AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದಕ್ಕೆ ಕೊಬ್ಬರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ?

ತೆಂಗಿನ ಎಣ್ಣೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳಿರುವುದರಿಂದ ನಿಮ್ಮ ಪಾದಗಳ ಮೇಲೆ ವಾಸನೆಯನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ತಡೆಯಲು ಸಹಾಯ ಮಾಡುತ್ತದೆ. ಇದು ನಿಮ್ಮ ಪಾದಗಳನ್ನು ಅಹಿತಕರ ವಾಸನೆಯಿಂದ ಮುಕ್ತಗೊಳಿಸುತ್ತದೆ.

ಪಾದಕ್ಕೆ ಕೊಬ್ಬರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ?
ತೆಂಗಿನ ಎಣ್ಣೆImage Credit source: iStock
ಸುಷ್ಮಾ ಚಕ್ರೆ
|

Updated on: Nov 22, 2023 | 7:44 PM

Share

ಪಾದಗಳ ಆರೈಕೆಯನ್ನು ನೀವು ನಿರ್ಲಕ್ಷಿಸುತ್ತಿದ್ದೀರಾ? ನಿಮ್ಮ ಮುಖ, ಕೂದಲು ಅಥವಾ ದೇಹದಷ್ಟೇ ನಿಮ್ಮ ಪಾದಗಳಿಗೂ ನಿಮ್ಮ ಗಮನ ಬೇಕು. ಕೊಬ್ಬರಿ ಎಣ್ಣೆ ನಿಮಗೆ ಆರೋಗ್ಯಕರ ಕೂದಲು, ಚರ್ಮ ಮತ್ತು ಉಗುರುಗಳನ್ನು ಹೊಂದಲು ಸಹಾಯ ಮಾಡುತ್ತದೆ. ತೆಂಗಿನ ಎಣ್ಣೆಯಿಂದ ಕಾಲು ಮಸಾಜ್ ಮಾಡುವ ನಿಯಮಿತ ಅಭ್ಯಾಸವು ನಿಮಗೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ.

ಒಂದು ಅಧ್ಯಯನದ ಪ್ರಕಾರ, ತೆಂಗಿನ ಸಾರವನ್ನು ಮಾನವ ಚರ್ಮದ ಮೇಲೆ ಅನ್ವಯಿಸುವುದರಿಂದ ಅದರ ಕಾರ್ಯವನ್ನು ರಕ್ಷಣಾತ್ಮಕ ತಡೆಗೋಡೆಯಾಗಿ ಹೆಚ್ಚಿಸುತ್ತದೆ. ಎಣ್ಣೆಯ ಮಸಾಜ್ ನಿಮ್ಮ ಪಾದಗಳ ಸ್ನಾಯುಗಳಿಗೆ ವಿಶ್ರಾಂತಿ ಮಾಡಲು, ಉರಿಯೂತವನ್ನು ಶಮನಗೊಳಿಸಲು ಮತ್ತು ಒತ್ತಡ ಅಥವಾ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕರ ಉಗುರು:

ವಿಶೇಷವಾಗಿ ಚಳಿಗಾಲದಲ್ಲಿ ಪಾದಗಳ ಹಿಮ್ಮಡಿ ಬಿರುಕು ಬಿಡುತ್ತದೆ. ತೆಂಗಿನ ಎಣ್ಣೆಯು ವಿಟಮಿನ್ ಇ ಮತ್ತು ನೈಸರ್ಗಿಕ ಪ್ರೋಟೀನ್‌ಗಳಿಂದ ಸಮೃದ್ಧವಾಗಿರುವುದರಿಂದ ಹಾನಿಗೊಳಗಾದ ಚರ್ಮದ ಕೋಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಎಣ್ಣೆ ಮಸಾಜ್ ನಿಮ್ಮ ಚರ್ಮದ ತೇವಾಂಶವನ್ನು ಲಾಕ್ ಮಾಡುತ್ತದೆ, ನಿಮ್ಮ ಹಿಮ್ಮಡಿಗಳು ಬಿರುಕು ಬಿಡುವುದನ್ನು ತಡೆಯುತ್ತದೆ.

ಇದನ್ನೂ ಓದಿ: ಉತ್ತಮ ನಿದ್ರೆಗೆ ಒಮ್ಮೆಯಾದರೂ ಈ ಸ್ಪೆಷಲ್ ಮಸಾಜ್ ಟ್ರೈ ಮಾಡಿ

ನಿಮ್ಮ ಉಗುರುಗಳ ಆರೋಗ್ಯವನ್ನು ಉತ್ತಮಗೊಳಿಸಲು, ನೀವು ತೆಂಗಿನ ಎಣ್ಣೆ ಮತ್ತು ಆಲಿವ್ ಎಣ್ಣೆಯ ಮಿಶ್ರಣವನ್ನು ನಿಮ್ಮ ಕಾಲ್ಬೆರಳ ಉಗುರುಗಳಿಗೆ ಹಚ್ಚಿಕೊಳ್ಳಬಹುದು. ಕನಿಷ್ಠ 5 ನಿಮಿಷಗಳ ಕಾಲ ಮೃದುವಾಗಿ ಮಸಾಜ್ ಮಾಡಬಹುದು. ಕೆಲವೇ ದಿನಗಳವರೆಗೆ ಈ ಉಗುರುಗಳ ಮಸಾಜ್ ದಿನಚರಿಯನ್ನು ಅನುಸರಿಸಿ ಮತ್ತು ನೀವು ಹೊಳೆಯುವ ಮತ್ತು ಬಲವಾದ ಉಗುರುಗಳನ್ನು ಹೊಂದುತ್ತೀರಿ.

ಆರೋಗ್ಯಕರ ಪಾದಗಳು:

ನಿಯಮಿತ ಎಣ್ಣೆ ಮಸಾಜ್ ನಿಮ್ಮ ಪಾದಗಳನ್ನು ಆರೋಗ್ಯಕರವಾಗಿಡಲು ಮತ್ತು ಅನೇಕ ಪಾದದ ಸಮಸ್ಯೆಗಳನ್ನು ತಡೆಯಲು ಸುಲಭವಾದ ಮಾರ್ಗವಾಗಿದೆ. ಇದು ನಿಮ್ಮ ಪಾದಗಳ ಸುತ್ತಲೂ ನಿಮ್ಮ ಕಾಲಿನ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ, ಅವುಗಳನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡುತ್ತದೆ. ಹಿಮ್ಮಡಿಗಳಲ್ಲಿ ನೋವನ್ನು ಕಡಿಮೆ ಮಾಡುತ್ತದೆ. ನಿಯಮಿತ ಎಣ್ಣೆ ಮಸಾಜ್ ಅಭ್ಯಾಸವು ನಿಮ್ಮ ಕಣಕಾಲುಗಳನ್ನು ಬಲವಾಗಿ ಮತ್ತು ಹೊಂದಿಕೊಳ್ಳುವಂತೆ ಮಾಡುತ್ತದೆ.

ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕುಗಳನ್ನು ತಡೆಯುತ್ತದೆ:

ತೆಂಗಿನ ಎಣ್ಣೆಯಿಂದ ನಿಯಮಿತವಾಗಿ ಮಸಾಜ್ ಮಾಡುವುದರಿಂದ ನಿಮ್ಮ ಪಾದಗಳನ್ನು ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಸೋಂಕಿನಿಂದ ರಕ್ಷಿಸಬಹುದು. ತೆಂಗಿನ ಎಣ್ಣೆಯ ತಡೆಗೋಡೆ ಕಾರ್ಯವು ರಿಂಗ್ವರ್ಮ್, ಎಸ್ಜಿಮಾ, ಉಗುರು ಶಿಲೀಂಧ್ರ ಮತ್ತು ಕೆಂಪು ಬಣ್ಣವನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Beauty Tips: ತೆಂಗಿನ ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನಗಳು

ನೈಸರ್ಗಿಕ ಡಿಯೋಡರೆಂಟ್ ಆಗಿ ಕೆಲಸ ಮಾಡುತ್ತದೆ:

ತೆಂಗಿನ ಎಣ್ಣೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳಿರುವುದರಿಂದ ನಿಮ್ಮ ಪಾದಗಳ ಮೇಲೆ ವಾಸನೆಯನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ತಡೆಯಲು ಸಹಾಯ ಮಾಡುತ್ತದೆ. ಇದು ನಿಮ್ಮ ಪಾದಗಳು ಮತ್ತು ಬೂಟುಗಳನ್ನು ಅಹಿತಕರ ವಾಸನೆಯಿಂದ ಮುಕ್ತಗೊಳಿಸುತ್ತದೆ.

ಉತ್ತಮ ನಿದ್ರೆಯನ್ನು ನೀಡುತ್ತದೆ:

ಮಲಗುವ ಮುನ್ನ ಕಾಲಿಗೆ ಎಣ್ಣೆಯಿಂದ ಮಸಾಜ್ ಮಾಡುವ ಮತ್ತೊಂದು ಪ್ರಯೋಜನವೆಂದರೆ ನಿಮ್ಮ ನಿದ್ರೆಯ ಗುಣಮಟ್ಟವನ್ನು ಸುಧಾರಿಸುವುದು ಮತ್ತು ಆಳವಾದ ನಿದ್ರೆಯ ಸಮಯವನ್ನು ಹೆಚ್ಚಿಸುವುದು.

ಮಲಗುವ ಮುನ್ನ 5 ರಿಂದ 10 ನಿಮಿಷಗಳ ಕಾಲ ತೆಂಗಿನ ಎಣ್ಣೆಯಿಂದ ನಿಮ್ಮ ಪಾದಗಳನ್ನು ಮೃದುವಾಗಿ ಮಸಾಜ್ ಮಾಡುವ ದಿನಚರಿಯು ನಿಮ್ಮ ರಕ್ತ ಪರಿಚಲನೆ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಮಧುಮೇಹ ಇರುವವರಿಗೆ ಈ ಅಭ್ಯಾಸವು ಹೆಚ್ಚು ಪ್ರಯೋಜನಕಾರಿಯಾಗಿದೆ.

ಕಾಲು ನೋವನ್ನು ಕಡಿಮೆ ಮಾಡುತ್ತದೆ:

ತೆಂಗಿನ ಎಣ್ಣೆಯ ಮಸಾಜ್ ಉರಿಯೂತವನ್ನು ಶಮನಗೊಳಿಸಲು ಮತ್ತು ನಿಮ್ಮ ಪಾದಗಳಲ್ಲಿ ಯಾವುದೇ ರೀತಿಯ ನೋವು ಮತ್ತು ಒತ್ತಡವನ್ನು ನಿವಾರಿಸಲು ತುಂಬಾ ಸಹಾಯಕವಾಗಿದೆ. ಪಾದದ ಮೇಲೆ ವಿಶೇಷ ಒತ್ತು ನೀಡುವ ಮೂಲಕ ಕಾಲು ಮಸಾಜ್ ಮಾಡುವ ನಿಯಮಿತ ಅಭ್ಯಾಸವು ನಿಮ್ಮ ಕಾಲು ಮತ್ತು ನಿಮ್ಮ ಇಡೀ ದೇಹದಲ್ಲಿನ ಒತ್ತಡದ ಸ್ನಾಯುಗಳನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!