AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ನಿಮ್ಮ ದಾಂಪತ್ಯದ ಸಂಬಂಧವನ್ನು ಹಾಳುಮಾಡಬಹುದು

ಭಾರತದಲ್ಲಿ ಶೇಕಡಾ 88ರಷ್ಟು ದಂಪತಿಗಳ ಸಂಬಂಧ ಹಾಳಾಗಲು ಕಾರಣ ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ಎಂದು ಅಧ್ಯಯನದ ಫಲಿತಾಂಶಗಳು ಸೂಚಿಸುತ್ತವೆ.

Relationship Tips:  ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ನಿಮ್ಮ ದಾಂಪತ್ಯದ ಸಂಬಂಧವನ್ನು ಹಾಳುಮಾಡಬಹುದು
ಸಾಂದರ್ಭಿಕ ಚಿತ್ರImage Credit source: praetorianphoto
TV9 Web
| Updated By: ಅಕ್ಷತಾ ವರ್ಕಾಡಿ|

Updated on: Dec 13, 2022 | 7:30 PM

Share

ಸ್ಮಾರ್ಟ್‌ಫೋನ್‌(Smartphone) ಗಳು ಜನರನ್ನು ಪರಸ್ಪರ ಸಂಪರ್ಕಿಸುವಲ್ಲಿ ಪ್ರಮುಖ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದಾಗಿ ಅದೆಷ್ಟೋ ದೇಶ ವಿದೇಶದ ವ್ಯಕ್ತಿಗಳೊಂದಿಗೆ ಸುಲಭವಾಗಿ ಮಾತುಕತೆ ನಡೆಸಬಹುದಾಗಿದೆ. ಆದರೆ ಅತಿಯಾದರೆ ಅಮೃತವು ವಿಷ ಎನ್ನುವ ಮಾತಿದೆ. ಆದರಂತೆಯೇ ಇಂದು ತಂತ್ರಜ್ಞಾನ ಬೆಳೆಯುತ್ತಿದಂತೆ ಜನರು ಸಂಬಂಧ (Relationship)ಗಳ ಬೆಲೆ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಇಂದು ಭಾರತದಲ್ಲಿ ಶೇಕಡಾ 88ರಷ್ಟು ದಂಪತಿಗಳ ಸಂಬಂಧ ಹಾಳಾಗಲು ಪ್ರಮುಖ ಕಾರಣ ಅತಿಯಾದ ಸ್ಮಾರ್ಟ್‌ಫೋನ್ ಬಳಕೆ ಎಂದು ಅಧ್ಯಯನದ ಫಲಿತಾಂಶ ಸ್ಪಷ್ಟಪಡಿಸಿದೆ.

ವಿವೋ ತನ್ನ ನಾಲ್ಕನೇ ಆವೃತ್ತಿಯ ಸ್ವಿಚ್ ಆಫ್ ಅಧ್ಯಯನದಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ಸಂಬಂಧಗಳ ಮೇಲೆ ಅವುಗಳ ಪ್ರಭಾವ 2022(Smartphones and their impact on human relationships 2022) ಎಂಬ ಶೀರ್ಷಿಕೆಯ ಸಂಶೋಧನೆಯನ್ನು ಪ್ರಕಟಿಸಿದೆ. ಶೇಕಡಾ 67ರಷ್ಟು ಭಾರತೀಯರು ತಮ್ಮ ಸಂಗಾತಿಯೊಂದಿಗೆ ಸಮಯ ಕಳೆಯುವಾಗಲೂ ಫೋನ್‌ ಬಳಸುತ್ತಾರೆ ಎಂದು ಸ್ವತಃ ಅವರೇ ಒಪ್ಪಿಕೊಂಡಿರುವ ಅಂಶ ಸಂಶೋಧನೆಯಿಂದ ತಿಳಿದುಬಂದಿದೆ. ಇದಲ್ಲದೇ ಶೇಕಡಾ 70ರಷ್ಟು ಜನರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಮುಳುಗಿರುವಾಗ ಅವರ ಸಂಗಾತಿಯು ಮಾತುಕತೆ ನಡೆಸಲು ಮುಂದಾದರೆ ಅವರು ಕಿರಿಕಿರಿಗೊಳ್ಳುತ್ತಾರೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಇದನ್ನು ಓದಿ: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ

ಅತಿಯಾದ ಸ್ಮಾರ್ಟ್‌ಫೋನ್ ಬಳಕೆಯಿಂದ ಶೇಕಡಾ 66 ರಷ್ಟು ಜನರು ಸಂಬಂಧವನ್ನು ದುರ್ಬಲಗೊಳಿಸಿದ್ದಾರೆ, ಇದರಿಂದಾಗಿ ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಾಗಿ ಕಂಡು ಬರುತ್ತಿದೆ ಎಂದು ತಿಳಿದುಬಂದಿದೆ. ಇದಲ್ಲದೆ, ಶೇಕಡಾ 58 ರಷ್ಟು ಜನರು ಊಟ ಮಾಡುವಾಗ ಸ್ಮಾರ್ಟ್‌ಫೋನ್ ಬಳಸುತ್ತಾರೆ ಎಂದು ಒಪ್ಪಿಕೊಂಡಿದ್ದಾರೆ ಜೊತೆಗೆ ಶೇಕಡಾ 86ರಷ್ಟು ಮಲಗುವ ಮೊದಲು ಫೋನ್ ನೋಡುತ್ತಾರೆ ಎಂದು ಹೇಳುತ್ತಾರೆ ಮತ್ತು ಶೇಕಡಾ 60ರಷ್ಟು ಜನರು ಕುಟುಂಬದೊಂದಿಗೆ ಕುಳಿತು ಮಾತನಾಡುವಾಗ ಸ್ಮಾರ್ಟ್‌ಫೋನ್‌ಗಳನ್ನು ಬಳಸುತ್ತಾರೆ ಎಂದು ಅಧ್ಯಯನವು ತಿಳಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ