AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ತಯಾರಿ ನಡೆಸಲು ಓದುವ ವೇಳೆ ಈ ಟಿಪ್ಸ್​ ಅಳವಡಿಸಿಕೊಳ್ಳಿ

ಇನ್ನೇನು ಪರೀಕ್ಷೆಗಳು ಆರಂಭವಾಗುವ ದಿನ ಬರುತ್ತಿದೆ. ಹೀಗಾಗಿ ಮಕ್ಕಳ ಮೇಲಿನ ಒತ್ತಡವೂ ಹೆಚ್ಚಾಗಿಯೇ ಇರುತ್ತದೆ. ಆದ್ದರಿಂದ ಏಕಾಗ್ರತೆಯಿಂದ ಓದಲು ಇಲ್ಲಿವೆ ಕೆಲವು ಸಲಹೆಗಳು.

ಪರೀಕ್ಷೆ ತಯಾರಿ ನಡೆಸಲು ಓದುವ ವೇಳೆ ಈ ಟಿಪ್ಸ್​ ಅಳವಡಿಸಿಕೊಳ್ಳಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 16, 2022 | 4:48 PM

Share

ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಬೇಕು. ಉನ್ನತ ಶ್ರೇಣಿಯನ್ನು ಪಡೆಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದಕ್ಕೆ ಓದುವ ಕ್ರಮ ಮುಖ್ಯವಾಗಿರುತ್ತದೆ. ಕೆಲವರು ಎಷ್ಟು ಓದಿದರೂ ತಲೆಗೇ ಹತ್ತುವುದಿಲ್ಲ ಎನ್ನುವುದನ್ನು ಕೇಳಿರಬಹುದು. ಇದಕ್ಕೆ ಮುಖ್ಯ ಕಾರಣ ಏಕಾಗ್ರತೆಯ ಕೊರತೆ. ಮನಸ್ಸಿಟ್ಟು, ಒಂದೇ ಚಿತ್ತದಿಂದ ಓದಿದರೆ ಎಂತಹವರೂ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬಹುದು. ಇನ್ನೇನು ಕೆಲವೇ ದಿನಗಳಲ್ಲಿ ಪಿಯುಸಿ, ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಬದುಕಿನ ಮಹತ್ವದ ಘಟ್ಟಗಳಲ್ಲಿ ಮಕ್ಕಳ ಮೇಲಿನ ಒತ್ತಡ ಸಹಜವಾಗಿಯೇ ಹೆಚ್ಚಾಗಿರುತ್ತದೆ. ಹೀಗಾಗಿ ಕಷ್ಟಪಟ್ಟು ಓದುವ ಬದಲು ಕೆಲವು ವಿಧಾನಗಳನ್ನು ಅನುಸರಿಸಿಕೊಂಡು ಯುಕ್ತಿಯಿಂದ, ಏಕಾಗ್ರತೆಯಿಂದ ಓದಿದರೆ ಉತ್ತಮ. ಇದಕ್ಕಾಗಿಯೇ ತಜ್ಞರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಈ ಕುರಿತು ಟೈಮ್ಸ್​ ನೌ ವರದಿ ಮಾಡಿದೆ. ಅದರ ಮಾಹಿತಿ ಇಲ್ಲಿದೆ ನೋಡಿ,

ಆಗಾಗ ವಿರಾಮ ನೀಡಿ: ದೀರ್ಘಕಾಲ ಕೊಂಚವೂ ವಿಶ್ರಾಂತಿ ನೀಡದೆ ಗಂಟೆಗಳ ಕಾಲ ಅಧ್ಯಯನ ಮಾಡುವುದು ಯಾವಾಗಲೂ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿರುವುದಿಲ್ಲ. ಇದು ಪ್ರೇರಣೆ ಮತ್ತು ಏಕಾಗ್ರತೆಗೆ ಹಾನಿಯನ್ನುಂಟುಮಾಡುತ್ತದೆ. ನೆನಪಿನ ಶಕ್ತಿಯೂ ಕುಂದುತ್ತದೆ. ಹೀಗಾಗಿ ಪ್ರತೀ ಒಂದು ಗಂಟೆಗೊಮ್ಮೆ ಎದ್ದು ಒಂದೆರಡು ಹೆಜ್ಜೆ ನಡೆದಾಡಿ.

ನಿಮ್ಮ ಬಗ್ಗೆ ಮೌಲ್ಯಮಾಪನ ಮಾಡಿಕೊಳ್ಳಿ: ಅಧ್ಯಯನ ಮಾಡುವಾಗ, ನಿಮ್ಮ ಪರೀಕ್ಷಕರು ನಿಮ್ಮನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದನ್ನು ನೀವೇ ಪರಿಗಣಿಸಿ. ನಿಮಗಿಂತ ಉತ್ತಮವಾದ ವಿಮರ್ಶೆ ನಿಮ್ಮ ಬಗ್ಗೆ ಇರಲಾರದು. ರಸಪ್ರಶ್ನೆಗಳನ್ನು ತೆಗೆದುಕೊಳ್ಳಿ ಮತ್ತು ನಿಮ್ಮ ಜ್ಞಾನವನ್ನು ಪರೀಕ್ಷಿಸಲು ಕಟ್ಟುನಿಟ್ಟಾದ ಮೌಲ್ಯಮಾಪನ ವಿಧಾನಗಳನ್ನು ಕೈಗೊಳ್ಳಿ.

ಮೊಬೈಲ್​ಗಳನ್ನು ಬದಿಗಿಡಿ ಅಥವಾ ಸೈಲೆಂಟ್​ ಮೂಡ್​ನಲ್ಲಿಡಿ: ಪದೇ ಪದೇ ಬರುವ ಮೆಸೇಜ್​ಗಳ ಸದ್ದು, ಆಗಾಗ ಬರುವ ಫೋನ್​ಕಾಲ್​ಗಳು ನಿಮ್ಮ ಏಕಾಗ್ರತೆಗೆ ಭಂಗ ತರುತ್ತದೆ. ಹೀಗಾಗಿ ಮೊಬೈಲ್ ಅಥವಾ ಇನ್ನಿತರ ಗ್ಯಾಜೆಟ್ಸ್​ಗಳನ್ನು ಓದಿನ ಸಮಸಯದಲ್ಲಿ ದೂರವಿಡಿ. ಇಂಟರ್​ನೆಟ್​ ಸಹಾಯಾಬೇಕಾದಾಗ ಸಾಮಾಜಿಕ ಜಾಲತಾಣಗಳಿಗೆ ಇಂಟರ್​ನೆಟ್​ ಅನ್ನು ಸೆಟ್ಟಿಂಗಸ್​ ಮೂಲಕ ನಿರ್ಬಂಧಿಸಿ.

ದಿನಚರಿಯನ್ನು ಹಾಕಿಕೊಳ್ಳಿ: ನಿಮಗೆ ಮತ್ತು ನಿಮ್ಮ ದೇಹಕ್ಕೆ ಯಾವ ರೀತಿಯ ದಿನಚರಿ ಉತ್ತಮ ಎನ್ನುವುದನ್ನು ಕಂಡುಕೊಳ್ಳಿ. ಅಧ್ಯಯನದ ವಿಷಯಕ್ಕೆ ಬಂದಾಗ, ವೈಯಕ್ತಿಕ ಸೌಕರ್ಯ, ಮನಸ್ಸಿನ ಶಾಂತಿ ಮತ್ತು ಅನುಕೂಲವು ಮುಖ್ಯವಾಗಿದೆ. ಆದ್ದರಿಂದ, ನಿಮಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ನೀವು ಭಾವಿಸುವ ತಂತ್ರಗಳನ್ನು ಗಮನಿಸಿ, ಪ್ರಯೋಗಿಸಿ ಮತ್ತು ಕಾರ್ಯಗತಗೊಳಿಸಿ.

ಸಾಕಷ್ಟು ವಿಶ್ರಾಂತಿ ಪಡೆಯಿರಿ: ಸರಿಯಾದ ಸಮಯದಲ್ಲಿ ಆಹಾರ ಸೇವಿಸಿ, ಚೆನ್ನಾಗಿ ವಿಶ್ರಾಂತಿ ಪಡೆಯಿರಿ ಜತೆಗೆ ಸಕ್ರಿಯರಾಗಿರಿ. ಕಟ್ಟುನಿಟ್ಟಾದ ವೇಳಾಪಟ್ಟಿಯ ಹೊರತಾಗಿಯೂ, ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ಸೇವಿಸಿ, ಕೇವಲ 5-15 ನಿಮಿಷಗಳ ಕಾಲ ವ್ಯಾಯಾಮ ಮಾಡಿ ಮತ್ತು ಕನಿಷ್ಠ 6-8 ಗಂಟೆಗಳ ನಿರಂತರ ನಿದ್ರೆ ಪಡೆಯಿರಿ.

ಇದನ್ನೂ ಓದಿ:

ಅನಗತ್ಯ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಈ ಆಹಾರಗಳನ್ನು ಸೇವಿಸಿ

Published On - 4:47 pm, Wed, 16 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ