AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸ್ಮಾರ್ಟ್‌ ಟ್ರಿಕ್ಸ್‌ ಪಾಲಿಸುವ ಮೂಲಕ ಮಳೆಗಾಲದಲ್ಲಿ ಬಟ್ಟೆಗಳನ್ನು ಸುಲಭವಾಗಿ ಒಣಗಿಸಬುದು

ಮಳೆಗಾಲ ಆರಂಭವಾಗಿದೆ. ಆಹ್ಲಾದಕರವಾಗಿರುವ ಈ ಋತುವಿನಲ್ಲಿ ಬಟ್ಟೆಗಳನ್ನು ಒಣಗಿಸುವುದೇ ಒಂದು ಸವಾಲಿನ ಕೆಲಸ. ವಾತಾವರಣದಲ್ಲಿನ ತೇವಾಂಶದ ಕಾರಣದಿಂದಾಗಿ ಮಳೆಗಾಲದಲ್ಲಿ ಬಟ್ಟೆ ಒಣಗುವುದೇ ಇಲ್ಲ, ಈ ಕಾರಣದಿಂದಾಗಿ ಬಟ್ಟೆಗಳು ವಾಸನೆ ಬರಲು ಪ್ರಾರಂಭಿಸುತ್ತವೆ. ಹೀಗಿರುವಾಗ ಈ ಕೆಲವೊಂದು ಸಿಂಪಲ್‌ ಸಲಹೆಗಳನ್ನು ಪಾಲಿಸುವ ಮೂಲಕ ಸುಲಭವಾಗಿ ಬಟ್ಟೆಗಳನ್ನು ಒಣಗಿಸಬಹುದು.

ಈ ಸ್ಮಾರ್ಟ್‌ ಟ್ರಿಕ್ಸ್‌ ಪಾಲಿಸುವ ಮೂಲಕ ಮಳೆಗಾಲದಲ್ಲಿ ಬಟ್ಟೆಗಳನ್ನು ಸುಲಭವಾಗಿ ಒಣಗಿಸಬುದು
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 11, 2026 | 5:45 PM

Share

ಮಳೆಗಾಲದಲ್ಲಿ (rainy season) ಒಗೆದ ಬಟ್ಟೆಗಳನ್ನು ಒಣಗಿಸುವುದು ತುಂಬಾ ಕಷ್ಟಕರವಾದ ಕೆಲಸ. ಈ ಋತುವಿನಲ್ಲಿ ಸರಿಯಾಗಿ ಸೂರ್ಯನ ಬೆಳಕು ಬೀಳದಿರುವ ಕಾರಣ, ವಾತಾರವರಣದಲ್ಲಿ ತೇವಾಂಶ ಹೆಚ್ಚಿರುವ ಕಾರಣ ಒಗೆದ ಬಟ್ಟೆಗಳು ಬೇಗನೆ ಒಣಗುವುದಿಲ್ಲ. ಸರಿಯಾಗಿ ಒಣಗದಿದ್ದರೆ ಬಟ್ಟೆಗಳಿಂದ ಒಂದು ರೀತಿಯ ಕೆಟ್ಟ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಮಳೆಗಾಲ ಬಂತೆಂದರೆ ಸಾಕು ಹೆಚ್ಚಿನವರಿಗೆ ಬಟ್ಟೆ ಒಣಗಿಸುವುದು, ಬಟ್ಟೆಗಳು ವಾಸನೆ ಬಾರದಂತೆ ನೋಡಿಕೊಳ್ಳುವುದೇ ದೊಡ್ಡ ತಲೆ ಬಿಸಿಯಾಗಿರುತ್ತದೆ. ಹೀಗಿರುವಾಗ ಈ ಕೆಲವೊಂದು ಟ್ರಿಕ್ಸ್‌ಗಳನ್ನು ಪಾಲಿಸುವ ಮೂಲಕ ಒಗೆದ ಬಟ್ಟೆಗಳನ್ನು ಬಲು ಸುಲಭವಾಗಿ ಒಣಗಿಸಬಹುದು.

ಮಳೆಗಾಲದಲ್ಲಿ ಒಗೆದ ಬಟ್ಟೆಗಳನ್ನು ಈ ರೀತಿಯಾಗಿ ಒಣಗಿಸಿ:

ಬಟ್ಟೆಗಳನ್ನು ಚೆನ್ನಾಗಿ ಹಿಂಡಿ:  ಒಗೆದ ಬಟ್ಟೆಗಳಿಂದ ನೀರನ್ನು ಹಿಂಡಿ ತೆಗೆಯುವುದು ತುಂಬಾನೇ ಮುಖ್ಯ. ವಾಷಿಂಗ್ ಮೆಷಿನ್‌ನಲ್ಲಿ ಬಟ್ಟೆ ತೊಳೆಯುತ್ತಿದ್ದೀರಿ ಎಂದಾದ್ರೆ ಎಕ್ಸ್‌ಟ್ರಾ ಸ್ಪಿನ್ ಅಥವಾ ಡ್ರೈಯರ್ ಮೋಡ್ ಅನ್ನು ಬಳಸಿಕೊಂಡು ಬಟ್ಟೆಗಳನ್ನು ಡ್ರೈ ಮಾಡಿ ನಂತರ ಒಣಗಲು ಹಾಕಿ. ವಾಷಿಂಗ್‌ ಮೆಷಿನ್‌ ಇಲ್ಲ ಎಂದಾದ್ರೆ ಬಟ್ಟೆಗಳನ್ನು ಚೆನ್ನಾಗಿ ಹಿಂಡಿ ಪೈಪ್‌ನಲ್ಲಿ ಪೈಪ್‌ನಲ್ಲಿ ನೇತುಹಾಕಿ. ಬಟ್ಟೆಯಿಂದ ನೀರು ಸಂಪೂರ್ಣವಾಗಿ ಬರಿದಾಗಲು ಬಿಡಿ ಮತ್ತು ನಂತರ ಅವುಗಳನ್ನು ಒಣಗಲು ಹಾಕಿ.

ಬಟ್ಟೆಗಳನ್ನು ದೂರ ದೂರ ಒಣಹಾಕಿ: ಇರಿಸಿ: ಬಟ್ಟೆಗಳನ್ನು ಒಣಗಿಸುವಾಗ, ಅವುಗಳನ್ನು ತುಂಬಾ ಹತ್ತಿರದಲ್ಲಿ ಜೋಡಿಸುವ ಬದಲು, ಅವುಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರುವಂತೆ ಹರಡಿ. ಅವುಗಳನ್ನು ತುಂಬಾ ಹತ್ತಿರದಲ್ಲಿ ಒಣ ಹಾಕಿದರೆ, ಬಟ್ಟೆಗಳು ಒಣಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.

ಫ್ಯಾನ್ ಬಳಸಿ: ಮಳೆಗಾಲದಲ್ಲಿ ಎಲ್ಲರೂ ಸಾಮಾನ್ಯವಾಗಿ ಮನೆಯೊಳಗೆ ಬಟ್ಟೆಗಳನ್ನು ಒಣಗಿಸುತ್ತಾರೆ. ಹೀಗಿರುವಾಗ ಕೋಣೆಯಲ್ಲಿ ಟೇಬಲ್ ಫ್ಯಾನ್ ಅಥವಾ ಸೀಲಿಂಗ್ ಫ್ಯಾನ್ ಅನ್ನು ಆನ್ ಮಾಡಿ. ಫ್ಯಾನ್ ಗಾಳಿಯು ಬಟ್ಟೆಗಳಿಂದ ತೇವಾಂಶವನ್ನು ಸುಲಭವಾಗಿ ಆವಿಯಾಗಿಸಲು ಸಹಾಯ ಮಾಡುತ್ತದೆ.  ಮತ್ತು ಬಟ್ಟೆಗಳು ವೇಗವಾಗಿ ಒಣಗುತ್ತವೆ.

ಇಸ್ತ್ರಿ ಮಾಡಿ:  ನೀವು ಒದ್ದೆಯಾದ ಬಟ್ಟೆಯ ಮೇಲೆ ತೆಳುವಾದ ಟವಲ್ ಅನ್ನು ಇಟ್ಟು ಅದನ್ನು ಇಸ್ತ್ರಿ ಮಾಡಬಹುದು. ಇಸ್ತ್ರಿ ಮಾಡುವಾಗ ಉತ್ಪತ್ತಿಯಾಗುವ ಶಾಖವು ಬಟ್ಟೆಯಲ್ಲಿರುವ ತೇವಾಂಶ ಬೇಗನೆ ಆವಿಯಾಗುತ್ತದೆ. ಜೀನ್ಸ್ ಅಥವಾ ಸ್ವೆಟರ್‌ಗಳಂತಹ ದಪ್ಪ ಬಟ್ಟೆಗಳನ್ನು ಒಣಗಿಸಲು ಈ ವಿಧಾನವು ಉಪಯುಕ್ತವಾಗಿದೆ.

ಇದನ್ನೂ ಓದಿ:  ಒಣಗಿದ ನಿಂಬೆಯನ್ನು ಎಸೆಯುವ ಬದಲು ರೀತಿಯಾಗಿ ಉಪಯೋಗಿಸಿಕೊಳ್ಳಿ

ಹೇರ್‌ ಡ್ರೈಯರ್‌ ಬಳಸಿ: ಹೇರ್ ಡ್ರೈಯರ್ ಕೂದಲನ್ನು ಒಣಗಿಸಲು ಮಾತ್ರವಲ್ಲ, ಬಟ್ಟೆಗಳನ್ನು ಒಣಗಿಸಲು ಸಹ ಬಳಸಬಹುದು. ಅದನ್ನು ಹೀಟ್‌ ಮೋಡ್‌ಗೆ ಹೊಂದಿಸಿ ಮತ್ತು ಬಟ್ಟೆಗಳನ್ನು ಒಣಗಿಸಿ. ಕನಿಷ್ಠ ಐದು ನಿಮಿಷಗಳ ಕಾಲ ಈ ಪ್ರಕ್ರಿಯೆಯನ್ನು ಮುಂದುವರಿಸಿ, ನಂತರ ಆ ಬಟ್ಟೆಗಳನ್ನು ಅರ್ಧ ಘಂಟೆಯವರೆಗೆ ಫ್ಯಾನ್ ಅಡಿಯಲ್ಲಿ ಬಿಡಿ. ಅವು ಎಷ್ಟು ಚೆನ್ನಾಗಿ ಒಣಗುತ್ತವೆ.

ಹೀಟರ್ ಬಳಸಿ: ಸಾಮಾನ್ಯವಾಗಿ ಚಳಿಗಾಲದಲ್ಲಿ ಹೀಟರ್‌ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಅಲ್ಲದೆ ಬೇಸಿಗೆಯಲ್ಲಿ ಬಟ್ಟೆಗಳನ್ನು ಒಣಗಿಸಲು ನೀವು ಅವುಗಳನ್ನು ಬಳಸಬಹುದು. ನಿಮ್ಮ ಹೀಟರ್ ಅನ್ನು ಕೋಣೆಯಲ್ಲಿ ಇರಿಸಿ ಮತ್ತು ಬಟ್ಟೆ ಒಣಗಲು ಬಿಡಿ. ಹೀಟರ್‌ನಿಂದ ಬರುವ ಶಾಖವು ಬಟ್ಟೆಗಳನ್ನು ಸಂಪೂರ್ಣವಾಗಿ ಒಣಗಿಸುತ್ತದೆ ಮತ್ತು ವಾಸನೆಯನ್ನು ನಿವಾರಿಸುತ್ತದೆ.

ವಾಸನೆ ತಡೆಯಲು ವಿನೆಗರ್ ಮತ್ತು ನಿಂಬೆ ಬಳಸಿ: ಮಳೆಗಾಲದಲ್ಲಿ ಬಟ್ಟೆಗಳು ಸಂಪೂರ್ಣವಾಗಿ ಒಣಗದಿದ್ದಾಗ, ಅವುಗಳಿಂದ ಅಹಿತಕರ ವಾಸನೆ ಬರಬಹುದು. ಇದನ್ನು ತಪ್ಪಿಸಲು, ನೀವು ಬಟ್ಟೆಗಳನ್ನು ತೊಳೆಯುವ ನೀರಿಗೆ ಒಂದು ಕಪ್ ವಿನೆಗರ್ ಅಥವಾ ಸ್ವಲ್ಪ ನಿಂಬೆ ರಸವನ್ನು ಸೇರಿಸಬಹುದು. ವಿನೆಗರ್ ನಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ವಾಸನೆಯನ್ನು ಉಂಟುಮಾಡುವ ಸೂಕ್ಷ್ಮಜೀವಿಗಳನ್ನು ಕೊಲ್ಲುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ