AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರೇ… ನಿಮ್ಮ ಮಕ್ಕಳಿಗೆ ಜ್ವರ ಬಂದ್ರೆ ಈ ಆಹಾರಗಳನ್ನು ನೀಡಲೇಬೇಕು

ಮಕ್ಕಳಲ್ಲಿ ಪದೇ ಪದೇ ಜ್ವರ ಕಾಣಿಸಿಕೊಳ್ಳುತ್ತಿರುತ್ತವೆ. ಜ್ವರ ಬಂದ ಸಮಯದಲ್ಲಿ ವೈದ್ಯರ ನೆರವು ಹಾಗೂ ಸಹಾಯ ಪಡೆದುಕೊಳ್ಳುವುದು ತುಂಬಾನೇ ಮುಖ್ಯ. ಅದೇ ರೀತಿ ಈ ಸಮಯದಲ್ಲಿ ಮಕ್ಕಳ ಆಹಾರ ಪದ್ಧತಿಯ ಬಗ್ಗೆಯೂ ಕಾಳಜಿ ವಹಿಸಬೇಕು. ಅವರಿಗೆ ಯಾವ ಆಹಾರ ನೀಡಬೇಡು, ನೀಡಬಾರದು ಎಂಬುದು ಪೋಷಕರು ತಿಳಿದುಕೊಳ್ಳಬೇಕು. ಹಾಗಿದ್ದರೆ ಮಕ್ಕಳಿಗೆ ಜ್ವರ ಕಾಣಿಸಿಕೊಂಡಾಗ ಯಾವ ರೀತಿಯ ಆಹಾರವನ್ನು ನೀಡುವುದು ಉತ್ತಮ ಎಂಬುದನ್ನು ತಿಳಿಯಿರಿ.

ಪೋಷಕರೇ… ನಿಮ್ಮ ಮಕ್ಕಳಿಗೆ ಜ್ವರ ಬಂದ್ರೆ ಈ ಆಹಾರಗಳನ್ನು ನೀಡಲೇಬೇಕು
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 21, 2025 | 6:26 PM

Share

ಹವಾಮಾನ, ವಾತಾವರಣದಲ್ಲಿನ ಬದಲಾವಣೆ ಮತ್ತು ದುರ್ಬಲ ರೋಗನಿರೋಧಕ ಶಕ್ತಿಯ ಕಾರಣದಿಂದಾಗಿ ಹೆಚ್ಚಿನ ಮಕ್ಕಳು ಜ್ವರ (fever), ನೆಗಡಿಯಂತಹ ಆರೋಗ್ಯ ಸಮಸ್ಯೆಗಳಿಗೆ ಪದೇ ಪದೇ ತುತ್ತಾಗುತ್ತಿರುತ್ತಾರೆ. ಮತ್ತು ಈ ಸಮಯದಲ್ಲಿ ಮಕ್ಕಳು ಸರಿಯಾಗಿ ಆಹಾರವನ್ನು ಸಹ ಸೇವನೆ ಮಾಡುವುದಿಲ್ಲ, ಇದರಿಂದಾಗಿ ಮಕ್ಕಳ ಆರೋಗ್ಯ ಇನ್ನಷ್ಟು ಹದಗೆಡುತ್ತದೆ. ಇಂತಹ ಸಮಯದಲ್ಲಿ ಮಕ್ಕಳಿಗೆ ಈ ಒಂದಷ್ಟು ಆಹಾರಗಳನ್ನು (Foods to give to children with fever) ನೀಡಲೇಬೇಕು. ಏಕೆಂದರೆ ಆಹಾರ ಪದ್ಧತಿ ದೇಹವು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಮಕ್ಕಳಿಗೆ ಜ್ವರ ಬಂದಾಗ ನೀಡಲೇಬೇಕಾದ ಆಹಾರಗಳಿವು:

ಸೂಪ್:‌ ಜ್ವರ ಬಂದಾಗ ಮಕ್ಕಳಿಗೆ ಸೂಪ್‌ ಕುಡಿಸುವುದು ತುಂಬಾನೇ ಒಳ್ಳೆಯದು. ಸೂಪ್‌ನಲ್ಲಿ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಾಂಶಗಳಿದ್ದು, ಇದೊಂದು ಪೌಷ್ಟಿಕಾಂಶಯುಕ್ತ ಆಹಾರವಾಗಿದೆ. ಇದು ಮಕ್ಕಳಿಗೆ ಜ್ವರದಿಂದ ಚೇತರಿಸಿಕೊಳ್ಳಲು ಸಹಾಯಕವಾಗಿದೆ. ಇದಲ್ಲದೆ ಮಕ್ಕಳಿಗೆ ರಾಗಿ ಅಂಬಲಿಯನ್ನು ಸಹ ಕುಡಿಸಬಹುದು.  ವೈರಲ್‌ ಜ್ವರದಿಂದ ಬಳಲುತ್ತಿರುವ ಮಕ್ಕಳು ರಾಗಿ ಅಂಬಲಿ ಕುಡಿಯುವುದು ಉತ್ತಮ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಸುಲಭವಾಗಿ ಜೀರ್ಣಗೊಳ್ಳುತ್ತವೆ.

ದ್ರವ ಆಹಾರಗಳು: ಜ್ವರದ ಸಮಯದಲ್ಲಿ ದೇಹದಲ್ಲಿ ನೀರಿನ ಕೊರತೆ ಉಂಟಾಗಬಹುದು, ಆದ್ದರಿಂದ ಮಕ್ಕಳನ್ನು ಮೊದಲು ಹೈಡ್ರೀಕರಿಸುವುದು ಬಹಳ ಮುಖ್ಯ. ಹೀಗಿರುವಾಗ ಮಗುವಿನ ದೇಹದ ನಿರ್ಜಲೀಕರಣವನ್ನು ಹೋಗಲಾಡಿಸಲು ನೀರು ಮತ್ತು ಎಳನೀರನ್ನು ನೀಡುವುದು  ಪ್ರಯೋಜನಕಾರಿಯಾಗಿದೆ. ಮೊಸರನ್ನು ಸಹ ನೀಡಬಹುದು. ಇದರಲ್ಲಿ ಪ್ರೋಬಯಾಟಿಕ್‌ ಅಂಶ ಸಮೃದ್ಧವಾಗಿದೆ. ಮೊಸರು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆ ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದಲ್ಲದೆ ಜ್ವರದಿಂದಾಗಿ ಮಗು ನಿರ್ಜಲೀಕರಣಗೊಂಡಿದ್ದರೆ, ವೈದ್ಯರ ಸಲಹೆಯ ಮೇರೆಗೆ, ನೀವು ORS ಅನ್ನು ಸಹ ನೀಡಬಹುದು.

ಇದನ್ನೂ ಓದಿ
Image
ಒಳ ಒಡುಪು, ಬೆಡ್‌ಶೀಟ್‌ಗಳನ್ನು ಎಷ್ಟು ಬಾರಿ ತೊಳೆಯಬೇಕು?
Image
ಹಳೆಯ ಪ್ರೆಶರ್‌ ಕುಕ್ಕರ್‌, ಪಾತ್ರೆ ಬಳಸಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ
Image
ಬೆಳಗಿನ ಸಮಯದ ಈ ಅಭ್ಯಾಸಗಳು ನಿಮ್ಮ ಆರೋಗ್ಯವನ್ನೇ ಹಾಳುಮಾಡುತ್ತೆ
Image
ಪ್ರತಿದಿನ ಬೆಳಗ್ಗೆ ಈ ಪಾನಿಯಗಳನ್ನು ಕುಡಿದರೆ, ಸುಲಭವಾಗಿ ತೂಕ ಇಳಿಸಬಹುದು

ಕಾಲೋಚಿತ ಹಣ್ಣುಗಳು: ಜ್ವರದ ಸಮಯದಲ್ಲಿ ದೇಹಕ್ಕೆ ಹೆಚ್ಚಿನ ಜೀವಸತ್ವಗಳು ಮತ್ತು ಶಕ್ತಿಯ ಅಗತ್ಯವಿರುತ್ತದೆ, ಆದ್ದರಿಂದ ನೀವು ಕಾಲೀಚಿತ ಹಣ್ಣುಗಳನ್ನು ಮಕ್ಕಳಿಗೆ ನೀಡಬೇಕು.

  • ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು, ಇದು ಸುಲಭವಾಗಿ ಜೀರ್ಣವಾಗುತ್ತದೆ.
  • ಹೊಟ್ಟೆಗೆ ಹಗುರವಾಗಿರುವ ಸೇಬು ಅಥವಾ ಪೇರಳೆ ಹಣ್ಣನ್ನು ಕೂಡ ಮಕ್ಕಳಿಗೆ ತಿನ್ನಲು ನೀಡಬಹುದು.
  • ಪಪ್ಪಾಯಿ, ಕಿತ್ತಳೆ ಹಣ್ಣುಗಳನ್ನು ಸೇವಿಸುವುದರಿಂದ ಮಕ್ಕಳ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.
  • ಕಲ್ಲಂಗಡಿ ಹಣ್ಣಿನಲ್ಲಿ ನೀರಿನಾಂಶ ಹೆಚ್ಚಿರುತ್ತದೆ. ಜ್ವರದಿಂದ ಬಳಲುತ್ತಿರುವ ಮಕ್ಜಳಿಗೆ ಕಲ್ಲಂಗಡಿ ಹಣ್ಣು ನೀಡುವುದರಿಂದ ಅವರ ದೇಹದಲ್ಲಿ ನೀರಿನಾಂಶ ಹೆಚ್ಚುತ್ತದೆ. ಮತ್ತು ಜ್ವರದಿಂದ ಬೇಗನೆ ಚೇತರಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಅಡುಗೆಗೆ ಹಳೆಯ ಪ್ರೆಶರ್‌ ಕುಕ್ಕರ್‌, ಪಾತ್ರೆ ಬಳಸಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ; ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

ಯಾವ ಆಹಾರಗಳನ್ನು ಸೇವನೆ ಮಾಡಬಾರದು:

ಜ್ವರದ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಮಕ್ಕಳಿಗೆ ನೀಡಬಾರದು. ಏಕೆಂದರೆ ಅವು ಜೀರ್ಣಿಸಿಕೊಳ್ಳಲು ಕಷ್ಟ, ಇದು ಮಕ್ಕಳ ಆರೋಗ್ಯವನ್ನು ಮತ್ತಷ್ಟು  ಹದಗೆಡಿಸುವ ಸಾಧ್ಯತೆ ಇರುತ್ತವೆ.  ಆದ್ದರಿಂದ, ಮಕ್ಕಳಿಗೆ ಜ್ವರ ಬಂದ ಸಮಯದಲ್ಲಿ ಮಸಾಲೆಯುಕ್ತ, ಎಣ್ಣೆಯುಕ್ತ ಮತ್ತು ಹುರಿದ ಆಹಾರ, ಚಾಕೊಲೇಟ್, ಕುಕೀಸ್ ಮುಂತಾದ ಸಿಹಿ ಪದಾರ್ಥಗಳನ್ನು ನೀಡುವುದನ್ನು ತಪ್ಪಿಸಿ. ಜೊತೆಗೆ ತಂಪು ಪಾನೀಯಗಳನ್ನು ಸಹ ನೀಡಬಾರದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?