AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ

ಸ್ನಾನಗೃಹವನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ಇದನ್ನು ತೆಗೆದು ಹಾಕದಿದ್ದರೆ, ಬಾತ್‌ರೂಮ್‌ ಕೊಳಕಾಗಿ ಕಾಣುವುದು ಮಾತ್ರವಲ್ಲದೆ, ಕೆಟ್ಟ ವಾಸನೆಯೂ ಸಹ ಬರುತ್ತದೆ. ಈ ಕಲೆಗಳನ್ನು ಹೋಗಲಾಡಿಸಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಬದಲು ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ ನಿಮಿಷದಲ್ಲಿ ಬಾತ್‌ರೂಮ್‌ ಟೈಲ್ಸ್‌ ಕ್ಲೀನ್‌ ಮಾಡಬಹುದು. ಆ ಮನೆಮದ್ದುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Jan 22, 2026 | 6:40 PM

Share

ಸ್ನಾನಗೃಹವನ್ನು (bathroom) ಪ್ರತಿನಿತ್ಯ ಬಳಸುವ ಕಾರಣ ಅದರ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಸಹ ಬಹಳ ಮುಖ್ಯವಾಗಿದೆ. ಆದ್ದರಿಂದ ಹೆಚ್ಚಿನವರು ಪ್ರತಿನಿತ್ಯ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಹೀಗೆ ಎಷ್ಟೇ ಕ್ಲೀನ್‌ ಮಾಡಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ವಿಶೇಷವಾಗಿ ಬಿಳಿ ಮತ್ತು ತಿಳಿ ಬಣ್ಣದ ಟೈಲ್ಸ್‌ ಅಂಚುಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದಾಗಿ ಇಡೀ ಸ್ನಾನಗೃಹವು ಕೊಳಕಾಗಿ ಕಾಣುತ್ತದೆ. ಈ ಕಲೆಗಳನ್ನು ತೆಗೆದು ಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಅವಶ್ಯಕತೆಯೇ ಇಲ್ಲ. ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ ಸುಲಭವಾಗಿ ಬಾತ್‌ರೂಮ್‌ ಟೈಲ್ಸ್‌ ಕ್ಲೀನ್‌ ಮಾಡಬಹುದು.

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಕಲೆಗಳನ್ನು ಹೋಲಾಡಿಸಲು ಈ ಟಿಪ್ಸ್‌ ಪಾಲಿಸಿ:

ಅಡಿಗೆ ಸೋಡಾ ಮತ್ತು ವಿನೆಗರ್: ಮೊಂಡುತನದ ಕಲೆಗಳನ್ನು ತೆಗೆದುಹಾಕಲು ಅಡಿಗೆ ಸೋಡಾ ಮತ್ತು ವಿನೆಗರ್ ದ್ರಾವಣವು ತುಂಬಾ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದನ್ನು ಬಳಸಲು, ಒಂದು ಬಟ್ಟಲಿನಲ್ಲಿ 2 ಟೀ ಚಮಚ ಅಡಿಗೆ ಸೋಡಾವನ್ನು ತೆಗೆದುಕೊಳ್ಳಿ. ಮತ್ತು ಅದಕ್ಕೆ ಸ್ವಲ್ಪ ನೀರು ಸೇರಿಸಿ ದಪ್ಪ ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಕೊಳಕು ಟೈಲ್ಸ್‌ಗೆ ಹಚ್ಚಿ 10-15 ನಿಮಿಷಗಳ ಕಾಲ ಬಿಡಿ. ಈಗ, ಪೇಸ್ಟ್ ಮೇಲೆ ಸ್ವಲ್ಪ ಬಿಳಿ ವಿನೆಗರ್ ಸಿಂಪಡಿಸಿ. ನಂತರ, ಸ್ಕ್ರಬ್ಬರ್ ಅಥವಾ ಹಳೆಯ ಟೂತ್ ಬ್ರಷ್‌ನಿಂದ ಚೆನ್ನಾಗಿ ಸ್ಕ್ರಬ್ ಮಾಡಿ. ಇದು ಹಳದಿಗಟ್ಟಿದ ಕಲೆಯನ್ನು ಸುಲಭವಾಗಿ ತೆಗೆದುಹಾಕುತ್ತದೆ.

ವಿನೆಗರ್ ಮತ್ತು ನೀರಿನ ದ್ರಾವಣ: ವಿನೆಗರ್ ನೈಸರ್ಗಿಕ ಸೋಂಕುನಿವಾರಕವಾಗಿದ್ದು, ಇದು ಬಾತ್‌ರೂಮ್‌ ಟೈಲ್ಸ್‌ ಮೇಲೆ ಅಂಟಿರುವ ನೀರಿನ ಕಲೆಗಳು ಮತ್ತು ಸೋಪಿನ ಕಲ್ಮಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಬಿಳಿ ವಿನೆಗರ್ ಮತ್ತು ನೀರನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ದ್ರಾವಣವನ್ನು ಸ್ಪ್ರೇ ಬಾಟಲಿಗೆ ಸುರಿದು  ಅದನ್ನು ಟೈಲ್‌ಗಳ ಮೇಲೆ ಸಿಂಪಡಿಸಿ ಮತ್ತು 5 ರಿಂದ 10 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಸ್ಪಾಂಜ್ ಅಥವಾ ಬ್ರಷ್‌ನಿಂದ ಸ್ಕ್ರಬ್ ಮಾಡಿ.

ಇದನ್ನೂ ಓದಿ: ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯೋ ಬದಲು ರೀತಿಯಾಗಿ ಪಾತ್ರೆ ಕ್ಲೀನ್‌ ಮಾಡಲು ಉಪಯೋಗಿಸಿ

ನಿಂಬೆ ಮತ್ತು ಉಪ್ಪು: ನಿಂಬೆಹಣ್ಣಿನಲ್ಲಿರುವ ಸಿಟ್ರಿಕ್ ಆಮ್ಲವು ಕಲೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಕ್ಕಾಗಿ ನಿಂಬೆಹಣ್ಣನ್ನು ಅರ್ಧದಷ್ಟು ಕತ್ತರಿಸಿ. ನಂತರ, ಕತ್ತರಿಸಿದ ನಿಂಬೆಹಣ್ಣಿನ ಮೇಲೆ ಸ್ವಲ್ಪ ಉಪ್ಪನ್ನು ಸಿಂಪಡಿಸಿ. ಈ ನಿಂಬೆಹಣ್ಣನ್ನು ನೇರವಾಗಿ ಟೈಲ್‌ಗಳ ಮೇಲೆ, ವಿಶೇಷವಾಗಿ ಕಲೆಗಳಿರುವ ಪ್ರದೇಶಗಳಿಗೆ ಉಜ್ಜಿ. 5 ನಿಮಿಷಗಳ ಕಾಲ ಹಾಗೆಯೇ ಬಿಡಿ. ಇದು ಟೈಲ್‌ಗಳನ್ನು ಹೊಸದರಂತೆ ಹೊಳೆಯುವಂತೆ ಮಾಡುತ್ತದೆ.

ಬ್ಲೀಚ್‌: ಕೊಳೆಗಟ್ಟಿದ ಟೈಲ್ಸ್‌ ಕ್ಲೀನ್‌ ಮಾಡಲು ಬ್ಲೀಚ್ ಅನ್ನು ಬಳಸಬಹುದು. ಇದಕ್ಕಾಗಿ ಸ್ವಲ್ಪ ನೀರಿಗೆ 8-10 ಚಮಚ ಬ್ಲೀಚ್ ಸುರಿಯಿರಿ. ನಂತರ, ಈ ದ್ರಾವಣವನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಟೈಲ್‌ಗಳ ಮೇಲೆ ಸಿಂಪಡಿಸಿ, ನಂತರ ಅದನ್ನು ಬಟ್ಟೆಯಿಂದ ಒರೆಸಿ.  ಈ ಎಲ್ಲಾ ಮನೆಮದ್ದುಗಳು ಬಾತ್‌ರೂಮ್‌ ಟೈಲ್ಸ್‌ ಅನ್ನು ಹೊಳೆಯುವಂತೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ