AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marriage: ಮದುವೆಯಾಗದ ಹುಡುಗರಿಗೊಂದು ಕಿವಿ ಮಾತು: ನಿಮ್ಮ ಹೃದಯ ಚೆನ್ನಾಗಿರಬೇಕು ಅಂದ್ರೆ ಬೇಗ ಮದುವೆಯಾಗಿ, ಅಧ್ಯಯನ ಹೇಳ್ತಿದೆ

ಹುಡುಗರ ಹೃದಯ ಚೆನ್ನಾಗಿರಬೇಕೆಂದರೆ ಬೇಗ ಮದುವೆಯಾಗಬೇಕಂತೆ, ಇದು ನಾವು ಹೇಳ್ತಿರೋದಲ್ಲ ಅಧ್ಯಯನ ಹೇಳ್ತಿರೋದು.

Marriage: ಮದುವೆಯಾಗದ ಹುಡುಗರಿಗೊಂದು ಕಿವಿ ಮಾತು: ನಿಮ್ಮ ಹೃದಯ ಚೆನ್ನಾಗಿರಬೇಕು ಅಂದ್ರೆ ಬೇಗ ಮದುವೆಯಾಗಿ, ಅಧ್ಯಯನ ಹೇಳ್ತಿದೆ
ಮದುವೆ
ನಯನಾ ರಾಜೀವ್
|

Updated on: Feb 24, 2023 | 5:30 PM

Share

ಹುಡುಗರ ಹೃದಯ ಚೆನ್ನಾಗಿರಬೇಕೆಂದರೆ ಬೇಗ ಮದುವೆಯಾಗಬೇಕಂತೆ, ಇದು ನಾವು ಹೇಳ್ತಿರೋದಲ್ಲ ಅಧ್ಯಯನ ಹೇಳ್ತಿರೋದು. ಹೌದು ಬೇಗ ಮದುವೆಯಾಗುವುದರಿಂದ ಪುರುಷರ ಹೃದಯದ ಆರೋಗ್ಯ ಚೆನ್ನಾಗಿರುವುದು ಹಾಗೆಯೇ ಕೆಲವು ರೋಗಗಳಿಂದಲೂ ದೂರವಿರಬಹುದು ಎಂದು ಅಧ್ಯಯನ ಹೇಳಿದೆ. ಸಂಶೋಧಕರು 94 ಅಮೆರಿಕನ್ನರ ಬದುಕುಳಿಯುವಿಕೆಯ ಪ್ರಮಾಣವನ್ನು ಪರಿಶೀಲಿಸಿದರು. ಕಳೆದ 10 ವರ್ಷಗಳಲ್ಲಿ ಈ ಜನರಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಯಾಗಿದೆ.

ಹಿಂದಿನ ಅಧ್ಯಯನಗಳು ಮದುವೆಯಾಗಿರುವುದು ಉತ್ತಮ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ದೀರ್ಘಾಯುಷ್ಯಕ್ಕೆ ಕಾರಣವಾಗುತ್ತದೆ, ವಿಶೇಷವಾಗಿ ಪುರುಷರಿಗೆ ಎಂದು ಹೇಳಿದೆ. ಜೀವನ ಸಂಗಾತಿಯನ್ನು ಹೊಂದಿರುವುದು ಒಂಟಿತನವನ್ನು ಹೋಗಲಾಡಿಸುತ್ತದೆ, ಆದರೆ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇದು ಅಧಿಕ ರಕ್ತದೊತ್ತಡ, ಹೃದ್ರೋಗ ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಮದುವೆಯಾದ ಬಳಿಕ ಎಂಥದ್ದೇ ಕಷ್ಟ ಬಂದರೂ ಸಂಗಾತಿ ಜತೆಗೆ ಸೇರಿ ಎದುರಿಸುತ್ತೇನೆ, ತಾನು ಒಬ್ಬಂಟಿ ಅಲ್ಲ ಎನ್ನುವ ಭಾವನೆ ಮೂಡುತ್ತದೆ. ಹಾಗಾಗಿ ಹಲವು ಚಿಂತೆಗಳನ್ನು ಬಿಟ್ಟುಬಿಡುತ್ತಾರೆ.

ಮತ್ತಷ್ಟು ಓದಿ:Mental Health: ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಉತ್ತಮ ಸಲಹೆ

ದಿ ಸನ್ ವರದಿಯ ಪ್ರಕಾರ, ಬ್ರಿಟನ್‌ನಲ್ಲಿ ಮದುವೆ ದರ ಕುಸಿಯುತ್ತಿದೆ. 1893 ರ ನಂತರ, 2019 ರಲ್ಲಿ ಕಡಿಮೆ ಮದುವೆಗಳು ನಡೆದಿವೆ. ಡಾ. ಲೇಬಾ ಅವರ ಅಧ್ಯಯನದಲ್ಲಿ 6800 ಜನರ ಡೇಟಾವನ್ನು ಬಳಸಲಾಗಿದೆ. ನಂತರ ಅವರು ಮತ್ತು ಅವರ ವೈವಾಹಿಕ ಸ್ಥಿತಿಯನ್ನು ಹೋಲಿಸಲಾಯಿತು. ಒಬ್ಬ ಪುರುಷನು ವಿವಾಹಿತನಿಗಿಂತ ಬ್ರಹ್ಮಚಾರಿಯಾಗಿ ಉಳಿದರೆ ಐದು ವರ್ಷಗಳಲ್ಲಿ ಹೃದಯ ವೈಫಲ್ಯದಿಂದ ಸಾಯುವ ಸಾಧ್ಯತೆ 2.2 ಪಟ್ಟು ಹೆಚ್ಚು ಎಂದು ಹೇಳಲಾಗಿದೆ.

ಆದಾಗ್ಯೂ, ಮದುವೆಯ ಸ್ಥಿತಿಯು ಹೃದಯಾಘಾತದಿಂದ ಸಾಯುವ ಮಹಿಳೆಯರ ಅಪಾಯದ ಮೇಲೆ ಪರಿಣಾಮ ಬೀರಲಿಲ್ಲ. ಸುಮಾರು 900,000 ಬ್ರಿಟನ್ನರು ಹೃದಯದ ಸಮಸ್ಯೆಗಳನ್ನು ಹೊಂದಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!