AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinks For Fatigue: ದಿನವಿಡೀ ಆಯಾಸವನ್ನು ಅನುಭವಿಸುತ್ತಿದ್ದೀರಾ? ಹಾಗಾದರೆ ಈ ನೈಸರ್ಗಿಕ ಈ ಪಾನೀಯಗಳನ್ನು ಕುಡಿಯುವ ಮೂಲಕ ತಾಜಾತನವನ್ನು ಪಡೆಯಿರಿ

ಕೆಲವರು ಕೆಲಸದ ಹೊರತಾಗಿಯೂ ಹೆಚ್ಚಾಗಿ ಆಯಾಸವನ್ನು ಅನುಭವಿಸುತ್ತಾರೆ. ಈ ಆಯಾಸವು ದಿನವೀಡೀ ಕ್ರಿಯಾಶೀಲರಾಗಿರುವುದನ್ನು ತಡೆಯುತ್ತದೆ ಮತ್ತು ಆಲಸ್ಯದ ಭಾವನೆಯನ್ನು ಉಂಟುಮಾಡುತ್ತದೆ. ಹಾಗಾಗಿ ಆಯಾಸವನ್ನು ಹೋಗಲಾಡಿಸಲು ಕೆಲವು ಆರೋಗ್ಯಕರ ಪಾನೀಯಗಳನ್ನು ಸೇವಿಸಲು ಪ್ರಾರಂಭಿಸಬಹುದು. ಇದು ನಿಮ್ಮನ್ನು ತಾಜಾವಾಗಿರಿಸುತ್ತದೆ ಮತ್ತು ದಿನವಿಡೀ ನಿಮ್ಮನ್ನು ಸಕ್ರಿಯವಾಗಿಡಲು ಸಹಾಯ ಮಾಡುತ್ತದೆ.

Drinks For Fatigue: ದಿನವಿಡೀ ಆಯಾಸವನ್ನು ಅನುಭವಿಸುತ್ತಿದ್ದೀರಾ? ಹಾಗಾದರೆ ಈ ನೈಸರ್ಗಿಕ ಈ ಪಾನೀಯಗಳನ್ನು ಕುಡಿಯುವ ಮೂಲಕ ತಾಜಾತನವನ್ನು ಪಡೆಯಿರಿ
Feeling tiredImage Credit source: Pinterest
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Sep 02, 2023 | 6:25 AM

ದಿನವಿಡೀ ಬಿಡುವಿಲ್ಲದ ಕೆಲಸದ ಕಾರಣದಿಂದಾಗಿ ಹೆಚ್ಚಿನ ಜನರು ಸುಸ್ತಾಗಿ ಆಯಾಸವನ್ನು ಅನುಭವಿಸುವುದು ಸಾಮಾನ್ಯ. ಇದು ಮಾತ್ರವಲ್ಲದೆ ಪೌಷ್ಟಿಕಾಂಶದ ಕೊರತೆ ಮತ್ತು ನಿರ್ಜಲೀಕರಣದ ಕಾರಣದಿಂದಾಗಿಯೂ ದೇಹವು ದಣಿದು, ಅದು ಕೆಲಸ ಮಾಡುವ ಉತ್ಸಾಹವನ್ನು ಕಸಿದುಕೊಳ್ಳುತ್ತದೆ. ನೀರಿನೊಂದಿಗೆ ದೇಹದಲ್ಲಿ ಅಗತ್ಯವಾದ ಖನಿಜ ಮತ್ತು ಜೀವಸತ್ವಗಳ ಕೊರತೆಯಿಂದಾಗಿ ನಮ್ಮ ದೇಹದ ಶಕ್ತಿಯ ಮಟ್ಟವು ತಕ್ಷಣವೇ ಕಡಿಮೆಯಾಗುತ್ತದೆ. ಈ ಸಮಯದಲ್ಲಿ ಮೆದುಳು ಸಹ ಸಾಕಷ್ಟು ಶಕ್ತಿಯನ್ನು ಪಡೆಯುವುದಿಲ್ಲ, ಇದರಿಂದಾಗಿ ಮಾನಸಿಕ ಆಯಾಸವು ಸಹ ಉಂಟಾಗುತ್ತದೆ. ಹಾಗಿದ್ದರೆ ಈ ಆಯಾಸವನ್ನು ಹೋಗಲಾಡಿಸಲು ಏನು ಮಾಡಬೇಕು ಎಂದು ಯೋಚಿಸುತ್ತಿದ್ದೀರಾ? ಈ ಕೆಲವೊಂದು ನೈಸರ್ಗಿಕ ಪಾನೀಯಗಳ ಸೇವನೆಯಿಂದ ಆಯಾಸವನ್ನು ಹೋಗಲಾಡಿಸಿ, ದಿನವಿಡೀ ಉಲ್ಲಾಸದಿಂದಿರಿ.

ದೇಹಕ್ಕೆ ತ್ವರಿತ ಶಕ್ತಿಯನ್ನು ತುಂಬಲು ಸಹಕಾರಿ ಈ ಕೆಲವು ಪಾನೀಯಗಳು:

ಕಬ್ಬಿನ ರಸ:

ಕಬ್ಬಿಣ ರಸವು ಪ್ರೋಟೀನ್, ಕಬ್ಬಿಣಾಂಶ, ಪೊಟ್ಯಾಸಿಯಂ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ಹೊಂದಿದ್ದು, ಇದು ಆಯಾಸವನ್ನು ಹೋಗಲಾಡಿಸುವುದರ ಜೊತೆಗೆ ದೇಹದಲ್ಲಿನ ನೀರಿನ ಕೊರತೆಯನ್ನು ನೀಗಿಸುತ್ತದೆ. ಅಲ್ಲದೆ ಇದು ತ್ವರಿತ ಶಕ್ತಿಯನ್ನು ನೀಡುತ್ತದೆ ಮತ್ತು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸ್ಥಿರಗೊಳಿಸುತ್ತದೆ.

ಗ್ರೀನ್ ಟೀ:

ಗ್ರೀನ್ ಟೀ ಬೊಜ್ಜು ಕಡಿಮೆ ಮಾಡಲು ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದರ ಜೊತೆಗೆ ಇದು ತ್ವರಿತ ಶಕ್ತಿಯನ್ನು ನೀಡಲು ಕೂಡ ಸಹಾಯ ಮಾಡುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್ಗಳು ಮತ್ತು ಕೆಫೀನ್ ಆಯಾಸವನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ಇದರಿಂದಾಗಿ ನೀವು ತಾಜಾತನದ ಭಾವನೆ ಯನ್ನು ಅನುಭವಿಸಬಹುದು.

ಎಳನೀರು:

ಈ ನೈಸರ್ಗಿಕ ಆರೋಗ್ಯಕರ ಪಾನೀಯವು ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಎಳನೀರು ನಮ್ಮ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದು ತ್ವರಿತ ಶಕ್ತಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುವುದರ ಜೊತೆಗೆ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ವಿಟಮಿನ್ ಗಳು ಮತ್ತು ಖನಿಜಾಂಶಗಳ ಕೊರೆತಯಿಂದ ಉಂಟಾಗುವ ಆಲಸ್ಯವನ್ನು ಹೋಗಲಾಡಿಸಲು ಎಳನೀರು ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ನಿಮ್ಮ ಈ ಆಹಾರಕ್ರಮಗಳು ಕೂಡ ಕಂಕುಳಲ್ಲಿನ ಕೆಟ್ಟ ವಾಸನೆಗೆ ಕಾರಣವಾಗಬಹುದು!

ನಿಂಬೆ ಪಾನಕ:

ವಿಟಮಿನ್ ಸಿ ಜೀವಸತ್ವಗಳಲ್ಲಿ ಸಮೃದ್ಧವಾಗಿರುವ ನಿಂಬೆ ಪಾನಕವು ತ್ವರಿತ ಶಕ್ತಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಹೆಚ್ಚಿನವರು ತೂಕ ಕಡಿಮೆ ಮಾಡಿಕೊಳ್ಳುವ ಪ್ರಯಾಣದಲ್ಲಿ ಪ್ರತಿದಿನ ಬೆಳಗ್ಗೆ ನಿಂಬೆ ಪಾನಕವನ್ನು ಸೇವಿಸುತ್ತಾರೆ. ಅಲ್ಲದೆ ಇದರ ಸೇವೆಯು ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಪಾನೀಯಕ್ಕೆ ಸ್ವಲ್ಪ ಸಕ್ಕರೆ ಮತ್ತು ಉಪ್ಪನ್ನು ಬೆರೆಸಿ ಕುಡಿಯಿರಿ, ಇದು ದೇಹದಲ್ಲಿ ಕಳೆದುಹೋದ ಖನಿಜಗಳನ್ನು ತುಂಬಲು ಸಹಕಾರಿಯಾಗಿದೆ.

ಮನೆಯಲ್ಲಿಯೇ ತಯಾರಿಸಿದ ಹರ್ಬಲ್ ಟೀ:

ಮನೆಯಲ್ಲಿಯೇ ತಯಾರಿಸಿದ ಗಿಡಮೂಲಿಕೆ ಚಹಾವು ನಿಮ್ಮ ಆಯಾಸವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಶುಂಠಿ, ಏಲಕ್ಕಿ, ಅರಶಿನ ಮುಂತಾದ ಗಿಡಮೂಲಿಕೆಗಳನ್ನು ಬೆರೆಸಿರುವುದರಿಂದ ಇವು ದೇಹದ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ