಳ ದಿನದ ಮಹತ್ವವು ಸಮಾಜದಲ್ಲಿ ಅವರು ವಹಿಸುವ ನಿರ್ಣಾಯಕ ಪಾತ್ರವನ್ನು ಗುರುತಿಸುವುದರಲ್ಲಿದೆ. ಮೂಲಸೌಕರ್ಯ ಮತ್ತು ಸಾರಿಗೆಯಿಂದ ತಂತ್ರಜ್ಞಾನ ಮತ್ತು ಆರೋಗ್ಯ ರಕ್ಷಣೆಯ ವರೆಗೆ, ಇಂಜಿನಿಯರ್‌ ಗಳು ದೈನಂದಿನ ಜೀವನದ ಭಾಗವಾಗಿರುತ್ತಾರೆ. ಸರಳ ಭಾಷೆಯಲ್ಲಿ ಹೇಳುವುದಾದರೆ ಇಂಜಿನಿಯರ್‌ಗಳ ಜಾಣ್ಮೆ ಮತ್ತು ಸೃಜನಶೀಲತೆಯನ್ನು ಕೊಂಡಾಡುವ ದಿನ ಇದು ಎಂದು ಹೇಳಬಹುದಾಗಿದೆ. ಈ ದಿನವನ್ನು ಶಿಕ್ಷಣ ಸಂಸ್ಥೆಗಳು, ಇಂಜಿನಿಯರ್‌ ಕಾಲೇಜುಗಳು ಮತ್ತು ವೃತ್ತಿಪರ ಸಂಸ್ಥೆಗಳು ನಾನಾ ರೀತಿಯ ಸೆಮಿನಾರ್ ಗಳನ್ನು ಆಯೋಜಿಸಲಾಗುತ್ತದೆ. ಜೊತೆಗೆ ವಿವಿಧ ಕಾರ್ಯಾಗಾರಗಳು ಮತ್ತು ಸಮ್ಮೇಳನಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ಯಾವ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ? ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡುವುದು ಹೇಗೆ?

ಇಂಜಿನಿಯರ್ಸ್ ದಿನ ಈ ರೀತಿ ಶುಭಾಶಯ ತಿಳಿಸಿ:

  • “ಉತ್ತಮ ಭವಿಷ್ಯವನ್ನು ರಚಿಸಲು ದಣಿವರಿಯದೆ ಕೆಲಸ ಮಾಡುತ್ತಿರುವ ಎಲ್ಲಾ ಪ್ರತಿಭಾವಂತರಿಗೆ ಇಂಜಿನಿಯರ್‌ ಗಳಿಗೆ ಶುಭಾಶಯಗಳು. ನಿಮ್ಮ ಕೆಲಸ ಆಧುನಿಕ ಸಮಾಜದ ಬೆನ್ನೆಲುಬು!”
  • ರಸ್ತೆ, ಸೇತುವೆ, ಮನೆ, ಕಟ್ಟಡ ಹೀಗೆ ಪ್ರತಿಯೊಂದು ಕಾಮಗಾರಿಯಲ್ಲಿ ತಮ್ಮ ಚಾಣಾಕ್ಷ ತೋರಿ ಪ್ರಗತಿಗೆ ಸಹಕಾರಿಯಾಗಿರುವ ಪ್ರತಿಯೊಬ್ಬ ಇಂಜಿನಿಯರ್ಸ್‌ಗೆ ಇಂಜಿನಿಯರ್ ದಿನದ ಶುಭಾಶಯಗಳು.
  • ದುಡಿಮೆಗೆ ಗುರಿಯಿರಲಿ ದುಡಿಯುವುದರಲ್ಲಿ ನಿಯಮವಿರಲಿ -ಸರ್ ಎಂ.ವಿಶ್ವೇಶ್ವರಯ್ಯ
  • ನಾಡು ಕಂಡು ಮಹೋನ್ನತ ಇಂಜಿಯನರ್ ಸರ್ ಎಂ ವಿ, ಅವರ ಹಾದಿಯಲ್ಲಿ ಸಾಗುತ್ತಿರುವ ನಿಮಗೆ ಇಂಜಿನಿಯರ್ಸ್ ಡೇಯ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?