AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣ್ಣುಗಳ ನಿಯಮಿತ ಸೇವನೆಯಿಂದ ತ್ವಚೆಯ ಹೊಳಪನ್ನು ಹೆಚ್ಚಿಸಬಹುದು

ಕಾಂತಿಯುತ ತ್ವಚೆ ನಮ್ಮದಾಗಬೇಕೆಂಬುವುದು ಹೆಂಗಳೆಯರ ಕನಸು. ಇದಕ್ಕಾಗಿ ಅನೇಕರು ದುಬಾರಿ ಸ್ಕಿನ್‌ಕೇರ್‌ಗಳ ಮೊರೆ ಹೋಗ್ತಾರೆ. ಆದರೆ ದುಬಾರಿ ಸೌಂದರ್ಯ ಉತ್ಪನ್ನಗಳ ಅಗತ್ಯವಿಲ್ಲ, ಬದಲಿಗೆ ಸರಿಯಾದ ಆಹಾರ ಪದ್ಧತಿಯ ಜೊತೆಗೆ ಈ ಕೆಲವೊಂದಿಷ್ಟು ಹಣ್ಣುಗಳ ಸೇವನೆಯಿಂದ ಸೆಲೆಬ್ರಿಟಿಗಳಂತೆ ಫಳ ಪಳನೆ ಹೊಳೆಯುವ ಗ್ಲೋವಿಂಗ್‌ ಸ್ಕಿನ್‌ ಪಡೆಯಬಹುದು.

ಈ ಹಣ್ಣುಗಳ ನಿಯಮಿತ ಸೇವನೆಯಿಂದ ತ್ವಚೆಯ ಹೊಳಪನ್ನು ಹೆಚ್ಚಿಸಬಹುದು
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 11, 2026 | 8:33 PM

Share

ಈ ಕೊರಿಯನ್ನರು ಮತ್ತು ಸೆಲೆಬ್ರಿಟಿಗಳ ತ್ವಚೆ ಸಖತ್ ಗ್ಲೋವಿಂಗ್‌ (glowing skin) ಆಗಿ ಇರುತ್ತದೆ. ಇಂತಹ ಹೊಳೆಯುವ ತ್ವಚೆಯನ್ನು ಪಡೆಯಬೇಕು ಎಂಬುದು ಪ್ರತಿ ಹೆಂಗಳೆಯರ ಕನಸಾಗಿದೆ. ಇದಕ್ಕಾಗಿ ದುಬಾರಿ ಸ್ಕಿನ್‌ಕೇರ್‌, ಸೌಂದರ್ಯ ವರ್ಧಕಗಳ ಮೊರೆ ಹೋಗ್ತಾರೆ. ಈ ರೀತಿ ದುಡ್ಡು ವೇಸ್ಟ್‌ ಮಾಡುವ ಬದಲು ಅದೇ ದುಡ್ಡಿನಿಂದ ಈ ಕಿತ್ತಳೆ, ದಾಳಿಂಬೆಯಂತಹ ಈ ಕೆಲವೊಂದಿಷ್ಟು ಹಣ್ಣುಗಳನ್ನು ಖರೀದಿಸಿ ತಿನ್ನಿ. ಸರಿಯಾದ ಆರೋಗ್ಯಕರ ಆಹಾರದ ಜೊತೆಗೆ ಇಂತಹ ಕೆಲವು ಹಣ್ಣುಗಳನ್ನು ಸೇವಿಸುವುದರಿಂದ ತ್ವಚೆಗೆ ಒಳಗಿನಿಂದ ಪೋಷಣೆ ದೊರೆಯುತ್ತದೆ. ಇದರಿಂದ ತ್ವಚೆಯು ಕೂಡಾ ಫಳಫಳನೇ ಹೊಳೆಯುತ್ತದೆ. ಹಾಗಿದ್ದರೆ ಗ್ಲೋವಿಂಗ್‌ ಸ್ಕಿನ್‌ ಪಡೆಯಲು ಯಾವೆಲ್ಲಾ ಹಣ್ಣುಗಳನ್ನು ಅಗತ್ಯವಾಗಿ ಸೇವಿಸಲೇಬೇಕು ಎಂಬುದನ್ನು ನೋಡೋಣ ಬನ್ನಿ.

ತ್ವಚೆಯ ಹೊಳಪನ್ನು ಹೆಚ್ಚಿಸಲು ಸಹಕಾರಿ ಈ ಹಣ್ಣುಗಳು:

ಕಿತ್ತಳೆ: ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ಚರ್ಮದ ಆರೋಗ್ಯಕ್ಕೆ ಅತ್ಯಗತ್ಯ. ಇದು ಕಾಲಜನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಚರ್ಮವನ್ನು ಯೌವ್ವನದಿಂದ ಕಾಣುವಂತೆ ಮಾಡುತ್ತದೆ. ಕಿತ್ತಳೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಸಾಕಷ್ಟು ಹಾನಿಯಿಂದ ರಕ್ಷಿಸುತ್ತದೆ ಮತ್ತು ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ನಿತ್ಯ ಕಿತ್ತಳೆ ಹಣ್ಣುಗಳನ್ನು ತಿನ್ನಿ.

ಪಪ್ಪಾಯಿ: ಪಪ್ಪಾಯಿಯಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಇದು ತ್ವಚೆಯಲ್ಲಿ ಅಂಟಿರುವ ಸತ್ತ ಚರ್ಮವನ್ನು ತೆಗೆದು ಹಾಕುತ್ತದೆ. ಚರ್ಮದ ಮೇಲಿನ ಕಲೆಗಳನ್ನು ಕಡಿಮೆ ಮಾಡಿ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಹಾಗಾಗಿ ಪಪ್ಪಾಯಿ ಹಣ್ಣು ಸಿಕ್ರೆ ತಪ್ಪದೇ ತಿನ್ನಿ.

ಬೆರ್ರಿ ಹಣ್ಣು: ಗಾತ್ರದಲ್ಲಿ ತುಂಬಾನೇ ಸಣ್ಣದಾಗಿರುವ ಈ ಹಣ್ಣು ವಯಸ್ಸಾಗುವಿಕೆ ವಿರೋಧಿ ಗುಣಗಳನ್ನು ಹೊಂದಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳು ಇದ್ದು, ಇದು ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತದೆ ಮತ್ತು ಚರ್ಮವನ್ನು ಅಕಾಲಿಕ ವಯಸ್ಸಾಗುವಿಕೆಯಿಂದ ರಕ್ಷಿಸುತ್ತದೆ. ಬೆರಿಹಣ್ಣುಗಳನ್ನು ತಿನ್ನುವುದರಿಂದ ನಿಮ್ಮ ಚರ್ಮವು ದೀರ್ಘಕಾಲದವರೆಗೆ ಯೌವನಯುತವಾಗಿ ಮತ್ತು ಕಾಂತಿಯುತವಾಗಿ ಇರುತ್ತದೆ.

ಕಲ್ಲಂಗಡಿ: ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವ ಕಲ್ಲಂಗಡಿ ಹಣ್ಣು ಕೂಡ ತ್ವಚೆಯ ಕಾಂತಿಯನ್ನು ಹೆಚ್ಚಿಸಲು ತುಂಬಾನೇ ಸಹಕಾರಿ.  ಇದರಲ್ಲಿರುವ ನೀರಿನಾಂಶವು  ಚರ್ಮವನ್ನು ತೇವವಾಗಿ ಮತ್ತು ಒಳಗಿನಿಂದ ಮೃದುವಾಗಿರಿಸುತ್ತದೆ. ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಮಗುವಿನಂತೆ ಆರಾಮವಾಗಿ ನಿದ್ರಿಸಲು ರಾತ್ರಿ ಸಮಯದಲ್ಲಿ ಅಭ್ಯಾಸಗಳನ್ನು ಪಾಲಿಸಿ

ದಾಳಿಂಬೆ : ದಾಳಿಂಬೆಯಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಕೆ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದನ್ನು ಪ್ರತಿದಿನ ತಿನ್ನುವುದರಿಂದ ರಕ್ತ ಶುದ್ಧವಾಗುತ್ತದೆ, ಚರ್ಮಕ್ಕೆ ನೈಸರ್ಗಿಕ ಹೊಳಪು ಸಿಗುತ್ತದೆ. ಅಲ್ಲದೆ ಇದು ಇದು ಸತ್ತ ಚರ್ಮದ ಕೋಶಗಳನ್ನು ಸರಿಪಡಿಸುತ್ತದೆ.

ಸೇಬು: ಸೇಬು ಹಣ್ಣು ವಿವಿಧ ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿವೆ. ಇದು ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮತ್ತು ಸುಕ್ಕುಗಳನ್ನು ತೆಗೆದು ಹಾಕಿ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡಲು ಸಹಾಯ ಮಾಡುತ್ತದೆ.

ಕೆಂಪು ದ್ರಾಕ್ಷಿಗಳು:  ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ರೆಸ್ವೆರಾಟ್ರೊಲ್ ಎಂಬ ಸಂಯುಕ್ತವಿದ್ದು, ಇದು ಚರ್ಮದ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್‌ಗಳ ರಚನೆಯನ್ನು ತಡೆಯುತ್ತದೆ. ಇದಲ್ಲದೆ ದ್ರಾಕ್ಷಿಯಲ್ಲಿರುವ ವಿಟಮಿನ್ ಇ ಮತ್ತು ಸಿ ಮುಖವನ್ನು ತೇವಗೊಳಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ