Skin Care Tips : ತ್ವಚೆಯ ಹೊಳಪು ಹೆಚ್ಚಾಗಲು ಸಾಸಿವೆ ಎಣ್ಣೆ ಹೀಗೆ ಬಳಸಿ, ಆದ್ರೆ ಈ ಟಿಪ್ಸ್ ಪಾಲಿಸಿ

ಹೆಣ್ಣು ಮಕ್ಕಳಿಗೆ ತ್ವಚೆಯ ವಿಪರೀತ ಕಾಳಜಿ. ತ್ವಚೆಯಲ್ಲಿ ಸಣ್ಣ ಪುಟ್ಟ ಬದಲಾವಣೆಯಾದರೂ ಸಾಕು, ಚಿಂತಿಸುತ್ತ ಕೂರುತ್ತಾರೆ. ಸೌಂದರ್ಯ ವರ್ಧಕಗಳ ಖರೀದಿಯತ್ತ ಗಮನ ಹರಿಸುತ್ತಾರೆ. ಆದರೆ ತ್ವಚೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವ ಮುನ್ನ ಈ ಕೆಲವು ಸಲಹೆಗಳನ್ನು ಪಾಲಿಸಿದರೆ ಅಡ್ಡಪರಿಣಾಮಗಳಿಂದ ಮುಖವನ್ನು ರಕ್ಷಿಸಿಕೊಳ್ಳಬಹುದು

Skin Care Tips : ತ್ವಚೆಯ ಹೊಳಪು ಹೆಚ್ಚಾಗಲು ಸಾಸಿವೆ ಎಣ್ಣೆ ಹೀಗೆ ಬಳಸಿ, ಆದ್ರೆ ಈ ಟಿಪ್ಸ್ ಪಾಲಿಸಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 11, 2024 | 2:13 PM

ಸೌಂದರ್ಯ ಎಂದ ಕೂಡಲೇ ಮೊದಲು ನೆನಪಾಗುವುದೇ ಹೆಣ್ಣು ಮಕ್ಕಳು. ಹೀಗಾಗಿ ತ್ವಚೆಗೆ ನಾನಾ ರೀತಿಯ ಉತ್ಪನ್ನಗಳನ್ನು ಬಳಸಿ ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತಾರೆ. ಕೆಲವರು ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡಲು ಸಾಸಿವೆ ಎಣ್ಣೆಯನ್ನು ಬಳಸುತ್ತಿರಬಹುದು. ಈ ಎಣ್ಣೆ ಬಳಸುತ್ತಿದ್ದರೆ ಕೆಲವು ವಿಚಾರಗಳ ಬಗ್ಗೆ ಗಮನವಹಿಸದಿದ್ದರೆ ಚರ್ಮದ ಸಮಸ್ಯೆಗಳು ಹೆಚ್ಚಾಗಬಹುದು.

ಸಾಸಿವೆ ಎಣ್ಣೆ ತ್ವಚೆಗೆ ಹೀಗೂ ಬಳಸಬಹುದು

  • ಒಂದು ಚಮಚ ಸಾಸಿವೆ ಎಣ್ಣೆಗೆ ಒಂದು ಚಮಚ ತೆಂಗಿನ ಎಣ್ಣೆ ಸೇರಿಸಿ ರಾತ್ರಿ ಮಲಗುವ ಮುನ್ನ ಹತ್ತರಿಂದ ಹದಿನೈದು ನಿಮಿಷ ಮಸಾಜ್ ಮಾಡಿ, ತಣ್ಣನೆಯ ನೀರಿನಲ್ಲಿ ಮುಖ ತೊಳೆದರೆ ತ್ವಚೆಯ ಹೊಳಪು ಹೆಚ್ಚಾಗುತ್ತದೆ.
  • ಒಂದು ಚಮಚ ಸಾಸಿವೆ ಎಣ್ಣೆಯಿಂದ ಮುಖಕ್ಕೆ ಹಚ್ಚಿ, ನಿಧಾನವಾಗಿ ಮಸಾಜ್ ಮಾಡುವುದರಿಂದ ಕಪ್ಪಾದ ಜಾಗವಿದ್ದರೆ ಅಥವಾ ಮೊಡವೆ ಕಲೆಯೂ ನಿವಾರಣೆಯಾಗುತ್ತದೆ.
  • ಒಂದು ಚಮಚ ಸಾಸಿವೆ ಎಣ್ಣೆಗೆ ಅರಶಿನ ಪುಡಿ, ಕೇಸರಿ, ಶ್ರೀಗಂಧ, ಕಡಲೆಹಿಟ್ಟು ಬೆರೆಸಿ, ವಾರಕ್ಕೆರಡು ಬಾರಿ ಹಚ್ಚಿ ಮಸಾಜ್ ಮಾಡುವುದರಿಂದ ಸತ್ತ ಜೀವಕೋಶಗಳನ್ನು ತೊಡೆದುಹಾಕಲು ಸಹಕಾರಿಯಾಗಿದೆ.
  • ಸಾಸಿವೆ ಎಣ್ಣೆಗೆ ಲಿಂಬೆರಸ ಹಾಗೂ ಮೊಸರು ಬೆರೆಸಿ ಮುಖಕ್ಕೆ ಹಚ್ಚಿಕೊಂಡರೆ, ಇದರಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣವು ಮೊಡವೆಗಳು ಮೂಡದಂತೆ ತಡೆಯುತ್ತದೆ.

ಇದನ್ನೂ ಓದಿ: ಹಲ್ಲುಗಳು ಹಳದಿಗಟ್ಟಿದ್ದರೆ ಫಳಫಳ ಹೊಳೆಯುವಂತೆ ಮಾಡುವುದು ಹೇಗೆ? ಇಲ್ಲಿದೆ ಮನೆಮದ್ದು

ಸಾಸಿವೆ ಎಣ್ಣೆಯನ್ನು ತ್ವಚೆಗೆ ಅನ್ವಯಿಸುವ ಮುನ್ನ ಈ ಟಿಪ್ಸ್ ಪಾಲಿಸಿ

  • ಸಾಸಿವೆ ಎಣ್ಣೆಯನ್ನು ಬಳಸುವ ಮೊದಲು, ಚರ್ಮದ ಮೇಲೆ ಪ್ಯಾಚ್ ಟೆಸ್ಟ್ ಮಾಡುವುದನ್ನುಡುವುದನ್ನು ಮರೆಯದಿರಿ.
  • ಸಾಸಿವೆ ಎಣ್ಣೆಯನ್ನು ನೇರವಾಗಿ ತ್ವಚೆಗೆ ಅನ್ವಯಿಸುವ ಸಾಹಸಕ್ಕೆ ಕೈ ಹಾಕಬೇಡಿ. ಮೊದಲು ಈ ಎಣ್ಣೆಯನ್ನು ಬಿಸಿ ಮಾಡಿಕೊಳ್ಳಿ. ಬಿಸಿ ಮಾಡಿದ ಎಣ್ಣೆಯನ್ನು ಬಳಸುವುದರಿಂದ ಇದರಲ್ಲಿರುವ ಸತ್ವವು ಚರ್ಮಕ್ಕೆ ಸುಲಭವಾಗಿ ಹೀರಲ್ಪಡುತ್ತವೆ.
  • ನಿಮ್ಮ ಚರ್ಮವು ಎಣ್ಣೆಯುಕ್ತವಾಗಿದ್ದರೆ ಸಾಸಿವೆ ಎಣ್ಣೆಯನ್ನು ಬಳಸಬೇಡಿ. ಇದರ ಬಳಕೆಯು ಚರ್ಮವನ್ನು ಹೆಚ್ಚು ಎಣ್ಣೆಯುಕ್ತವಾಗಿಸಿ, ಮೊಡವೆ ಸಮಸ್ಯೆ ಕಾಣಿಸಿಕೊಳ್ಳಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್