AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Festival Season Recipes : ಹಬ್ಬಕ್ಕೆ ಮನೆಯಲ್ಲೇ ಸುಲಭವಾಗಿ ಮಾಡಬಹುದಾದ ಆರೋಗ್ಯಕರ ರೆಸಿಪಿಗಳಿವು

ಹಬ್ಬಗಳು ಸಾಲಾಗಿ ಬಂತೆಂದರೆ ಹೆಣ್ಣು ಮಕ್ಕಳಿಗೆ ಮನೆಯ ಅಲಂಕಾರದ ಜೊತೆಗೆ ಏನು ಅಡುಗೆ ಮಾಡುವುದು ಎನ್ನುವುದೇ ಯೋಚನೆ. ಈ ಸಮಯದಲ್ಲಿ ವಿವಿಧ ಸಿಹಿ ತಿನಿಸುಗಳನ್ನು ಮಾಡಲು ಮನೆಯಲ್ಲಿ ತಯಾರಿಯಂತೂ ನಡೆಯುತ್ತಿರುತ್ತದೆ. ಆದರೆ ಹಬ್ಬದ ಸಮಯದಲ್ಲಿ ಈ ಆರೋಗ್ಯಕರ ರೆಸಿಪಿಗಳಾದ ಬೇಸನ್ ಲಡ್ಡು, ರಾಗಿ ಖೀರ್ ಹಾಗೂ ನವಣೆ ತಂಬಿಟ್ಟನ್ನು ಟ್ರೈ ಮಾಡಬಹುದು. ಹಾಗಾದ್ರೆ ಈ ರೆಸಿಪಿಗಳನ್ನು ಮಾಡುವ ವಿಧಾನದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Festival Season Recipes : ಹಬ್ಬಕ್ಕೆ ಮನೆಯಲ್ಲೇ ಸುಲಭವಾಗಿ ಮಾಡಬಹುದಾದ ಆರೋಗ್ಯಕರ ರೆಸಿಪಿಗಳಿವು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Sep 10, 2024 | 5:45 PM

Share

ಹಬ್ಬವೆಂದ ಮೇಲೆ ಮನೆ ಮಂದಿಯೆಲ್ಲಾ ಸೇರಿ ಹಬ್ಬದಡುಗೆಯನ್ನು ಮಾಡುತ್ತಾರೆ. ಬಹುತೇಕ ಹಬ್ಬಗಳಲ್ಲಿ ದೇವರಿಗೆ ಪ್ರಸಾದ ರೂಪದಲ್ಲಿ ವಿವಿಧ ಖಾದ್ಯಗಳನ್ನು ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ಈ ಸಮಯದಲ್ಲಿ ದಿಢೀರನೆ ಆರೋಗ್ಯಕರವಾದ ಈ ರೆಸಿಪಿಯನ್ನು ಟ್ರೈ ಮಾಡಬಹುದು. ಅದರಲ್ಲಿ ಈ ಬೇಸನ್ ಲಡ್ಡು, ರಾಗಿ ಖೀರ್ ಹಾಗೂ ನವಣೆ ತಂಬಿಟ್ಟನ್ನು ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಈ ರೆಸಿಪಿಯು ಎಷ್ಟು ಸುಲಭವೋ ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ.

ಬೇಸನ್‌ ಲಡ್ದು ತಯಾರಿಸಲು ಬೇಕಾಗುವ ಸಾಮಗ್ರಿಗಳು:

* ಎರಡು ಕಪ್ ಕಡ್ಲೆಹಿಟ್ಟು

* ಮುಕ್ಕಾಲು ಕಪ್ ಸಕ್ಕರೆ ಪುಡಿ

* ತುಪ್ಪ

* ಏಲಕ್ಕಿ ಪುಡಿ

* ಪಿಸ್ತಾ ಹಾಗೂ ಗೋಡಂಬಿ

ಬೇಸನ್‌ ಲಡ್ದು ಮಾಡುವ ವಿಧಾನ:

* ಮೊದಲಿಗೆ ಈ ಕಡ್ಲೆಹಿಟ್ಟನ್ನು ಜರಡಿ ಮಾಡಿಕೊಳ್ಳಿ. ಆ ಬಳಿಕ ಬಾಣಲೆಗೆ ಸ್ವಲ್ಪ ತುಪ್ಪ ಸೇರಿಸಿ ಈ ಕಡ್ಲೆಹಿಟ್ಟು ಸೇರಿಸಿ ಕಡಿಮೆ ಉರಿಯಲ್ಲಿ 15 ನಿಮಿಷಗಳ ಕಾಲ ಚೆನ್ನಾಗಿ ಹುರಿದು ಕೊಳ್ಳಿ.

* ಆದರೆ ಎರಡು ಮೂರು ನಿಮಿಷಕ್ಕೊಮ್ಮೆ ತುಪ್ಪ ಸೇರಿಸುತ್ತಾ ಕಡ್ಲೆಹಿಟ್ಟು ಹಸಿ ವಾಸನೆ ಹೋಗುವವರೇ ಫ್ರೈ ಮಾಡಿಕೊಳ್ಳಿ.

* ಈ ಮಿಶ್ರಣವನ್ನು ತಣ್ಣಗಾಗಲು ಬಿಟ್ಟು, ನಂತರದಲ್ಲಿ ಏಲಕ್ಕಿ ಪುಡಿ, ಸಕ್ಕರೆ ಪುಡಿ ಸೇರಿಸಿ ಕಲಸಿಕೊಳ್ಳಿ.

* ತದನಂತರದಲ್ಲಿ ಕೈಗೆ ತುಪ್ಪ ಸವರಿಕೊಂಡು ಉಂಡೆಗಳನ್ನು ಕಟ್ಟಿ. ಇದರ ಮೇಲೆ ಪಿಸ್ತಾ ಹಾಗೂ ಗೋಡಂಬಿಯಿಂದ ಅಲಂಕರಿಸಿದರೆ ರುಚಿಕರವಾದ ಬೇಸನ್ ಲಡ್ಡು ಸವಿಯಲು ಸಿದ್ಧ.

ರಾಖಿ ಖೀರ್ ಮಾಡಲು ಬೇಕಾಗುವ ಸಾಮಗ್ರಿಗಳು:

* ತುಪ್ಪ

* ಏಲಕ್ಕಿ

* ಅರ್ಧ ಕಪ್ ರಾಗಿ ಹಿಟ್ಟು

* ನೀರು

* ಒಂದು ಕಪ್ ಹಾಲು,

* ಬೆಲ್ಲ

* ಗೋಡಂಬಿ, ಪಿಸ್ತಾ, ಬಾದಾಮಿ

* ರುಚಿಗೆ ತಕ್ಕಷ್ಟು ಉಪ್ಪು

ರಾಗಿ ಖೀರ್ ರೆಸಿಪಿ ಮಾಡುವ ವಿಧಾನ:

* ಮೊದಲಿಗೆ ಒಂದು ಬಾಣಲೆಗೆ ನೀರು ಬೆರೆಸಿದ ಹಾಲು ಹಾಕಿ ಅದಕ್ಕೆ ರಾಗಿ ಹಿಟ್ಟು ಗಂಟಾಗದಂತೆ ಕಲಸಿಕೊಳ್ಳಿ.

* ಈ ಮಿಶ್ರಣಕ್ಕೆ ಬೆಲ್ಲ ಹಾಗೂ ದಪ್ಪ ಹಾಲು ಸೇರಿಸಿ ಮತ್ತೊಮ್ಮೆ ಚೆನ್ನಾಗಿ ಕುದಿಸಿಕೊಳ್ಳಿ.

* ಈಗಾಗಲೇ ಕತ್ತರಿಸಿಟ್ಟ ಗೋಡಂಬಿ, ಪಿಸ್ತಾ, ಬಾದಾಮಿ, ಏಲಕ್ಕಿ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕುದಿಸಿಕೊಂಡರೆ ರಾಖಿ ಖೀರ್ ಸವಿಯಲು ಸಿದ್ಧ.

ನವಣೆ ತಂಬಿಟ್ಟು ತಯಾರಿಸಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ನವಣೆ

* ಒಂದು ಚಮಚ ಅಕ್ಕಿ

* ಒಂದು ಚಮಚ ಕಡಲೆಬೇಳೆ

* ನೀರು

* ಬೆಲ್ಲ

* ಏಲಕ್ಕಿ

* ತುಪ್ಪ

ಇದನ್ನೂ ಓದಿ: ತುಳುವರಿಗೆ ಸಂತಸದ ಸುದ್ದಿ, ಯೂನಿಕೋಡ್​​ಗೆ ತುಳುಲಿಪಿ ಸೇರ್ಪಡೆ

ನವಣೆ ತಂಬಿಟ್ಟು ಮಾಡುವ ವಿಧಾನ:

* ನವಣೆ, ಅಕ್ಕಿ ಮತ್ತು ಕಡಲೇ ಬೇಳೆ ಈ ಮೂರನ್ನು ಒಟ್ಟಿಗೆ ಹುರಿದು, ಮಿಕ್ಸರ್ ಗೆ ಹಾಕಿ ಪುಡಿಮಾಡಿಕೊಳ್ಳಿ.

* ಸ್ಟವ್ ಮೇಲೆ ನೀರು ಕುದಿಯುತ್ತಿದ್ದಂತೆ ಬೆಲ್ಲ ಸೇರಿಸಿಕೊಳ್ಳಿ. ಬೆಲ್ಲ ಕರಗುವ ಮೊದಲು ಮಾಡಿಟ್ಟ ಪುಡಿಯನ್ನು ಸೇರಿಸಿ ಚೆನ್ನಾಗಿ ಬೆರೆಸಿಕೊಳ್ಳಿ

* ಈ ಮಿಶ್ರಣವು ಗಟ್ಟಿಯಾಗುತ್ತಿದ್ದಂತೆ ಸ್ಟವ್ ಆಫ್ ಮಾಡಿ ತಣ್ಣಗಾಗಲು ಬಿಡಿ. * ಆ ಬಳಿಕ ಕೈಗೆ ತುಪ್ಪ ಸವರಿಕೊಂಡು ಉಂಡೆ ಕಟ್ಟಿದರೆ ಈ ಸಿಹಿ ತಿನಿಸು ಸವಿಯಲು ಸಿದ್ಧವಾದಂತೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Tue, 10 September 24

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ