AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhi Jayanti 2024: ಮಹಾತ್ಮ ಗಾಂಧೀಜಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳಿವು

ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿಯವರ ಕೊಡುಗೆ ಅನನ್ಯವಾದದ್ದು. ಇಂದು ಅಕ್ಟೋಬರ್ 2 ಗಾಂಧಿಯವರ 155 ನೇ ಜನ್ಮದಿನವಾಗಿದೆ. "ಅಹಿಂಸೆ" ಎಂಬ ಪರಿಕಲ್ಪನೆಯನ್ನು ಹುಟ್ಟುಹಾಕಿದ ವ್ಯಕ್ತಿಯ ಗಾಂಧಿಯ ಗೌರವಾರ್ಥವಾಗಿ ವಿಶ್ವಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Gandhi Jayanti 2024: ಮಹಾತ್ಮ ಗಾಂಧೀಜಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳಿವು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 02, 2024 | 9:25 AM

Share

ಜಗತ್ತಿನಲ್ಲಿ ಶಾಂತಿ, ಅಹಿಂಸೆಯ ಬಗ್ಗೆ ಮಾತನಾಡುವಾಗ ಮೊದಲು ನೆನಪಾಗುವುದೇ ರಾಷ್ಟ್ರ ಪಿತ ಮಹಾತ್ಮ ಗಾಂಧಿ. ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಅಹಿಂಸೆಯನ್ನು ಪ್ರತಿಪಾದಿಸುತ್ತ ತಮ್ಮ ಜೀವನವನ್ನು ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟ ವ್ಯಕ್ತಿ. ಹೀಗಾಗಿ ಭಾರತದ ಸ್ವಾತಂತ್ರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ ಹಾಗೂ ಶಾಂತಿ ಮತ್ತು ಅಹಿಂಸೆ ಪ್ರತಿಪಾದಕರಾದ ಮಹಾತ್ಮ ಗಾಂಧಿಯವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ಅಕ್ಟೋಬರ್ 2 ರಂದು ಗಾಂಧಿಜಯಂತಿ ದಿನವನ್ನು ಆರಿಸಲಾಗುತ್ತದೆ. ಮಹಾತ್ಮ ಗಾಂಧಿಯವರು ಅಕ್ಟೋಬರ್ 2, 1869 ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದರು. ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಗೌರವಿಸಲು ಈ ದಿನವನ್ನು ಮೀಸಲಿಡಲಾಗಿದೆ. ಇದೇ ದಿನವನ್ನು ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ.

ಮಹಾತ್ಮ ಗಾಂಧೀಜಿಯವರು ದೇಶಕ್ಕಾಗಿ ಹೋರಾಟ ನಡೆಸಿದರೂ ಅವರ ಮೂಲತತ್ವವು ಅಹಿಂಸೆಯನ್ನು ಉತ್ತೇಜಿಸುವುದಾಗಿತ್ತು. ಗಾಂಧಿ ಅವರು ರಾಜಕಾರಣಿ, ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರು ಕೂಡ ಆಗಿ ತನ್ನ ತತ್ವ ಸಿದ್ದಾಂತಗಳಿಂದಲೇ ದೇಶ ವಿದೇಶಗಳಲ್ಲಿ ಚಿರಪರಿಚಿತರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ಹೋರಾಟದ ನೇತೃತ್ವ ವಹಿಸಿದ್ದ ಗಾಂಧೀಜಿಯವರ ಹೋರಾಟದ ಹಾದಿಯಲ್ಲಿ ಅವರ ಸಿದ್ಧಾಂತಗಳು ಮತ್ತು ಹೋರಾಟಗಳು 1947 ರಲ್ಲಿ ಭಾರತದ ಸ್ವಾತಂತ್ರ್ಯಕ್ಕೆ ದೊಡ್ಡ ಮಟ್ಟದಲ್ಲಿ ತಿರುವು ನೀಡಿತು. ಹೀಗಾಗಿ ಮಹಾತ್ಮಾ ಗಾಂಧೀಜಿಯವರು ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿದೆ.

ಅಂತಾರಾಷ್ಟ್ರೀಯ ಅಹಿಂಸಾ ದಿನದ ಆಚರಣೆ ಆರಂಭವಾದದ್ದು ಯಾವಾಗ?

2004ರ ಜನವರಿಯಲ್ಲಿ ಇರಾನಿಯನ್ ನೊಬೆಲ್ ಪ್ರಶಸ್ತಿ ವಿಜೇತ ಶಿರಿನ್ ಎಬಾಡಿ ಪ್ಯಾರಿಸ್​​ನಲ್ಲಿ ಅಂತಾರಾಷ್ಟ್ರೀಯ ಅಹಿಂಸಾ ದಿನದ ಪ್ರಸ್ತಾಪವಿಟ್ಟರು. ಮುಂಬೈಯ ವರ್ಲ್ಡ್ ಸೋಶಿಯಲ್ ಫಾರಂ​ನ ಹಿಂದಿ ಶಿಕ್ಷಕರಿಂದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಪ್ಯಾರೀಸ್​ನಲ್ಲಿ ಪಾಠ ಮಾಡುತ್ತಿದ್ದಾಗ ಈ ಕಲ್ಪನೆಯೊಂದು ಬಂದಿತ್ತು. ತದನಂತರದಲ್ಲಿ ಜನವರಿ 2007ರಲ್ಲಿ ವಿಶ್ವಸಂಸ್ಥೆಯು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಆಚರಿಸಲು ಕರೆ ನೀಡಿತು. ಅಂದಿನಿಂದ ಪ್ರತಿ ವರ್ಷ ಅಕ್ಟೋಬರ್ 2 ರಂದು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ ತತ್ವಗಳು ಮತ್ತು ಅವರ ಅಹಿಂಸಾತ್ಮಕ ಪ್ರತಿಭಟನೆಗಳನ್ನು ಗೌರವಿಸುವುದು ಈ ದಿನದ ಉದ್ದೇಶವಾಗಿದೆ.

ಗಾಂಧಿ ಜಯಂತಿ ಆಚರಣೆ ಹೇಗೆ?

ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು ಗಾಂಧಿಯವರ ಕೊಡುಗೆಗಳನ್ನು ನೆನೆದು, ಅವರಿಗೆ ಗೌರವವನ್ನು ಸಲ್ಲಿಸುವ ದಿನವಾಗಿದೆ ಶಾಲಾ, ಕಾಲೇಜುಗಳಲ್ಲಿ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ, ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಲಾಗುತ್ತದೆ. ಅದಲ್ಲದೇ, ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಪ್ರಾರ್ಥನೆ ಸೇವೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರದಾದ್ಯಂತದ ನಾಯಕರು ಮಹಾತ್ಮ ಗಾಂಧಿಯವರ ಸಮಾಧಿಯನ್ನು ಹೊಂದಿರುವ ನವದೆಹಲಿಯ ರಾಜ್ ಘಾಟ್‌ನಲ್ಲಿ ಗೌರವ ಸಲ್ಲಿಸುತ್ತಾರೆ.

ಮಹಾತ್ಮ ಗಾಂಧೀಜಿಯವರ ನುಡಿ ಮುತ್ತುಗಳು

  • ದುರ್ಬಲರು ಎಂದಿಗೂ ಕ್ಷಮಿಸಲಾರರು. ಕ್ಷಮೆಯು ಬಲಶಾಲಿಗಳ ಲಕ್ಷಣ
  • ಜಗತ್ತು ಬದಲಾಗಬೇಕು ಎಂದು ಹೇಳುವವರು, ಮೊದಲು ತಮ್ಮಿಂದಲೇ ಬದಲಾವಣೆಯಾಗಬೇಕು ಎಂಬುದನ್ನು ಅರಿತುಕೊಳ್ಳಬೇಕು.
  • ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸಲು ಸಾಕಷ್ಟನ್ನು ಭೂಮಿಯು ಒದಗಿಸುತ್ತದೆ. ಆದರೆ, ಅದು ಪ್ರತಿಯೊಬ್ಬ ಮನುಷ್ಯನ ದುರಾಸೆಯನ್ನು ಪೂರೈಸುವುದಿಲ್ಲ
  • ನೀವು ಏನು ಯೋಚಿಸುತ್ತೀರಿ, ನೀವು ಏನು ಹೇಳುತ್ತೀರಿ ಮತ್ತು ನೀವು ಏನು ಮಾಡುತ್ತೀರಿ ಎಂಬುದರ ನಡುವೆ ಸಾಮರಸ್ಯ ಇದ್ದರೆ ಅದುವೇ ಸಂತೋಷ.
  • ಮನುಷ್ಯ ಆತನ ಆಲೋಚನೆಗಳದ್ದೇ ಪ್ರತಿರೂಪ. ಆತ ಏನನ್ನು ಆಲೋಚಿಸುವನೋ ಅದೇ ಆಗುತ್ತಾನೆ.
  • ಬಲವು ದೈಹಿಕ ಸಾಮರ್ಥ್ಯದಿಂದ ಬರುವುದಲ್ಲ. ಅದು ಅದಮ್ಯ ಸಂಕಲ್ಪದಿಂದ ಬರುವಂಥದ್ದು.
  • ಒಂದು ರಾಷ್ಟ್ರದ ಹಿರಿಮೆ ಮತ್ತು ಅದರ ನೈತಿಕ ಪ್ರಗತಿಯನ್ನು ಅದರ ಪ್ರಾಣಿಗಳನ್ನು ಹೇಗೆ ನಡೆಸಿಕೊಳ್ಳಲಾಗುತ್ತದೆ ಎಂಬುದನ್ನು ನೋಡಿ ನಿರ್ಣಯಿಸಬಹುದು.
  • ಭೂಮಿ ನಮ್ಮ ಬಯಕೆಗಳನ್ನು ಪೂರೈಸಬಲ್ಲುದು. ಆದರೆ ದುರಾಸೆಗಳನ್ನಲ್ಲ.
  • ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಲಾಗದು. ಅದು ಜೀವನದು ಉಸಿರು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ