AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈಹಿಕ, ಮಾನಸಿಕ ದಣಿವನ್ನು ನಿವಾರಿಸಲು ಈ ಸುಲಭ ತಂತ್ರಗಳನ್ನು ತಪ್ಪದೇ ಪಾಲಿಸಿ

ಬಿಡುವಿಲ್ಲದ ಕೆಲಸ, ಬ್ಯುಸಿ ಜೀವನಶೈಲಿ ಈ ಎಲ್ಲಾ ದೈನಂದಿನ ಜಂಜಾಟವು ದೇಹ ಮತ್ತು ಮನಸ್ಸನ್ನು ಆಯಾಸಗೊಳಿಸುತ್ತದೆ. ಇದರಿಂದ ಸ್ನಾಯುಗಳ ಸೆಳೆತ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಮಾತ್ರವಲ್ಲ ಕಿರಿಕಿರಿ ಕೂಡ ಉಂಟಾಗುತ್ತದೆ. ಹೀಗಿರುವಾಗ ನಿಮಗಾಗಿ ನೀವು ಸ್ವಲ್ಪ ಸಮಯವನ್ನು ಮೀಸಲಿಟ್ಟು ಈ ಎಲ್ಲಾ ಕೆಲಸಗಳನ್ನು ಪಾಲಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಆಯಾಸವನ್ನು ನಿವಾರಿಸಿ, ಆರಾಮದಾಯಕವಾಗಿರಬಹುದು.

ದೈಹಿಕ, ಮಾನಸಿಕ ದಣಿವನ್ನು ನಿವಾರಿಸಲು ಈ ಸುಲಭ ತಂತ್ರಗಳನ್ನು ತಪ್ಪದೇ ಪಾಲಿಸಿ
ಸಾಂದರ್ಭಿಕ ಚಿತ್ರImage Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 04, 2026 | 5:52 PM

Share

ಬೆಳಗ್ಗೆ ಎದ್ದ ತಕ್ಷಣ ನಾವು ತುಂಬಾ ಆಕ್ಟಿವ್‌ ಆಗಿದ್ದರೂ, ಕೆಲಸದ ಒತ್ತಡ, ಬ್ಯುಸಿ ಜೀವನಶೈಲಿ ಇವೆಲ್ಲದರ ಕಾರಣದಿಂದಾಗಿ ಸಂಜೆಯ ವೇಳೆಗೆ ಸುಸ್ತು (Fatigue) ಕಾಣಿಸಿಕೊಳ್ಳುತ್ತದೆ. ಹೌದು ಸ್ನಾಯು ಸೆಳೆತ, ತಲೆ ನೋವು, ದೇಹ ನೋವಿನಂತಹ ದೈಹಿಕ ಆಯಾಸ ಮಾತ್ರವಲ್ಲ ಮಾನಸಿಕ ಆಯಾಸವು ಕಾಣಿಸಿಕೊಳ್ಳುತ್ತದೆ. ಇದರಿಂದಾಗಿ ಬೇಗನೆ ಕೋಪಗೊಳ್ಳುತ್ತೇವೆ, ಕಿರಿಕಿರಿಯ ಭಾವನೆಯನ್ನು ಅನುಭವಿಸುತ್ತೇವೆ. ಹೀಗಿರುವಾಗ ನಿಮಗಾಗಿ ನೀವು ಸ್ವಲ್ಪ ಸಮಯವನ್ನು ಮೀಸಲಿಡುವ ಮೂಲಕ ದಿನನಿತ್ಯ ಅನುಭವಿಸುವಂತಹ ಈ ದೈಹಿಕ, ಮಾನಸಿಕ ಆಯಾಸವನ್ನು ಹೋಗಲಾಡಿಸಬಹುದು. ದಣಿವನ್ನು ನಿವಾರಿಸುವ ಆ ತಂತ್ರಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಆಯಾಸವನ್ನು ನಿವಾರಿಸಲು ಸಂಜೆ ಈ ಕೆಲಸಗಳನ್ನು ಮಾಡಿ:

ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ: ಕೆಲಸದಿಂದ ಮನೆಗೆ ಬಂದ ತಕ್ಷಣ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ, ಇದರಿಂದ ಸ್ನಾಯುಗಳ ಒತ್ತಡ ಮತ್ತು ಬಿಗಿತ ಕಡಿಮೆಯಾಗುತ್ತದೆ. ಇದು ದೈಹಿಕ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ದೇಹದ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಗಿಡಮೂಲಿಕೆ ಚಹಾ ಸೇವಿಸಿ: ಸಾಮಾನ್ಯ ಚಹಾದ ಬದಲು ಕೆಲಸದಿಂದ ಮರಳಿ ಮನೆಗೆ ಬಂದ ನಂತರ  ಗಿಡಮೂಲಿಕಾ ಚಹಾವನ್ನು ಸೇವನೆ ಮಾಡಿ. ಕ್ಯಾಮೊಮೈಲ್ ಅಥವಾ ಲ್ಯಾವೆಂಡರ್ ಟೀ ಮನಸ್ಸನ್ನು ಶಾಂತಗೊಳಿಸುವ ಗುಣಗಳನ್ನು ಹೊಂದಿವೆ ಮತ್ತು ದೇಹವನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತವೆ. ಈ ಚಹಾಗಳು ಕೆಫೀನ್ ರಹಿತವಾಗಿದ್ದು, ಇದು ರಾತ್ರಿಯ ವೇಳೆ ವಿಶ್ರಾಂತಿ ಮತ್ತು ಆಳವಾದ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ.

ಆಳವಾದ ಉಸಿರಾಟ ಮತ್ತು ಧ್ಯಾನ ಮಾಡಿ: ಇದು ಆಯಾಸವನ್ನು ನಿವಾರಿಸಲು ಇರುವ ಉತ್ತಮ ಮಾರ್ಗವಾಗಿದೆ. ಧ್ಯಾನ ಅಥವಾ ಆಳವಾದ ಉಸಿರಾಟದ ವ್ಯಾಯಾಮ ಮಾಡುವಾಹ ನಾವು ಎಲ್ಲಾ ಚಿಂತೆಗಳನ್ನು ಮರೆತು ನಮ್ಮ ಉಸಿರಾಟದ ಮೇಲೆ ಮಾತ್ರ ಗಮನಹರಿಸುತ್ತೇವೆ. ಇದರಿಂದ ಒತ್ತಡ ನಿವಾರಣೆಯಾಗುತ್ತದೆ. ಅಲ್ಲದೆ ಆಳವಾದ ಉಸಿರಾಟ ಮತ್ತು ಧ್ಯಾನವು ರಾತ್ರಿಯ ಉತ್ತಮ ನಿದ್ರೆಯನ್ನು ಪಡೆಯಲು ಉತ್ತಮ ಮಾರ್ಗವಾಗಿದೆ.

ಇದನ್ನೂ ಓದಿ: ಫೋನ್‌ ವ್ಯಸನದಿಂದ ಮುಕ್ತರಾಗಲು ಸರಳ ಡಿಜಿಟಲ್‌ ಡಿಟಾಕ್ಸ್‌ ತಂತ್ರಗಳನ್ನು ಪಾಲಿಸಿ

ಅರೋಮಾ ಥೆರಪಿ: ಗಿಡಮೂಲಿಕಾ ಸಸ್ಯಗಳು ಮತ್ತು ಹೂವುಗಳಿಂದ ತಯಾರಿಸಲ್ಪಟ್ಟ ಸಾರಭೂತ ತೈಲಗಳು ಮನಸ್ಥಿತಿಯನ್ನು ಸುಧಾರಿಸುತ್ತವೆ, ಆಯಾಸವನ್ನು ಸಹ ನಿವಾರಿಸುತ್ತವೆ. ಸ್ನಾನದ ನೀರಿನಲ್ಲಿ ಅಥವಾ ಕೋಣೆಯಲ್ಲಿ ಈ ಎಣ್ಣೆಗಳ ಪರಿಮಳವನ್ನು ಹರಡುವುದರಿಂದ ವಿಶ್ರಾಂತಿ ಪಡೆಯಲು ಸಹಾಯವಾಗುತ್ತದೆ.

ಪ್ರೀತಿಪಾತ್ರರು ಅಥವಾ ಸ್ನೇಹಿತರೊಂದಿಗೆ ಸಮಯ ಕಳೆಯಿರಿ: ನೀವು ಒತ್ತಡಕ್ಕೊಳಗಾಗಿದ್ದಾಗಲೆಲ್ಲಾ, ಅದನ್ನು ತಪ್ಪಿಸಲು ಉತ್ತಮ ಮಾರ್ಗವೆಂದರೆ ನಿಮ್ಮ ಪ್ರೀತಿಪಾತ್ರರು ಅಥವಾ ಸ್ನೇಹಿತರೊಂದಿಗೆ ಸಮಯ ಕಳೆಯುವುದು. ಏಕೆಂದರೆ ನಾವು ಆ ಜನರನ್ನು ಭೇಟಿಯಾದಾಗ, ನಮಗೆ ಸಂತೋಷವಾಗುತ್ತದೆ. ಆಗ ನಾವು ನಮ್ಮ ಎಲ್ಲಾ ಚಿಂತೆಗಳನ್ನು ಮರೆತು ಖುಷಿಯಾಗಿರುತ್ತೇವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?