AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fitness Tips: ನೀವು ಪ್ರತಿನಿತ್ಯ ವಾರ್ಮ್ ಅಪ್ ಮಾಡುತ್ತೀರಾ? ಹಾಗಾದರೆ ಈ ತಪ್ಪುಗಳನ್ನು ಮಾಡಬೇಡಿ

ಕೆಲವರು ಕೆಲವೊಮ್ಮೆ ನೇರವಾಗಿ ವ್ಯಾಯಾಮ ಮಾಡಲು ಪ್ರಾರಂಭಿಸುತ್ತಾರೆ. ಇದು ಸಂಪೂರ್ಣ ತಪ್ಪು ಕ್ರಮ ಎನ್ನುತ್ತಾರೆ ಫಿಟ್ನೆಸ್ ತಜ್ಞರು.

Fitness Tips: ನೀವು ಪ್ರತಿನಿತ್ಯ ವಾರ್ಮ್ ಅಪ್ ಮಾಡುತ್ತೀರಾ? ಹಾಗಾದರೆ ಈ ತಪ್ಪುಗಳನ್ನು ಮಾಡಬೇಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 31, 2022 | 7:00 AM

Share

ಆರೋಗ್ಯಕರವಾಗಿರಲು ವ್ಯಾಯಾಮ (Exercise) ಅತ್ಯಗತ್ಯ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಸರಿಯಾಗಿ ವ್ಯಾಯಾಮ ಮಾಡುವುದಾಗಿದೆ. ಏಕೆಂದರೆ ಕೆಲವರು ಕೆಲವೊಮ್ಮೆ ನೇರವಾಗಿ ವ್ಯಾಯಾಮ ಮಾಡಲು ಪ್ರಾರಂಭಿಸುತ್ತಾರೆ. ಇದು ಸಂಪೂರ್ಣ ತಪ್ಪು ಕ್ರಮ ಎನ್ನುತ್ತಾರೆ ಫಿಟ್ನೆಸ್ ತಜ್ಞರು. ಸರಳ ವ್ಯಾಯಾಮ ದೇಹಕ್ಕೆ ಸಾಕಷ್ಟು ತ್ರಾಣವನ್ನು ನೀಡುತ್ತದೆ. ಇದು ನಿಮಗೆ ಹೆಚ್ಚು ಸಮಯ ವ್ಯಾಯಾಮ ಮಾಡಲು ಅನುವು ಮಾಡಿಕೊಡುತ್ತದೆ. ಆದರೆ ವ್ಯಾಯಾಮ ಮಾಡುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಪರಿಣಾಮವಾಗಿ, ಅಂತಹ ಜನರು ವ್ಯಾಯಾಮದಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯುವುದಿಲ್ಲ. ಹಾಗಾದರೆ ವ್ಯಾಯಾಮ ಮಾಡುವ ಸರಿಯಾದ ಕ್ರಮ ಏನು ಎಂದು ತಿಳಿಯೋಣ.

ಇದನ್ನೂ ಓದಿ; Calcium Deficiency: ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಾದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

ಈ ತಪ್ಪುಗಳನ್ನು ಮಾಡಬೇಡಿ!

ಸರಳ ವ್ಯಾಯಾಮ:

ಯಾವುದೇ ವ್ಯಾಯಾಮಕ್ಕೂ ಅಭ್ಯಾಸವು ತುಂಬಾ ಮುಖ್ಯವಾಗಿದೆ. ನೀವು ಯಾವಾಗಲೂ ಕನಿಷ್ಠ 10 ನಿಮಿಷಗಳ ಕಾಲ ಸರಳ ವ್ಯಾಯಾಮ ಮಾಡುವುದು ಉತ್ತಮ. ಹೀಗೆ ಮಾಡುವುದರಿಂದ ಮಾತ್ರ ವ್ಯಾಯಾಮದ ನಂತರ ಸಂಪೂರ್ಣ ಪ್ರಯೋಜನವನ್ನು ಪಡೆಯಲು ಸಾಧ್ಯ.

ಸ್ಟ್ರೆಚಿಂಗ್ ಚೆನ್ನಾಗಿ ಮಾಡಬೇಕು:

ವ್ಯಾಯಾಮದ ಮೊದಲು ಸ್ಟ್ರೆಚಿಂಗ್ ಮಾಡುವುದು ಅತ್ಯಗತ್ಯ. ಫಿಟ್ ಆಗಿ ಉಳಿಯಲು ಸರಿಯಾದ ವ್ಯಾಯಾಮ ಅಭ್ಯಾಸವು ಪ್ರಯೋಜನಕಾರಿಯಾಗಿದೆ. ಸ್ಟ್ರೆಚಿಂಗ್ ದೇಹದಾದ್ಯಂತ ರಕ್ತ ಮತ್ತು ಆಮ್ಲಜನಕದ ಪೂರೈಕೆಯನ್ನು ಸುಧಾರಿಸುತ್ತದೆ. ಆದ್ದರಿಂದ ನೀವು ವ್ಯಾಯಾಮ ಮಾಡುತ್ತಿದ್ದರೆ ಸರಿಯಾಗಿ ಸ್ಟ್ರೆಚಿಂಗ್ ಮಾಡಲು ಮರೆಯದಿರಿ.

ಇದನ್ನೂ ಓದಿ: Headache: ಬೆಳಗ್ಗೆ ಎದ್ದ ತಕ್ಷಣ ತಲೆನೋವಿನಿಂದ ಬಳಲುತ್ತೀರಾ? ಇಲ್ಲಿದೆ ಪರಿಹಾರ

ಪ್ರತಿದಿನ ನಿಮ್ಮ ಅಭ್ಯಾಸವನ್ನು ಬದಲಾಯಿಸುವುದು ಒಳ್ಳೆಯದು:

ವ್ಯಾಯಾಮದಂತೆಯೇ ವಾರ್ಮ್ ಅಪ್ ಮಾಡುವುದನ್ನು ಪ್ರತಿದಿನ ಅಭ್ಯಾಸ ಮಾಡಿಕೊಳ್ಳಿ. ಅದರ ಪರಿಣಾಮಕಾರಿತ್ವವು ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಹಾಗಾಗಿ ವ್ಯಾಯಾಮದ ಜೊತೆಗೆ ವಾರ್ಮ್ ಅಪ್ ವ್ಯಾಯಾಮದಲ್ಲೂ ವೈವಿಧ್ಯತೆಯನ್ನು ತರಲು ಪ್ರಯತ್ನಿಸಿ.

(ಸೂಚನೆ: ಈ ಮೇಲೆ ನೀಡಿದ ವಿಷಯವು ಮಾಹಿತಿಗಾಗಿ ಮಾತ್ರವಾಗಿದ್ದು, ಟಿವಿ9 ಡಿಜಿಟಲ್​ಗೆ ಸಂಬಂಧಿಸಿರುವುದಿಲ್ಲ. ಸೂಕ್ತ ಮಾರ್ಗದರ್ಶನ ಅಥವಾ ಚಿಕಿತ್ಸೆಗಾಗಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು