AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ನಿಮ್ಮ ದಾಂಪತ್ಯದ ಸಂಬಂಧವನ್ನು ಹಾಳುಮಾಡಬಹುದು

ಭಾರತದಲ್ಲಿ ಶೇಕಡಾ 88ರಷ್ಟು ದಂಪತಿಗಳ ಸಂಬಂಧ ಹಾಳಾಗಲು ಕಾರಣ ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ಎಂದು ಅಧ್ಯಯನದ ಫಲಿತಾಂಶಗಳು ಸೂಚಿಸುತ್ತವೆ.

Relationship Tips:  ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ನಿಮ್ಮ ದಾಂಪತ್ಯದ ಸಂಬಂಧವನ್ನು ಹಾಳುಮಾಡಬಹುದು
ಸಾಂದರ್ಭಿಕ ಚಿತ್ರImage Credit source: praetorianphoto
TV9 Web
| Edited By: |

Updated on: Dec 13, 2022 | 7:30 PM

Share

ಸ್ಮಾರ್ಟ್‌ಫೋನ್‌(Smartphone) ಗಳು ಜನರನ್ನು ಪರಸ್ಪರ ಸಂಪರ್ಕಿಸುವಲ್ಲಿ ಪ್ರಮುಖ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದಾಗಿ ಅದೆಷ್ಟೋ ದೇಶ ವಿದೇಶದ ವ್ಯಕ್ತಿಗಳೊಂದಿಗೆ ಸುಲಭವಾಗಿ ಮಾತುಕತೆ ನಡೆಸಬಹುದಾಗಿದೆ. ಆದರೆ ಅತಿಯಾದರೆ ಅಮೃತವು ವಿಷ ಎನ್ನುವ ಮಾತಿದೆ. ಆದರಂತೆಯೇ ಇಂದು ತಂತ್ರಜ್ಞಾನ ಬೆಳೆಯುತ್ತಿದಂತೆ ಜನರು ಸಂಬಂಧ (Relationship)ಗಳ ಬೆಲೆ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಇಂದು ಭಾರತದಲ್ಲಿ ಶೇಕಡಾ 88ರಷ್ಟು ದಂಪತಿಗಳ ಸಂಬಂಧ ಹಾಳಾಗಲು ಪ್ರಮುಖ ಕಾರಣ ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ಎಂದು ಅಧ್ಯಯನದ ಫಲಿತಾಂಶ ಸ್ಪಷ್ಟಪಡಿಸಿದೆ.

ವಿವೋ ತನ್ನ ನಾಲ್ಕನೇ ಆವೃತ್ತಿಯ ಸ್ವಿಚ್ ಆಫ್ ಅಧ್ಯಯನದಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ಸಂಬಂಧಗಳ ಮೇಲೆ ಅವುಗಳ ಪ್ರಭಾವ 2022(Smartphones and their impact on human relationships 2022) ಎಂಬ ಶೀರ್ಷಿಕೆಯ ಸಂಶೋಧನೆಯನ್ನು ಪ್ರಕಟಿಸಿದೆ. ಶೇಕಡಾ 67ರಷ್ಟು ಭಾರತೀಯರು ತಮ್ಮ ಸಂಗಾತಿಯೊಂದಿಗೆ ಸಮಯ ಕಳೆಯುವಾಗಲೂ ಫೋನ್‌ ಬಳಸುತ್ತಾರೆ ಎಂದು ಸ್ವತಃ ಅವರೇ ಒಪ್ಪಿಕೊಂಡಿರುವ ಅಂಶ ಸಂಶೋಧನೆಯಿಂದ ತಿಳಿದುಬಂದಿದೆ. ಇದಲ್ಲದೇ ಶೇಕಡಾ 70ರಷ್ಟು ಜನರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಮುಳುಗಿರುವಾಗ ಅವರ ಸಂಗಾತಿಯು ಮಾತುಕತೆ ನಡೆಸಲು ಮುಂದಾದರೆ ಅವರು ಕಿರಿಕಿರಿಗೊಳ್ಳುತ್ತಾರೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಇದನ್ನು ಓದಿ: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ

ಅತಿಯಾದ ಸ್ಮಾರ್ಟ್‌ಫೋನ್ ಬಳಕೆಯಿಂದ ಶೇಕಡಾ 66 ರಷ್ಟು ಜನರು ಸಂಬಂಧವನ್ನು ದುರ್ಬಲಗೊಳಿಸಿದ್ದಾರೆ, ಇದರಿಂದಾಗಿ ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಾಗಿ ಕಂಡು ಬರುತ್ತಿದೆ ಎಂದು ತಿಳಿದುಬಂದಿದೆ. ಇದಲ್ಲದೆ, ಶೇಕಡಾ 58 ರಷ್ಟು ಜನರು ಊಟ ಮಾಡುವಾಗ ಸ್ಮಾರ್ಟ್‌ಫೋನ್ ಬಳಸುತ್ತಾರೆ ಎಂದು ಒಪ್ಪಿಕೊಂಡಿದ್ದಾರೆ ಜೊತೆಗೆ ಶೇಕಡಾ 86ರಷ್ಟು ಮಲಗುವ ಮೊದಲು ಫೋನ್ ನೋಡುತ್ತಾರೆ ಎಂದು ಹೇಳುತ್ತಾರೆ ಮತ್ತು ಶೇಕಡಾ 60ರಷ್ಟು ಜನರು ಕುಟುಂಬದೊಂದಿಗೆ ಕುಳಿತು ಮಾತನಾಡುವಾಗ ಸ್ಮಾರ್ಟ್‌ಫೋನ್‌ಗಳನ್ನು ಬಳಸುತ್ತಾರೆ ಎಂದು ಅಧ್ಯಯನವು ತಿಳಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು