Sign In

By signing in or creating an account, you agree with Associated Broadcasting Company's Terms & Conditions and Privacy Policy.

Yellow Teeth: ನಿಮ್ಮ ಹಲ್ಲನ್ನು ಹಳದಿಗೊಳಿಸುವ ಆಹಾರಗಳಿವು

ಹಲ್ಲುಗಳ ಬಿಳುಪು ಕಾಪಾಡಿಕೊಳ್ಳಲು ದಿನನಿತ್ಯ ಹಲ್ಲುಜ್ಜುವುದರೊಂದಿಗೆ ನಿರ್ದಿಷ್ಟ ಆಹಾರ ಕ್ರಮವನ್ನು ಅನುಸರಿಸಬೇಕು. ನೀವು ತಿನ್ನುವ ಕೆಲವು ಆಹಾರಗಳು ನಿಮ್ಮ ಹಲ್ಲುಗಳ ಬಣ್ಣವನ್ನು ಸಹ ಬದಲಾಯಿಸಬಹುದು ಎಂದು ತಜ್ಞರು ಹೇಳುತ್ತಾರೆ.

Yellow Teeth: ನಿಮ್ಮ ಹಲ್ಲನ್ನು ಹಳದಿಗೊಳಿಸುವ ಆಹಾರಗಳಿವು
Yellow Teeth
Follow us
ಅಕ್ಷತಾ ವರ್ಕಾಡಿ
|

Updated on: Sep 17, 2024 | 5:57 PM

ಮುತ್ತಿನ ಬಿಳಿ ಹಲ್ಲುಗಳನ್ನು ಹೊಂದಬೇಕೆನ್ನುವುದು ಎಲ್ಲರ ಆಸೆ. ಕೆಲವರು ತಮ್ಮ ಹಲ್ಲುಗಳನ್ನು ಸ್ವಚ್ಛಗೊಳಿಸಲು ನಿಯಮಿತವಾಗಿ ದಂತ ಚಿಕಿತ್ಸಾಲಯಕ್ಕೆ ಹೋಗುತ್ತಾರೆ. ಆದರೆ ಬಿಳಿ ಹಲ್ಲುಗಳನ್ನು ಕಾಪಾಡಿಕೊಳ್ಳುವುದು ಸುಲಭದ ಕೆಲಸವಲ್ಲ. ದಿನಕ್ಕೆ ಎರಡು ಬಾರಿ ಹಲ್ಲುಜ್ಜಿದರೂ ಹಲ್ಲುಗಳ ಮೇಲಿನ ಹಳದಿ ಕಲೆಗಳು ಹೋಗುವುದಿಲ್ಲ. ಹಲ್ಲುಗಳ ಈ ಬಣ್ಣವು ದೇಹದ ಒಟ್ಟಾರೆ ಆರೋಗ್ಯವನ್ನು ಹದಗೆಡಿಸುತ್ತದೆ.

ಹಲ್ಲುಗಳ ಬಿಳುಪು ಕಾಪಾಡಿಕೊಳ್ಳಲು ದಿನನಿತ್ಯ ಹಲ್ಲುಜ್ಜುವುದರೊಂದಿಗೆ ನಿರ್ದಿಷ್ಟ ಆಹಾರ ಕ್ರಮವನ್ನು ಅನುಸರಿಸಬೇಕು. ಆಹಾರದ ಅಭ್ಯಾಸಗಳು ಹಲ್ಲುಗಳ ಬಣ್ಣವನ್ನು ಸಹ ಬದಲಾಯಿಸಬಹುದು ಎಂದು ತಜ್ಞರು ಹೇಳುತ್ತಾರೆ. ಅದರಲ್ಲೂ ಟೀ, ಕಾಫಿ ಕುಡಿಯುವುದರಿಂದ ಹಲ್ಲುಗಳ ಬಣ್ಣವೇ ಬದಲಾಗುತ್ತದೆ. ಕಪ್ಪು ಕಾಫಿಯ ನಿಯಮಿತ ಸೇವನೆಯು ಹಲ್ಲುಗಳ ಮೇಲೆ ಹಳದಿ ಕಲೆಗಳನ್ನು ಉಂಟುಮಾಡುತ್ತದೆ. ಬದಲಿಗೆ ಗ್ರೀನ್ ಟೀ ಕುಡಿಯುವುದು ಉತ್ತಮ.

ರೆಡ್ ವೈನ್ ಕುಡಿಯುವುದರಿಂದ ಹಲ್ಲು ಹುಳುಕಾಗಬಹುದು. ಈ ಪಾನೀಯದಲ್ಲಿ ಆ್ಯಸಿಡ್ ಅಧಿಕವಾಗಿದ್ದು ಇದು ಹಲ್ಲುಗಳ ಆರೋಗ್ಯವನ್ನು ಹಾಳು ಮಾಡುತ್ತದೆ. ಅದೇ ರೀತಿ ಸೋಯಾ ಸಾಸ್ ನಿಂದ ಮಾಡಿದ ಆಹಾರಗಳು ಹಲ್ಲುಗಳಿಗೆ ಒಳ್ಳೆಯದಲ್ಲ. ಸೋಯಾ ಸಾಸ್ ಹಲ್ಲುಗಳನ್ನು ಹಳದಿ ಬಣ್ಣಕ್ಕೆ ತಿರುಗಿಸುತ್ತದೆ.

Also Read: Blood Moon – ಈ ಬಾರಿ ಅಪರೂಪದ ಬ್ಲಡ್ ಮೂನ್ ನೋಡಿಬಿಡಿ! ಇಲ್ಲದಿದ್ದರೆ ಅದ ನೋಡಲು ಮತ್ತೆ 24 ವರ್ಷ ಕಾಯಬೇಕು

ಸೋಡಾದಂತಹ ತಂಪು ಪಾನೀಯಗಳು ಆರೋಗ್ಯ ಮತ್ತು ಹಲ್ಲುಗಳಿಗೆ ಒಳ್ಳೆಯದಲ್ಲ. ತಂಪು ಪಾನೀಯಗಳಲ್ಲಿ ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್‌ಗಳು ಅಧಿಕವಾಗಿರುತ್ತವೆ. ಇವು ಹಲ್ಲುಗಳಲ್ಲಿ ಎನಾಮಲ್ ಅನ್ನು ಒದಗಿಸುತ್ತವೆ. ಯಾವುದೇ ರೂಪದಲ್ಲಿ ತಂಬಾಕು ಹಲ್ಲುಗಳಿಗೆ ಹಾನಿಕಾರಕವಾಗಿದೆ. ಇದಲ್ಲದೇ ಧೂಮಪಾನವು ಹಲ್ಲುಗಳ ಮೇಲೆ ಕಪ್ಪು ಕಲೆಗಳನ್ನು ಉಂಟುಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರದಲ್ಲಿ ನಡೆದಾಡುತ್ತೇನೆ ಎಂದಿದ್ದ ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ
ವಾರದಲ್ಲಿ ನಡೆದಾಡುತ್ತೇನೆ ಎಂದಿದ್ದ ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ
ದೈವ ನೇಮೋತ್ಸವದಲ್ಲಿ ರಾಜಕೀಯ: ಇರಂತಬೆಟ್ಟು ಮನೆತನ ಅಸಮಾಧಾನ
ದೈವ ನೇಮೋತ್ಸವದಲ್ಲಿ ರಾಜಕೀಯ: ಇರಂತಬೆಟ್ಟು ಮನೆತನ ಅಸಮಾಧಾನ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ