AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Peanut Benefit: ಈ ಚಳಿಗಾಲದಲ್ಲಿ ಶೇಂಗಾ ಬೀಜ ತಿನ್ನಿ; ಆರೋಗ್ಯ ಪ್ರಯೋಜನ ಪಡೆದುಕೊಳ್ಳಿ

ಶೇಂಗಾಬೀಜ ಅಥವಾ ಕಡಲೆಕಾಯಿ ರುಚಿಯ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಇದರಲ್ಲಿ ಪ್ರೋಟೀನ್, ನಾರಿನಂಶ ಮತ್ತು ಜೀವಸತ್ವಗಳು ಹೇರಳವಾಗಿದ್ದು, ಇದನ್ನು ತಿನ್ನುವ ಮೂಲಕ ದೇಹವನ್ನು ಹಲವು ರೋಗಗಳಿಂದ ರಕ್ಷಿಸಬಹುದು. ಅದರಲ್ಲೂ ಚಳಿಗಾಲದಲ್ಲಿ ಕಾಡುವಂತಹ ಶೀತ, ನೆಗಡಿ, ಜ್ವರ ಇತ್ಯಾದಿ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಲು ಪ್ರತಿನಿತ್ಯ ಸೀಮಿತ ಪ್ರಮಾಣದಲ್ಲಿ ಕಡಲೆಕಾಯಿಯನ್ನು ಸೇವನೆ ಮಾಡುವುದು ಉತ್ತಮ.

Peanut Benefit: ಈ ಚಳಿಗಾಲದಲ್ಲಿ ಶೇಂಗಾ ಬೀಜ ತಿನ್ನಿ; ಆರೋಗ್ಯ ಪ್ರಯೋಜನ ಪಡೆದುಕೊಳ್ಳಿ
Peanut BenefitImage Credit source: Shutterstock
ಮಾಲಾಶ್ರೀ ಅಂಚನ್​
| Edited By: |

Updated on: Oct 29, 2023 | 12:53 PM

Share

ಬಡವರ ಪಾಲಿನ ಬಾದಾಮಿ ಅಂತಾನೇ ಕರೆಯಲ್ಪಡುವ ಶೇಂಗಾ ತಿನ್ನಲು ರುಚಿಕರವಾದುದು ಮಾತ್ರವಲ್ಲದೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣಾಂಶದ ಉತ್ತಮ ಮೂಲವಾಗಿದ್ದು, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಅದರಲ್ಲೂ ಚಳಿಗಾಲದಲ್ಲಿ ಕಡಲೆಕಾಯಿಯನ್ನು ತಿನ್ನುವ ಮೂಲಕ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಚಳಿಗಾಲದಲ್ಲಿನ ಶೀತ ವಾತವರಣಕ್ಕೆ ನಮ್ಮ ರೋಗನಿರೋಧಕ ಶಕ್ತಿ ಕುಂಠಿತವಾಗುವುದು ಮಾತ್ರವಲ್ಲದೆ ಈ ಸಮಯದಲ್ಲಿ ಹಲವಾರು ಚರ್ಮ ಸಂಬಂಧಿ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಅಂತಹ ಸಂದರ್ಭದಲ್ಲಿ ಕಡಲೆಕಾಯಿಯನ್ನು ಸೇವನೆ ಮಾಡುವ ಮೂಲಕ ಆರೋಗ್ಯ ಹಾಗೂ ತ್ವಚೆಯ ಸಂಬಂಧಿ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು. ಹಾಗಾದರೆ ಚಳಿಗಾಲದಲ್ಲಿ ಶೇಂಗಾಬೀಜ ತಿನ್ನುವುದರಿಂದ ದೊರಕುವ ಪ್ರಯೋಜನಗಳೇನು ಎಂಬುದನ್ನು ನೋಡೋಣ.

ಚಳಿಗಾಲದಲ್ಲಿ ಶೇಂಗಾ ತಿನ್ನುವುದರಿಂದ ಲಭಿಸುವ ಪ್ರಯೋಜನಗಳು:

ಶೀತ ಮತ್ತು ಕೆಮ್ಮಿನ ಸಮಸ್ಯೆಯಿಂದ ಪರಿಹಾರವನ್ನು ಪಡೆಯಬಹುದು:

ಚಳಿಗಾಲದಲ್ಲಿನ ಶೀತ ವಾತವರಣದ ಕಾರಣದಿಂದ ಈ ಋತುವಿನಲ್ಲಿ ನೆಗಡಿ ಮತ್ತು ಶೀತದ ಸಮಸ್ಯೆ ಹೆಚ್ಚು ಬಾಧಿಸುತ್ತದೆ. ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಕಡಲೆಕಾಯಿನ್ನು ಸೇವಿಸಬಹುದು. ಶೇಂಗಾ ತಿನ್ನುವುದರಿಂದ ದೇಹವು ಬೆಚ್ಚಗಿರುತ್ತದೆ, ಇದರಿಂದ ವ್ಯಕ್ತಿಯು ಕೆಮ್ಮು ಮತ್ತು ಶೀತದ ಸಮಸ್ಯೆಗೆ ಒಳಗಾಗುವ ಸಾಧ್ಯತೆ ಕಡಿಮೆಯಿರುತ್ತದೆ. ಅಲ್ಲದೆ ಇದನ್ನು ದಿನನಿತ್ಯ ಸೇವಿಸುವುದರಿಂದ ಶ್ವಾಸಕೋಶವು ಬಲಗೊಳ್ಳುತ್ತದೆ.

ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ:

ಚಳಿಗಾಲದಲ್ಲಿನ ಶೀತ ವಾತಾವರಣದ ಕಾರಣದಿಂದಾಗಿ ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುತ್ತದೆ. ಇದರಿಂದ ಈ ಋತುವಿನಲ್ಲಿ ಜನರು ಹೆಚ್ಚಾಗಿ ಶೀತ, ಜ್ವರ ಮುಂತಾದ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಹೀಗಿರುವಾಗ ನಿಯಮಿತವಾಗಿ ಸೀಮಿತ ಪ್ರಮಾಣದಲ್ಲಿ ಕಡಲೆಕಾಯಿಯನ್ನು ತಿನ್ನುವ ಮೂಲಕ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು. ವಿಟಮಿನ್ ಸಿ ಕಡಲೆಕಾಯಿಯಲ್ಲಿ ಹೇರಳವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸಲು ಸಹಕಾರಿ:

ಕಡಲೆಕಾಯಿಯಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಮೆಗ್ನೇಸಿಯಮ್ ಸಮೃದ್ಧವಾಗಿದೆ. ಇದು ಮೂಳೆಗಳ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಶೀತ ವಾತವರಣದಲ್ಲಿ ಪ್ರತಿದಿನ ಕಡಲೆಕಾಯಿಯನ್ನು ತಿನ್ನುವುದರಿಂದ ನಮ್ಮ ಮೂಳೆಗಳು ಬಲಗೊಳ್ಳುತ್ತವೆ. ಮತ್ತು ಇದು ಸ್ನಾಯುಗಳನ್ನು ಸಕ್ರಿಯಗೊಳಿಸುತ್ತದೆ.

ಇದನ್ನೂ ಓದಿ: ಸಂಜೆಯ ಸ್ಯ್ನಾಕ್ಸ್ ಸಮಯಕ್ಕೆ ಮನೆಯಲ್ಲಿಯೇ ತಯಾರಿಸಿ ಗರಿಗರಿಯಾದ ಆಲೂ ಟಿಕ್ಕಿ

ಹೊಟ್ಟೆ ಸಂಬಂಧಿ ಕಾಯಿಲೆಗಳಿಂದ ಪರಿಹಾರವನ್ನು ಒದಗಿಸುತ್ತದೆ:

ಕಡಲೆಕಾಯಿಯ ಸೇವನೆಯು ಹೊಟ್ಟೆಗೆ ತುಂಬಾ ಪ್ರಯೋಜನಕಾರಿ. ಏಕೆಂದರೆ ಇದರಲ್ಲಿ ನಾರಿನಂಶವಿದ್ದು, ಇದು ಜೀರ್ಣಕ್ರಿಯೆಗೆ ಉತ್ತಮ ಮತ್ತು ಇದು ಮಲಬದ್ಧತೆಯಂತಹ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿ. ಇದಲ್ಲದೆ ಕಡಲೆಕಾಯಿಯನ್ನು ಸೇವಿಸುವುದರಿಂದ ದೇಹದಲ್ಲಿನ ರಕ್ತಹೀನತೆಯ ಸಮಸ್ಯೆ ದೂರವಾಗುತ್ತದೆ. ಏಕೆಂದರೆ ಇದರಲ್ಲಿ ಉತ್ತಮ ಪ್ರಮಾಣದ ಕಬ್ಬಿಣಾಂಶವಿದ್ದು, ಇದು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿ:

ಚಳಿಗಾಲ ಬಂತೆಂದರೆ ಸಾಕು, ಸಾಕಷ್ಟು ಚರ್ಮ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಿರುವಾಗ ಕಡಲೆಕಾಯಿಯನ್ನು ಸೇವನೆ ಮಾಡುವ ಮೂಲಕ ಈ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದು. ಇದರಲ್ಲಿ ಪ್ರೋಟೀನ್, ಆರೋಗ್ಯಕರ ಕೊಬ್ಬು, ಫೈಬರ್, ಖನಿಜಗಳು, ಜೀವಸ್ವಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಚರ್ಮದಲ್ಲಿ ಕಾಣಿಸಿಕೊಳ್ಳುವ ಸುಕ್ಕುಗಳನ್ನು ಕಡಿಮೆ ಮಾಡಿ ತ್ವಚೆಯನ್ನು ಹೊಳೆಯುವಂತೆ ಮಾಡಲು ಸಹಕಾರಿಯಾಗಿದೆ. ಮಾತ್ರವಲ್ಲದೆ ಕಡಲೆಕಾಯಿಯಲ್ಲಿರುವ ಕೊಬ್ಬಿನಾಮ್ಲಗಳು ಚರ್ಮದ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ನಾರಿನಾಂಶವೂ ಇದರಲ್ಲಿದ್ದು, ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?