AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2024: ಗಣೇಶನಿಗೆ ಬಲುಪ್ರಿಯ ಈ ಮೋದಕ, ಮಾಡೋದು ಹೇಗೆ?

ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕ ಕೂಡ ಒಂದು. ಹೀಗಾಗಿ ಚೌತಿ ಹಬ್ಬವು ಮೋದಕವಿಲ್ಲದೇ ಪೂರ್ಣವಾಗುವುದಿಲ್ಲ. ಏಕದಂತನಿಗೆ ಬಲುಪ್ರಿಯವಾದ ಮೋದಕವನ್ನು ನೈವೇದ್ಯವಾಗಿ ಇಡಲಾಗುತ್ತದೆ. ಆವಿಯಲ್ಲಿ ಬೇಯಿಸಿದ ಮೋದಕವು ನೋಡುವುದಕ್ಕೆ ಎಷ್ಟು ಆಕರ್ಷಕವೋ ಅಷ್ಟೇ ರುಚಿಕರವಾಗಿರುತ್ತದೆ. ಹಾಗಾದ್ರೆ ಈ ಮೋದಕ ರೆಸಿಪಿ ಮಾಡೋದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.

Ganesh Chaturthi 2024: ಗಣೇಶನಿಗೆ ಬಲುಪ್ರಿಯ ಈ ಮೋದಕ, ಮಾಡೋದು ಹೇಗೆ?
ಸಾಯಿನಂದಾ
| Edited By: |

Updated on: Aug 28, 2024 | 4:57 PM

Share

ಗಣಪತಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಸೆಪ್ಟೆಂಬರ್ 7 ರಂದು ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳು ಗಣೇಶನ ಹಬ್ಬಕ್ಕೆ ನೈವೇದ್ಯವಿಡಲು ಏನೇನು ಸಿಹಿತಿಂಡಿಗಳನ್ನು ಮಾಡುವ ಬಗ್ಗೆ ಸಿದ್ಧತೆ ಮಾಡಿಕೊಂಡಾಗಿದೆ. ಗಣೇಶ ಚತುರ್ಥಿಯಂದು ಗಣೇಶನಿಗೆ ಚಕ್ಕುಲಿ, ಉಂಡೆ, ಎಳ್ಳುಂಡೆ, ಕರ್ಜಿಕಾಯಿ, ಕಡುಬು, ಸಿಹಿ ಕಡುಬು, ಖಾರ ಕಡುಬು ಈ ರೀತಿ ಅನೇಕ ತಿಂಡಿಗಳನ್ನು ಮಾಡಿ ನೈವೇದ್ಯಗೆ ಇಡಲಾಗುತ್ತದೆ. ಹೀಗಾಗಿ ಮನೆಯಲ್ಲೇ ಈ ವಸ್ತುಗಳಿದ್ದರೆ ಗಣಪನಿಗೆ ನೈವೇದ್ಯವಿಡಲು ಸುಲಭವಾಗಿ ಮೋದಕವನ್ನು ಮಾಡಬಹುದು.

ಮೋದಕ ಮಾಡಲು ಬೇಕಾಗುವ ಪದಾರ್ಥಗಳು

* ಎರಡು ಚಮಚ ತುಪ್ಪ

* ಎರಡು ಕಪ್ ತುರಿದ ತೆಂಗಿನಕಾಯಿ

* ಒಂದು ಕಪ್ ಬೆಲ್ಲ

* ಅರ್ಧ ಚಮಚ ಏಲಕ್ಕಿ ಪುಡಿ

* ಎರಡು ಕಪ್ ನೀರು

* ಚಮಚ ಉಪ್ಪು

* ಎರಡು ಕಪ್ ಅಕ್ಕಿ ಹಿಟ್ಟು

ಇದನ್ನೂ ಓದಿ: ಶಾಲೆಯಲ್ಲಿ ಗಣೇಶ ಚತುರ್ಥಿ ಬೋರ್ಡ್ ಅಲಂಕಾರ ಮಾಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

  • ಮೊದಲನೆಯದಾಗಿ, ದೊಡ್ಡ ಬಾಣಲೆಗೆ ಚಮಚ ತುಪ್ಪ ಹಾಕಿ ಬಿಸಿ ಮಾಡಿ, ಅದಕ್ಕೆ ಎರಡು ಕಪ್ ತೆಂಗಿನಕಾಯಿ ಸೇರಿಸಿಕೊಂಡು ಪರಿಮಳ ಬರುವವರೆಗೆ ಹುರಿದುಕೊಳ್ಳಿ.
  • ಆ ಬಳಿಕ ಅದಕ್ಕೆ ಒಂದು ಕಪ್ ಬೆಲ್ಲ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬೆಲ್ಲ ಕರಗುವವರೆಗೆ ಮಧ್ಯಮ ಉರಿಯಲ್ಲಿ ಬೇಯಿಸಿಕೊಳ್ಳಿ. ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿಕೊಳ್ಳಿ.
  • ಮೋದಕ ಹಿಟ್ಟು ತಯಾರಿಸಲು ಬಾಣಲೆಗೆ ಎರಡು ಕಪ್ ನೀರು, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಸ್ವಲ್ಪ ತುಪ್ಪ ಸೇರಿಸಿ ಚೆನ್ನಾಗಿ ಕುದಿಸಿ.
  • ಈ ನೀರಿಗೆ ಎರಡು ಅಕ್ಕಿ ಹಿಟ್ಟು ಸೇರಿಸಿ ನೀರನ್ನು ಹೀರಿಕೊಳ್ಳುವವರೆಗೆ ಚೆನ್ನಾಗಿ ಕಲಸಿಕೊಳ್ಳಿ.
  • ಐದು ನಿಮಿಷಗಳ ಕಾಲ ತಣ್ಣಾಗಲು ಬಿಟ್ಟು ಮೃದುವಾಗುವವರೆಗೆ ಚೆನ್ನಾಗಿದೆ ನಾದಿಕೊಳ್ಳಿ.
  • ಚೆಂಡಿನ ಗಾತ್ರದ ಅಕ್ಕಿ ಹಿಟ್ಟಿನ ಹಿಟ್ಟನ್ನು ತೆಗೆದುಕೊಂಡು ಅದನ್ನು ಚಪ್ಪಟೆ ಮಾಡಿ. ಬೆಲ್ಲ ಹಾಗೂ ತೆಂಗಿನಕಾಯಿ ಮಿಶ್ರಣವನ್ನು ಅದರೊಳಗೆ ಹಾಕಿ ಎಲ್ಲ ಬದಿಗಳಿಂದ ಮೋದಕದ ಆಕಾರದಲ್ಲಿ ಒತ್ತಿರಿ.
  • ಇದನ್ನು ಇಡ್ಲಿ ಪಾತ್ರೆಯಲ್ಲಿ ಹತ್ತು ನಿಮಿಷಗಳ ಕಾಲ ಬೇಯಿಸಿದರೆ ಗಣೇಶನಿಗೆ ಪ್ರಿಯವಾದ ಮೋದಕ ಸವಿಯಲು ಸಿದ್ಧ.

ಗಣೇಶ ಚತುರ್ಥಿ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’