AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care Tips : ದಟ್ಟವಾದ ಹೊಳಪುಳ್ಳ ಕೂದಲು ನಿಮ್ಮದಾಗಬೇಕೇ, ಮೆಂತ್ಯೆ ಕಾಳನ್ನು ಹೀಗೆ ಬಳಸಿ!

ಹೆಣ್ಣಿನ ಸೌಂದರ್ಯವನ್ನು ಮತ್ತಷ್ಟು ಇಮ್ಮಡಿಗೊಳಿಸುವುದೇ ನೀಳವಾದ ಕೂದಲು. ಆದರೆ ಇತ್ತೀಚೆಗಿನ ದಿನಗಳಲ್ಲಿ ಕೂದಲಿಗೆ ಕತ್ತರಿ ಹಾಕುವವರ ಸಂಖ್ಯೆಯು ಹೆಚ್ಚಾಗಿದೆ. ಉದ್ದ ಕೂದಲಿದ್ದರೆ ಅದರ ಆರೈಕೆ ಮಾಡುವುದು ಕಷ್ಟ ಎನ್ನುವುದು ಬಹುತೇಕರ ಅಭಿಪ್ರಾಯ. ಅದಲ್ಲದೇ, ಕೂದಲು ಉದುರುವುದು, ತಲೆ ಹೊಟ್ಟು, ಚರ್ಮದ ತುರಿಕೆ ಹೀಗೆ ನಾನಾ ರೀತಿಯ ಸಮಸ್ಯೆಗಳು ಕಾಡುತ್ತಿದ್ದು, ಅಡುಗೆ ಮನೆಯಲ್ಲಿರುವ ಮೆಂತ್ಯೆ ಕಾಳನ್ನು ಈ ರೀತಿ ಬಳಸಿದರೆ ದಪ್ಪವಾದ ನೀಳವಾದ ಕೂದಲು ನಿಮ್ಮದಾಗುತ್ತದೆ.

Hair Care Tips : ದಟ್ಟವಾದ ಹೊಳಪುಳ್ಳ ಕೂದಲು ನಿಮ್ಮದಾಗಬೇಕೇ, ಮೆಂತ್ಯೆ ಕಾಳನ್ನು ಹೀಗೆ ಬಳಸಿ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 10, 2024 | 11:23 AM

Share

ಮೆಂತ್ಯ ಕಾಳು ಗುಣದಲ್ಲಿ ಕಹಿಯಾದರೂ ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಈ ಮೆಂತ್ಯ ಕಾಳಿನಲ್ಲಿ ಕ್ಯಾಲರಿ, ಕಾರ್ಬೋಹೈಡ್ರೇಟ್, ಫೈಬರ್, ಪ್ರೊಟೀನ್ ಸೇರಿದಂತೆ ಅನೇಕ ಫೋಷಕಾಂಶಗಳು ಹೇರಳವಾಗಿವೆ. ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಕೂದಲಿನ ಆರೈಕೆಗೂ ಈ ಸಣ್ಣ ಸಣ್ಣ ಕಾಳುಗಳು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಈ ಮೆಂತ್ಯವು ಕೂದಲಿನ ಅನೇಕ ಸಮಸ್ಯೆಗಳನ್ನು ಪರಿಹರಿಸಿ ಕೂದಲು ಉದ್ದ ಹಾಗೂ ದಪ್ಪವಾಗಿ ಬೆಳೆಯುವಂತೆ ಮಾಡುತ್ತದೆ.

  • ಮೆಂತ್ಯ ಕಾಳುಗಳನ್ನು ತೆಗೆದುಕೊಂಡು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಇದರಲ್ಲಿರುವ ಪೋಷಕಾಂಶಗಳು ಕೂದಲಿನ ಆರೈಕೆ ಮಾಡುತ್ತದೆ.
  • ರಾತ್ರಿಯಿಡೀ ನೆನೆಸಿದ ಮೆಂತ್ಯ ಬೀಜಗಳನ್ನು ಸಲಾಡ್‌ಗಳಲ್ಲಿಯೂ ತಿನ್ನಬಹುದು. ಇಲ್ಲವಾದರೆ ದಿನನಿತ್ಯ ಅಡುಗೆಯಲ್ಲಿ ಈ ಮೆಂತ್ಯೆ ಕಾಳನ್ನು ಉಪಯೋಗಿಸಿ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
  • ನೆನೆಸಿದ ಮೆಂತ್ಯ ಕಾಳುಗಳ ನೀರನ್ನು ಸೋಸಿ ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಬೆಳಿಗ್ಗೆ ಕೂದಲಿಗೆ ಹೇರ್ ಸ್ಪ್ರೇ ರೀತಿಯಲ್ಲಿ ಬಳಸಬಹುದು. ಸ್ವಲ್ಪ ಸಮಯದ ನಂತರ ಕೂದಲನ್ನು ತೊಳೆದರೆ ಕೂದಲು ಉದುರುವಿಕೆ ಸಮಸ್ಯೆಯು ದೂರವಾಗುತ್ತದೆ.
  • ತೆಂಗಿನೆಣ್ಣೆಗೆ ಮೆಂತ್ಯೆ ಕಾಳನ್ನು ಹಾಕಿ ಕುದಿಸಿ ಈ ಎಣ್ಣೆಯನ್ನು ಹಚ್ಚುತ್ತ ಬಂದರೆ ಕೂದಲು ಕಪ್ಪಾಗಿ ಹಾಗೂ ಸೊಂಪಾಗಿ ಬೆಳೆಯುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್