AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesha Chaturthi 2024 : ಗಣೇಶ ಚತುರ್ಥಿಗೆ ನೈವೇದ್ಯಕ್ಕಾಗಿ ಮಾಡಿ ಕಡಲೆಕಾಳಿನ ಉಸ್ಲಿ, ರೆಸಿಪಿ ಇಲ್ಲಿದೆ

ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನು ಕೆಲವು ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಬಾರಿ ಸೆಪ್ಟೆಂಬರ್ 7 ರಂದು ಗಣೇಶ ಚರ್ತುಥಿಯನ್ನು ಆಚರಿಸಲಾಗುತ್ತಿದೆ. ಈಗಾಗಲೇ ಹೆಚ್ಚಿನವರ ಮನೆಯಲ್ಲಿ ಹಬ್ಬದ ತಯಾರಿಯೂ ಶುರುವಾಗಿದ್ದು, ನೈವೇದ್ಯಗಳನ್ನು ತಯಾರಿಸುವುದರಿಂದ ಹಿಡಿದು ಎಲ್ಲಾ ರೀತಿಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಗಣಪನಿಗೆ ನೈವೇದ್ಯವಾಗಿ ಮನೆಯಲ್ಲೇ ಸುಲಭವಾಗಿ ಕಡಲೆಕಾಳಿನ ಉಸ್ಲಿಯನ್ನು ಮಾಡಬಹುದಾಗಿದೆ. ಹಾಗಾದ್ರೆ ಈ ರೆಸಿಪಿಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Ganesha Chaturthi 2024 : ಗಣೇಶ ಚತುರ್ಥಿಗೆ ನೈವೇದ್ಯಕ್ಕಾಗಿ ಮಾಡಿ ಕಡಲೆಕಾಳಿನ ಉಸ್ಲಿ, ರೆಸಿಪಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Aug 29, 2024 | 5:51 PM

Share

ಹಬ್ಬ ಅಂದಮೇಲೆ ಅಲಂಕಾರ ಹಾಗೂ ಸಿಹಿ ತಿಂಡಿಗಳ ತಯಾರಿಯಿದ್ದೆ ಇರುತ್ತದೆ. ಅದರಲ್ಲಿ ಗಣೇಶ ಹಬ್ಬ ಅಂದಮೇಲೆ ತಯಾರಿಯೂ ಸ್ವಲ್ಪ ಹೆಚ್ಚೇ ಇರುತ್ತದೆ ಎಂದೇಳಬಹುದು. ಗಣೇಶ ಚತುರ್ಥಿಗೆ ವಿಘ್ನ ನಿವಾರಕನಿಗೆ ಮೋದಕ, ಪಂಚ ಕಜ್ಜಾಯ, ಲಡ್ಡು, ಕರ್ಚಿಕಾಯಿ ಹೀಗೆ ವಿವಿಧ ಸಿಹಿ ತಿಂಡಿಗಳನ್ನು ಮಾಡಿ ನೈವೇದ್ಯವಾಗಿ ಇಡಲಾಗುತ್ತದೆ. ಅದಲ್ಲದೇ ಗಣೇಶನಿಗೆ ಪ್ರಿಯಾವಾದ ಕಡಲೆಕಾಳಿನ ಉಸ್ಲಿ ಇಲ್ಲದಿದ್ದರೆ ಹೇಗೆ ಅಲ್ಲವೇ, ಈ ವಿಶೇಷ ದಿನದಂದು ಹತ್ತೇ ನಿಮಿಷದಲ್ಲಿ ಕಡಲೆಕಾಳಿನ ಉಸ್ಲಿ ಮಾಡಿ ನೈವೇದ್ಯವಾಗಿ ಇಡಬಹುದಾಗಿದೆ.

ಕಡಲೆಕಾಳಿನ ಉಸ್ಲಿ ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ಕೆಂಪು ಕಡಲೆ

* ಎರಡು ಹಸಿಮೆಣಸಿನಕಾಯಿ

* ಅರ್ಧ ಕಪ್ ತೆಂಗಿನ ತುರಿ

* ಚಿಟಿಕೆ ಹಿಂಗು

* ಚಿಟಿಕೆ ಅರಿಶಿನ

* ಸ್ವಲ್ಪ ಬೆಲ್ಲ

* ರುಚಿಗೆ ತಕ್ಕಷ್ಟು ಉಪ್ಪು

ಒಗ್ಗರಣೆಗೆ ಬೇಕಾಗುವ ಸಾಮಗ್ರಿಗಳು

* ಎಣ್ಣೆ

* ಸಾಸಿವೆ

* ಜೀರಿಗೆ

* ಕಡಲೆ ಬೇಳೆ

* ಉದ್ದಿನ ಬೇಳೆ

* ಕರಿಬೇವು

ಇದನ್ನೂ ಓದಿ: ಗಣೇಶನಿಗೆ ಬಲುಪ್ರಿಯ ಈ ಮೋದಕ, ಮಾಡೋದು ಹೇಗೆ?

ಮಾಡುವ ವಿಧಾನ

* ಮೊದಲು ಕೆಂಪು ಕಡಲೆಯನ್ನು ಚೆನ್ನಾಗಿ ತೊಳೆದು ಕುಕ್ಕರ್ ಗೆ ಹಾಕಿಕೊಳ್ಳಿ. ಅದಕ್ಕೆ ಬೆಲ್ಲ, ಅರಶಿನ ಹುಡಿ, ಉಪ್ಪು ಸೇರಿಸಿ ಬೇಯಿಸಿಕೊಳ್ಳಿ.

* ಚೆನ್ನಾಗಿ ಬೆಂದ ಕಡಲೆಯನ್ನು ನೀರು ಬಸಿದು ಬೇರೆ ಪಾತ್ರೆಗೆ ವರ್ಗಾಯಿಸಿಕೊಳ್ಳಿ.

* ಒಲೆಯ ಮೇಲೆ ಬಾಣಲೆಯಿಟ್ಟು ಸಾಸಿವೆ, ಜೀರಿಗೆ, ಹಸಿ ಮೆಣಸು, ಉದ್ದಿನ ಬೇಳೆ, ಕಡಲೆ ಬೇಳೆ ಕರಿಬೇವು ಹಾಗೂ ಇಂಗು ಹಾಕಿ ಒಗ್ಗರಣೆಗೆ ಸಿದ್ಧ ಮಾಡಿಕೊಳ್ಳಿ.

* ಈಗಾಗಲೇ ಬೇಯಿಸಿದ ಕಡಲೆಗೆ ಒಗ್ಗರಣೆ ಹಾಕಿ ಐದು ನಿಮಿಷಗಳ ಕಾಲ ಸಣ್ಣಗೆ ಹುರಿಯಲ್ಲಿ ಮತ್ತೆ ಬೇಯಲು ಬಿಡಿ.

* ಆ ಬಳಿಕ ಇದಕ್ಕೆ ತೆಂಗಿನ ತುರಿಯನ್ನು ಸೇರಿಸಿದರೆ ರುಚಿಕರವಾದ ಕಡಲೆಕಾಯಿ ಉಸ್ಲಿ ನೈವೇದ್ಯಕ್ಕೆ ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!