ಪರೀಕ್ಷೆ ತಯಾರಿ ನಡೆಸಲು ಓದುವ ವೇಳೆ ಈ ಟಿಪ್ಸ್​ ಅಳವಡಿಸಿಕೊಳ್ಳಿ

ಇನ್ನೇನು ಪರೀಕ್ಷೆಗಳು ಆರಂಭವಾಗುವ ದಿನ ಬರುತ್ತಿದೆ. ಹೀಗಾಗಿ ಮಕ್ಕಳ ಮೇಲಿನ ಒತ್ತಡವೂ ಹೆಚ್ಚಾಗಿಯೇ ಇರುತ್ತದೆ. ಆದ್ದರಿಂದ ಏಕಾಗ್ರತೆಯಿಂದ ಓದಲು ಇಲ್ಲಿವೆ ಕೆಲವು ಸಲಹೆಗಳು.

ಪರೀಕ್ಷೆ ತಯಾರಿ ನಡೆಸಲು ಓದುವ ವೇಳೆ ಈ ಟಿಪ್ಸ್​ ಅಳವಡಿಸಿಕೊಳ್ಳಿ
ಪ್ರಾತಿನಿಧಿಕ ಚಿತ್ರ
Follow us
| Updated By: Pavitra Bhat Jigalemane

Updated on:Mar 16, 2022 | 4:48 PM

ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಬೇಕು. ಉನ್ನತ ಶ್ರೇಣಿಯನ್ನು ಪಡೆಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದಕ್ಕೆ ಓದುವ ಕ್ರಮ ಮುಖ್ಯವಾಗಿರುತ್ತದೆ. ಕೆಲವರು ಎಷ್ಟು ಓದಿದರೂ ತಲೆಗೇ ಹತ್ತುವುದಿಲ್ಲ ಎನ್ನುವುದನ್ನು ಕೇಳಿರಬಹುದು. ಇದಕ್ಕೆ ಮುಖ್ಯ ಕಾರಣ ಏಕಾಗ್ರತೆಯ ಕೊರತೆ. ಮನಸ್ಸಿಟ್ಟು, ಒಂದೇ ಚಿತ್ತದಿಂದ ಓದಿದರೆ ಎಂತಹವರೂ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬಹುದು. ಇನ್ನೇನು ಕೆಲವೇ ದಿನಗಳಲ್ಲಿ ಪಿಯುಸಿ, ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಬದುಕಿನ ಮಹತ್ವದ ಘಟ್ಟಗಳಲ್ಲಿ ಮಕ್ಕಳ ಮೇಲಿನ ಒತ್ತಡ ಸಹಜವಾಗಿಯೇ ಹೆಚ್ಚಾಗಿರುತ್ತದೆ. ಹೀಗಾಗಿ ಕಷ್ಟಪಟ್ಟು ಓದುವ ಬದಲು ಕೆಲವು ವಿಧಾನಗಳನ್ನು ಅನುಸರಿಸಿಕೊಂಡು ಯುಕ್ತಿಯಿಂದ, ಏಕಾಗ್ರತೆಯಿಂದ ಓದಿದರೆ ಉತ್ತಮ. ಇದಕ್ಕಾಗಿಯೇ ತಜ್ಞರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಈ ಕುರಿತು ಟೈಮ್ಸ್​ ನೌ ವರದಿ ಮಾಡಿದೆ. ಅದರ ಮಾಹಿತಿ ಇಲ್ಲಿದೆ ನೋಡಿ,

ಆಗಾಗ ವಿರಾಮ ನೀಡಿ: ದೀರ್ಘಕಾಲ ಕೊಂಚವೂ ವಿಶ್ರಾಂತಿ ನೀಡದೆ ಗಂಟೆಗಳ ಕಾಲ ಅಧ್ಯಯನ ಮಾಡುವುದು ಯಾವಾಗಲೂ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿರುವುದಿಲ್ಲ. ಇದು ಪ್ರೇರಣೆ ಮತ್ತು ಏಕಾಗ್ರತೆಗೆ ಹಾನಿಯನ್ನುಂಟುಮಾಡುತ್ತದೆ. ನೆನಪಿನ ಶಕ್ತಿಯೂ ಕುಂದುತ್ತದೆ. ಹೀಗಾಗಿ ಪ್ರತೀ ಒಂದು ಗಂಟೆಗೊಮ್ಮೆ ಎದ್ದು ಒಂದೆರಡು ಹೆಜ್ಜೆ ನಡೆದಾಡಿ.

ನಿಮ್ಮ ಬಗ್ಗೆ ಮೌಲ್ಯಮಾಪನ ಮಾಡಿಕೊಳ್ಳಿ: ಅಧ್ಯಯನ ಮಾಡುವಾಗ, ನಿಮ್ಮ ಪರೀಕ್ಷಕರು ನಿಮ್ಮನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದನ್ನು ನೀವೇ ಪರಿಗಣಿಸಿ. ನಿಮಗಿಂತ ಉತ್ತಮವಾದ ವಿಮರ್ಶೆ ನಿಮ್ಮ ಬಗ್ಗೆ ಇರಲಾರದು. ರಸಪ್ರಶ್ನೆಗಳನ್ನು ತೆಗೆದುಕೊಳ್ಳಿ ಮತ್ತು ನಿಮ್ಮ ಜ್ಞಾನವನ್ನು ಪರೀಕ್ಷಿಸಲು ಕಟ್ಟುನಿಟ್ಟಾದ ಮೌಲ್ಯಮಾಪನ ವಿಧಾನಗಳನ್ನು ಕೈಗೊಳ್ಳಿ.

ಮೊಬೈಲ್​ಗಳನ್ನು ಬದಿಗಿಡಿ ಅಥವಾ ಸೈಲೆಂಟ್​ ಮೂಡ್​ನಲ್ಲಿಡಿ: ಪದೇ ಪದೇ ಬರುವ ಮೆಸೇಜ್​ಗಳ ಸದ್ದು, ಆಗಾಗ ಬರುವ ಫೋನ್​ಕಾಲ್​ಗಳು ನಿಮ್ಮ ಏಕಾಗ್ರತೆಗೆ ಭಂಗ ತರುತ್ತದೆ. ಹೀಗಾಗಿ ಮೊಬೈಲ್ ಅಥವಾ ಇನ್ನಿತರ ಗ್ಯಾಜೆಟ್ಸ್​ಗಳನ್ನು ಓದಿನ ಸಮಸಯದಲ್ಲಿ ದೂರವಿಡಿ. ಇಂಟರ್​ನೆಟ್​ ಸಹಾಯಾಬೇಕಾದಾಗ ಸಾಮಾಜಿಕ ಜಾಲತಾಣಗಳಿಗೆ ಇಂಟರ್​ನೆಟ್​ ಅನ್ನು ಸೆಟ್ಟಿಂಗಸ್​ ಮೂಲಕ ನಿರ್ಬಂಧಿಸಿ.

ದಿನಚರಿಯನ್ನು ಹಾಕಿಕೊಳ್ಳಿ: ನಿಮಗೆ ಮತ್ತು ನಿಮ್ಮ ದೇಹಕ್ಕೆ ಯಾವ ರೀತಿಯ ದಿನಚರಿ ಉತ್ತಮ ಎನ್ನುವುದನ್ನು ಕಂಡುಕೊಳ್ಳಿ. ಅಧ್ಯಯನದ ವಿಷಯಕ್ಕೆ ಬಂದಾಗ, ವೈಯಕ್ತಿಕ ಸೌಕರ್ಯ, ಮನಸ್ಸಿನ ಶಾಂತಿ ಮತ್ತು ಅನುಕೂಲವು ಮುಖ್ಯವಾಗಿದೆ. ಆದ್ದರಿಂದ, ನಿಮಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ನೀವು ಭಾವಿಸುವ ತಂತ್ರಗಳನ್ನು ಗಮನಿಸಿ, ಪ್ರಯೋಗಿಸಿ ಮತ್ತು ಕಾರ್ಯಗತಗೊಳಿಸಿ.

ಸಾಕಷ್ಟು ವಿಶ್ರಾಂತಿ ಪಡೆಯಿರಿ: ಸರಿಯಾದ ಸಮಯದಲ್ಲಿ ಆಹಾರ ಸೇವಿಸಿ, ಚೆನ್ನಾಗಿ ವಿಶ್ರಾಂತಿ ಪಡೆಯಿರಿ ಜತೆಗೆ ಸಕ್ರಿಯರಾಗಿರಿ. ಕಟ್ಟುನಿಟ್ಟಾದ ವೇಳಾಪಟ್ಟಿಯ ಹೊರತಾಗಿಯೂ, ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ಸೇವಿಸಿ, ಕೇವಲ 5-15 ನಿಮಿಷಗಳ ಕಾಲ ವ್ಯಾಯಾಮ ಮಾಡಿ ಮತ್ತು ಕನಿಷ್ಠ 6-8 ಗಂಟೆಗಳ ನಿರಂತರ ನಿದ್ರೆ ಪಡೆಯಿರಿ.

ಇದನ್ನೂ ಓದಿ:

ಅನಗತ್ಯ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಈ ಆಹಾರಗಳನ್ನು ಸೇವಿಸಿ

Published On - 4:47 pm, Wed, 16 March 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ