AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2024: ಗಣೇಶನಿಗೆ ಬಲುಪ್ರಿಯ ಈ ಮೋದಕ, ಮಾಡೋದು ಹೇಗೆ?

ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕ ಕೂಡ ಒಂದು. ಹೀಗಾಗಿ ಚೌತಿ ಹಬ್ಬವು ಮೋದಕವಿಲ್ಲದೇ ಪೂರ್ಣವಾಗುವುದಿಲ್ಲ. ಏಕದಂತನಿಗೆ ಬಲುಪ್ರಿಯವಾದ ಮೋದಕವನ್ನು ನೈವೇದ್ಯವಾಗಿ ಇಡಲಾಗುತ್ತದೆ. ಆವಿಯಲ್ಲಿ ಬೇಯಿಸಿದ ಮೋದಕವು ನೋಡುವುದಕ್ಕೆ ಎಷ್ಟು ಆಕರ್ಷಕವೋ ಅಷ್ಟೇ ರುಚಿಕರವಾಗಿರುತ್ತದೆ. ಹಾಗಾದ್ರೆ ಈ ಮೋದಕ ರೆಸಿಪಿ ಮಾಡೋದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.

Ganesh Chaturthi 2024: ಗಣೇಶನಿಗೆ ಬಲುಪ್ರಿಯ ಈ ಮೋದಕ, ಮಾಡೋದು ಹೇಗೆ?
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 28, 2024 | 4:57 PM

Share

ಗಣಪತಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಸೆಪ್ಟೆಂಬರ್ 7 ರಂದು ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳು ಗಣೇಶನ ಹಬ್ಬಕ್ಕೆ ನೈವೇದ್ಯವಿಡಲು ಏನೇನು ಸಿಹಿತಿಂಡಿಗಳನ್ನು ಮಾಡುವ ಬಗ್ಗೆ ಸಿದ್ಧತೆ ಮಾಡಿಕೊಂಡಾಗಿದೆ. ಗಣೇಶ ಚತುರ್ಥಿಯಂದು ಗಣೇಶನಿಗೆ ಚಕ್ಕುಲಿ, ಉಂಡೆ, ಎಳ್ಳುಂಡೆ, ಕರ್ಜಿಕಾಯಿ, ಕಡುಬು, ಸಿಹಿ ಕಡುಬು, ಖಾರ ಕಡುಬು ಈ ರೀತಿ ಅನೇಕ ತಿಂಡಿಗಳನ್ನು ಮಾಡಿ ನೈವೇದ್ಯಗೆ ಇಡಲಾಗುತ್ತದೆ. ಹೀಗಾಗಿ ಮನೆಯಲ್ಲೇ ಈ ವಸ್ತುಗಳಿದ್ದರೆ ಗಣಪನಿಗೆ ನೈವೇದ್ಯವಿಡಲು ಸುಲಭವಾಗಿ ಮೋದಕವನ್ನು ಮಾಡಬಹುದು.

ಮೋದಕ ಮಾಡಲು ಬೇಕಾಗುವ ಪದಾರ್ಥಗಳು

* ಎರಡು ಚಮಚ ತುಪ್ಪ

* ಎರಡು ಕಪ್ ತುರಿದ ತೆಂಗಿನಕಾಯಿ

* ಒಂದು ಕಪ್ ಬೆಲ್ಲ

* ಅರ್ಧ ಚಮಚ ಏಲಕ್ಕಿ ಪುಡಿ

* ಎರಡು ಕಪ್ ನೀರು

* ಚಮಚ ಉಪ್ಪು

* ಎರಡು ಕಪ್ ಅಕ್ಕಿ ಹಿಟ್ಟು

ಇದನ್ನೂ ಓದಿ: ಶಾಲೆಯಲ್ಲಿ ಗಣೇಶ ಚತುರ್ಥಿ ಬೋರ್ಡ್ ಅಲಂಕಾರ ಮಾಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

  • ಮೊದಲನೆಯದಾಗಿ, ದೊಡ್ಡ ಬಾಣಲೆಗೆ ಚಮಚ ತುಪ್ಪ ಹಾಕಿ ಬಿಸಿ ಮಾಡಿ, ಅದಕ್ಕೆ ಎರಡು ಕಪ್ ತೆಂಗಿನಕಾಯಿ ಸೇರಿಸಿಕೊಂಡು ಪರಿಮಳ ಬರುವವರೆಗೆ ಹುರಿದುಕೊಳ್ಳಿ.
  • ಆ ಬಳಿಕ ಅದಕ್ಕೆ ಒಂದು ಕಪ್ ಬೆಲ್ಲ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬೆಲ್ಲ ಕರಗುವವರೆಗೆ ಮಧ್ಯಮ ಉರಿಯಲ್ಲಿ ಬೇಯಿಸಿಕೊಳ್ಳಿ. ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿಕೊಳ್ಳಿ.
  • ಮೋದಕ ಹಿಟ್ಟು ತಯಾರಿಸಲು ಬಾಣಲೆಗೆ ಎರಡು ಕಪ್ ನೀರು, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಸ್ವಲ್ಪ ತುಪ್ಪ ಸೇರಿಸಿ ಚೆನ್ನಾಗಿ ಕುದಿಸಿ.
  • ಈ ನೀರಿಗೆ ಎರಡು ಅಕ್ಕಿ ಹಿಟ್ಟು ಸೇರಿಸಿ ನೀರನ್ನು ಹೀರಿಕೊಳ್ಳುವವರೆಗೆ ಚೆನ್ನಾಗಿ ಕಲಸಿಕೊಳ್ಳಿ.
  • ಐದು ನಿಮಿಷಗಳ ಕಾಲ ತಣ್ಣಾಗಲು ಬಿಟ್ಟು ಮೃದುವಾಗುವವರೆಗೆ ಚೆನ್ನಾಗಿದೆ ನಾದಿಕೊಳ್ಳಿ.
  • ಚೆಂಡಿನ ಗಾತ್ರದ ಅಕ್ಕಿ ಹಿಟ್ಟಿನ ಹಿಟ್ಟನ್ನು ತೆಗೆದುಕೊಂಡು ಅದನ್ನು ಚಪ್ಪಟೆ ಮಾಡಿ. ಬೆಲ್ಲ ಹಾಗೂ ತೆಂಗಿನಕಾಯಿ ಮಿಶ್ರಣವನ್ನು ಅದರೊಳಗೆ ಹಾಕಿ ಎಲ್ಲ ಬದಿಗಳಿಂದ ಮೋದಕದ ಆಕಾರದಲ್ಲಿ ಒತ್ತಿರಿ.
  • ಇದನ್ನು ಇಡ್ಲಿ ಪಾತ್ರೆಯಲ್ಲಿ ಹತ್ತು ನಿಮಿಷಗಳ ಕಾಲ ಬೇಯಿಸಿದರೆ ಗಣೇಶನಿಗೆ ಪ್ರಿಯವಾದ ಮೋದಕ ಸವಿಯಲು ಸಿದ್ಧ.

ಗಣೇಶ ಚತುರ್ಥಿ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ