AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆನೀರಲ್ಲಿ ಮೊಬೈಲ್‌ ಫೋನ್‌ ನೆನೆದರೆ ಯಾವುದೇ ಚಿಂತೆ ಬೇಡ, ತಕ್ಷಣವೇ ಈ ಸುರಕ್ಷತಾ ಕ್ರಮಗಳನ್ನು ಪಾಲಿಸಿ

ಜೋರು ಮಳೆ ಬರುವ ಸಂದರ್ಭದಲ್ಲಿ ನಾವು ಮನೆಯಿಂದ ಹೊರಗೆ ಹೋದರೆ ನಾವು ಒದ್ದೆಯಾಗುವುದರ ಜೊತೆಗೆ ಕೈಯಲ್ಲಿ ಅಥವಾ ಪಾಕೆಟ್‌ನಲ್ಲಿಟ್ಟಿದ್ದ ಮೊಬೈಲ್‌ ಕೂಡ ಒದ್ದೆಯಾಗುತ್ತದೆ. ಪೋನ್‌ ಏನಾದ್ರೂ ಸಂಪೂರ್ಣವಾಗಿ ಒದ್ದೆಯಾದರೆ ಇದರ ರಿಪೇರಿಗೆ ಇನ್ನೆಷ್ಟು ಖರ್ಚಾಗ್ಬೋದು ಎಂಬ ಟೆನ್ಷನ್‌ ಶುರುವಾಗುತ್ತದೆ. ಹೀಗೆ ನಿಮ್ಮ ಮೊಬೈಲ್‌ ಮಳೆಯಲ್ಲಿ ಒದ್ದೆಯಾದ್ರೆ ಚಿಂತೆ ಪಡುವ ಅಗತ್ಯವಿಲ್ಲ, ತಕ್ಷಣಕ್ಕೆ ಈ ಕೆಲವೊಂದು ಸುರಕ್ಷತಾ ಕ್ರಮಗಳನ್ನು ಪಾಲಿಸಿ. ಈ ಮೂಲಕ ರಿಪೇರಿಗೆ ಸಾವಿರಾರು ರೂಪಾಯಿ ಖರ್ಚಾಗೋದನ್ನು ತಪ್ಪಿಸಿ.

ಮಳೆನೀರಲ್ಲಿ ಮೊಬೈಲ್‌ ಫೋನ್‌ ನೆನೆದರೆ ಯಾವುದೇ ಚಿಂತೆ ಬೇಡ, ತಕ್ಷಣವೇ ಈ ಸುರಕ್ಷತಾ ಕ್ರಮಗಳನ್ನು ಪಾಲಿಸಿ
ಸಾಂದರ್ಭಿಕ ಚಿತ್ರImage Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 04, 2026 | 6:19 PM

Share

ಮುಖ್ಯಾಂಶಗಳು

  • ಮಳೆಯಿಂದಾಗಿ ಕೈಯಲ್ಲಿದ್ದ ಫೋನ್‌ ಒದ್ದೆಯಾಗುವ ಸಾಧ್ಯತೆ ತುಂಬಾನೇ ಹೆಚ್ಚು
  • ಒದ್ದೆಯಾದ ಫೋನ್‌ ಸರಿ ಪಡಿಸಲು ತಕ್ಷಣವೇ ಕೆಲವೊಂದು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು
  • ಫೋನ್‌ ಒದ್ದೆಯಾದರೆ ತಕ್ಷಣವೇ ಮೊಬೈಲ್‌ ಸ್ವಿಚ್‌ ಆಫ್‌ ಮಾಡಬೇಕು

ಮಳೆಗಾಲದಲ್ಲಿ ವಾತಾವರಣ ತುಂಬಾನೇ ಆಹ್ಲಾದಕರವಾಗಿದ್ದರೂ, ಜೋರು ಮಳೆಗೆ ನೆರೆ, ಪ್ರವಾಹದಂತಹ ಸಮಸ್ಯೆಗಳು ಸಂಭವಿಸುತ್ತದೆ. ಇನ್ನೊಂದು ಕಡೆ ಭಾರೀ ಮಳೆಗೆ ನಾವೇನಾದರೂ ಮನೆಯಿಂದ ಹೊರಗೆ ಹೋದರೆ ಕೈಯಲ್ಲಿ ಹಿಡಿದುಕೊಂಡ, ಪಾಕೆಟ್‌ನಲ್ಲಿದ್ದ ಮೊಬೈಲ್‌ ಫೋನ್‌ (smartphone) ಒದ್ದೆಯಾಗುವ ಸಾಧ್ಯತೆ ಇರುತ್ತವೆ. ಕೆಲವೊಮ್ಮೆ ಫೋನ್‌ ಕೈಯಿಂದ ಜಾರಿ ನೀರಿಗೆ ಬೀಳುವ ಸಾಧ್ಯತೆಯೂ ಇರುತ್ತದೆ. ಇಂತಹ ಸಂದರ್ಭದಲ್ಲಿ ಫೋನ್‌ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಏನು ಮಾಡೋದೆಂಬ ಟೆನ್ಷನ್‌ ಇರುತ್ತದೆ. ಹೀಗೆ ಮಳೆನೀರಲ್ಲಿ ಮೊಬೈಲ್‌ ಫೋನ್‌ ಒದ್ದೆಯಾದರೆ ಆತಂಕಪಡುವ ಅಗತ್ಯವಿಲ್ಲ, ತಕ್ಷಣಕ್ಕೆ ಈ ಕೆಲವೊಂದು ಕೆಲಸಗಳನ್ನು ಮಾಡುವ ಮೂಲಕ ಮೊಬೈಲ್‌ ರಿಪೇರಿಗೆ ಸಾವಿರಾರು ರೂಪಾಯಿ ಖರ್ಚಾಗೋದನ್ನು ತಪ್ಪಿಸಬಹುದು.

ಮೊಬೈನ್‌ ಫೋನ್‌ ಮಳೆನೀರಿನಲ್ಲಿ ಒದ್ದೆಯಾದ್ರೆ ತಕ್ಷಣಕ್ಕೆ ಏನು ಮಾಡ್ಬೇಕು?

ಫೋನ್ ಅನ್ನು ತಕ್ಷಣ ಸ್ವಿಚ್ ಆಫ್ ಮಾಡಿ: ಮಳೆಯಿಂದಾಗಿ ನಿಮ್ಮ ಫೋನ್ ಒದ್ದೆಯಾದರೆ, ತಕ್ಷಣ ಅದನ್ನು ಆಫ್ ಮಾಡಿ. ಒದ್ದೆಯಾದ ಫೋನ್ ಅನ್ನು ಆನ್‌ನಲ್ಲಿ ಇಡುವುದರಿಂದ ಶಾರ್ಟ್ ಸರ್ಕ್ಯೂಟ್ ಮತ್ತು ಮದರ್‌ಬೋರ್ಡ್‌ಗೆ ಹಾನಿಯಾಗುವ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ, ಮೊಬೈಲ್‌ ಒದ್ದೆಯಾದರೆ ಫೋನ್‌  ಅನ್ನು ಆಫ್ ಮಾಡುವುದು.

ಸಿಮ್ ಟ್ರೇ, ಸಿಮ್ ಮತ್ತು ಮೆಮೊರಿ ಕಾರ್ಡ್‌ಗಳನ್ನು ತೆಗೆದುಹಾಕಿ: ಫೋನ್ ಆಫ್ ಮಾಡಿದ ನಂತರ, ಮೊದಲು ಸಿಮ್ ಟ್ರೇ ತೆಗೆದುಹಾಕಿ. ಅಲ್ಲದೆ, ಸಿಮ್ ಕಾರ್ಡ್ ಮತ್ತು ಮೆಮೊರಿ ಕಾರ್ಡ್ ತೆಗೆಯಿರಿ. ಇದು ಫೋನ್ ಒಳಗೆ ಗಾಳಿಯನ್ನು ಪರಿಚಲನೆ ಮಾಡಲು ಮತ್ತು ತೇವಾಂಶವನ್ನು ಬೇಗನೆ ಒಣಗಿಸಲು ಅನುವು ಮಾಡಿಕೊಡುತ್ತದೆ.

ಒಣ ಬಟ್ಟೆಯಿಂದ ಒರೆಸಿ: ಹೆಚ್ಚುವರಿ ನೀರನ್ನು ತೆಗೆದುಹಾಕಲು ಸ್ವಚ್ಛವಾದ ಮತ್ತು ಒಣಗಿದ ಹತ್ತಿ ಬಟ್ಟೆ ಅಥವಾ ಟಿಶ್ಯೂ ಪೇಪರ್‌ನಿಂದ ಫೋನ್ ಅನ್ನು ಚೆನ್ನಾಗಿ ಒರೆಸಿ. ಇದು ಹೊರಗಿನ ಮೇಲ್ಮೈಯಿಂದ ಯಾವುದೇ ತೇವಾಂಶವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಆದರೆ ಎಂದಿಗೂ ನೀರನ್ನು ಒಣಗಿಸಲು ಹೇರ್‌ ಡ್ರೈಯರ್‌ ಅನ್ನು ಬಳಸಬಾರದು. ಏಕೆಂದರೆ ಡ್ರೈಯರ್‌ನ ಬಲವಾದ, ಬಿಸಿ ಗಾಳಿಯು ಫೋನಿನ ಸೂಕ್ಷ್ಮವಾದ ವೈರಿಂಗ್ ಅನ್ನು ಸುಟ್ಟುಹಾಕಬಹುದು ಮತ್ತು ನೀರನ್ನು ಒಳಭಾಗಕ್ಕೆ ಆಳವಾಗಿ ತಳ್ಳಬಹುದು.

ಅಕ್ಕಿಯಲ್ಲಿ ಒಣಗಿಸಿ:  ಫೋನ್‌ನ ಮೇಲ್ಭಾಗವನ್ನು ಒರೆಸಿದ ನಂತರ ಮೊಬೈಲ್‌ ಅನ್ನು ಅಕ್ಕಿಯ ಮಧ್ಯೆ ಇಟ್ಟುಬಿಡಿ. ಅಕ್ಕಿಯು ತೇವಾಂಶವನ್ನು ಬೇಗನೆ ಹೀರಿಕೊಳ್ಳುವ ನೈಸರ್ಗಿಕ ಸಾಮರ್ಥ್ಯವನ್ನು ಹೊಂದಿದೆ. ಕನಿಷ್ಠ 24 ರಿಂದ 48 ಗಂಟೆಗಳ ಕಾಲ ಫೋನ್ ಅನ್ನು ಅಕ್ಕಿಯೊಳಗೆ ಬಿಡಿ ಮತ್ತು ಅದನ್ನು ಹೊರತೆಗೆದು ಮತ್ತೆ ಮತ್ತೆ ಪರಿಶೀಲಿಸುವ ತಪ್ಪನ್ನು ಮಾಡಬೇಡಿ.

ಇದನ್ನೂ ಓದಿ: ಮಳೆಗಾಲದಲ್ಲಿ ಒಗೆದ ಬಟ್ಟೆಗಳನ್ನು ಒಣಗಿಸಲು ಜಸ್ಟ್‌ ಸರಳ ಮಾರ್ಗಗಳನ್ನು ಅನುಸರಿಸಿ

ಚಾರ್ಜ್ ಮಾಡುವ ತಪ್ಪು ಮಾಡಬೇಡಿ: ಫೋನ್‌ ನೀರನ್ನು ತುಂಬಾನೇ ನೆನೆದರೆ  ಅದನ್ನು ಕನಿಷ್ಠ ಎರಡು ದಿನಗಳವರೆಗೆ ಚಾರ್ಜ್‌ ಮಾಡಬೇಡಿ. ಅನೇಕ ಜನರು ತಮ್ಮ ಫೋನ್ ಇನ್ನೂ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪರಿಶೀಲಿಸಲು ಚಾರ್ಜ್‌ ಮಾಡುತ್ತಾರೆ. ಹೀಗೆ ಒದ್ದೆಯಾದ ಫೋನ್ ಅನ್ನು ಚಾರ್ಜ್ ಮಾಡುವುದು ಅತ್ಯಂತ ಅಪಾಯಕಾರಿ. ಇದು ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಹಾರ್ಡ್‌ವೇರ್ ಹಾನಿಯ ಅಪಾಯವನ್ನು ಹೆಚ್ಚಿಸುತ್ತದೆ.

ಫೋನ್ ಅನ್ನು 48 ರಿಂದ 72 ಗಂಟೆಗಳ ಕಾಲ ಆಫ್ ಮಾಡಿಡಿ:  ಕನಿಷ್ಠ 72 ಗಂಟೆಗಳ ಕಾಲ ನಿಮ್ಮ ಫೋನ್ ಅನ್ನು ಆನ್ ಮಾಡಬೇಡಿ. ಅದನ್ನು ಆನ್ ಮಾಡಿ ಪದೇ ಪದೇ ಪರಿಶೀಲಿಸಬೇಡಿ. ಹಾಗೆ ಮಾಡುವುದರಿಂದ ಫೋನ್‌ಗೆ ಹಾನಿಯಾಗುವ ಅಪಾಯ ಹೆಚ್ಚಾಗಬಹುದು. 48 ರಿಂದ 72 ಗಂಟೆಗಳ ನಂತರವೇ ಫೋನ್‌ ಆನ್‌ ಮಾಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು