AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ginger Health Benefits: ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬಹುಪಯೋಗಿ ಶುಂಠಿ

ಭಾರತೀಯರು ತಮ್ಮ ಆಹಾರ ಪದಾರ್ಥಗಳಲ್ಲಿ ಶುಂಠಿಯನ್ನು ಹೆಚ್ಚಾಗಿ ಬಳಸುತ್ತಾರೆ. ಖಾರ ಹಾಗೂ ಪರಿಮಳಕ್ಕೆ ಹೆಸರುವಾಸಿಯಾಗಿರುವ ಈ ಶುಂಠಿಯೂ ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುತ್ತದೆ. ಆಕರ್ಷಕ ಬಣ್ಣ ಹಾಗೂ ಘಮವನ್ನು ಹೊಂದಿರುವ ಶುಂಠಿಯೂ ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಹೀಗಾಗಿ ಹೆಚ್ಚಿನವರು ಈ ಶುಂಠಿಯಿಂದ ಮನೆ ಮದ್ದನ್ನು ತಯಾರಿಸಿ ಆರೋಗ್ಯ ಸಮಸ್ಯೆಗಳಿಗೆ ಔಷಧಿಯಾಗಿ ಬಳಸುತ್ತಿದ್ದಾರೆ.

Ginger Health Benefits: ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬಹುಪಯೋಗಿ ಶುಂಠಿ
ಸಾಯಿನಂದಾ
| Updated By: Digi Tech Desk|

Updated on:Jan 29, 2024 | 1:03 PM

Share

ಎಲ್ಲರ ಅಡುಗೆ ಮನೆಗಳಲ್ಲಿ ಶುಂಠಿಯು ಇದ್ದೆ ಇರುತ್ತದೆ. ಈ ಶುಂಠಿಯೂ ಬಹುತೇಕ ಎಲ್ಲಾ ರೀತಿಯ ಆಹಾರಗಳ ರುಚಿ ಹಾಗೂ ಘಮ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಶುಂಠಿಯೂ ಹಲವು ರೋಗಗಳಿಗೆ ಔಷಧಿಯಾಗಿದೆ. ನಮ್ಮ ಹಿರಿಯರು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬಂತೆಂದರೆ ಅಡುಗೆ ಮನೆಯಲ್ಲಿರುವ ಈ ಶುಂಠಿಯಿಂದ ಔಷಧಿಯಾಗಿ ತಯಾರಿಸಿ ಸೇವಿಸುತ್ತಿದ್ದರು. ಇವತ್ತಿಗೂ ಕೂಡ ಹಳ್ಳಿಗಳಲ್ಲಿ ಶುಂಠಿಯಿಂದ ಮನೆ ಮದ್ದನ್ನು ತಯಾರಿ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳುತ್ತಾರೆ.

ಶುಂಠಿಯ ಮನೆ ಮದ್ದುಗಳು ಇಲ್ಲಿವೆ:

* ಶುಂಠಿ, ಮೆಣಸಿನ ಕಾಳು, ಹಿಪ್ಪಲಿಗಳನ್ನು ಪುಡಿ ಮಾಡಿಟ್ಟುಕೊಂಡು, ದಿನಕ್ಕೆರಡು ಬಾರಿ ಜೇನುತುಪ್ಪದೊಂದಿಗೆ ಸೇವಿಸಿದರೆ ಗಂಟಲು ನೋವು ಶಮನವಾಗುತ್ತದೆ.

* ಅರ್ಧಲೋಟ ಬಿಸಿ ನೀರಿಗೆ ಶುಂಠಿ ರಸ, ಬೆಲ್ಲ ಬೆರೆಸಿ ಕಲಸಿ ಬೆಳಗ್ಗೆ ಮತ್ತು ರಾತ್ರಿ ಮೂರು ದಿನಗಳ ಕಾಲ ಕುಡಿದರೆ ನೆಗಡಿ ನಿವಾರಣೆಯಾಗುತ್ತದೆ.

* ಶುಂಠಿ, ಹಿಪ್ಪಲಿ, ಕಾಳು ಮೆಣಸು ಮತ್ತು ತುಳಸಿ ಇವು ಮೂರನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಪುಡಿ ಮಾಡಿ ಅರ್ಧಲೋಟ ನೀರಿಗೆ ಹಾಕಿ ಕುದಿಸಬೇಕು. ಅದಕ್ಕೆ ಬೆಲ್ಲ ಹಾಲು ಬೆರೆಸಿ ಶೋಧಿಸಿ, ದಿನಕ್ಕೆ ಎರಡು ಬಾರಿ ಕುಡಿದರೆ ನೆಗಡಿ ಸಮಸ್ಯೆಯೂ ಕಡಿಮೆಯಾಗುತ್ತದೆ.

* ಒಂದು ಚಮಚ ಹಸಿಶುಂಠಿ ರಸಕ್ಕೆ ಒಂದು ಚಮಚ ಜೇನುತುಪ್ಪ ಬೆರೆಸಿ ಒಂದರಿಂದ ಎರಡು ಚಮಚ ದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ವಾಂತಿಯಾಗುವುದು ನಿಲ್ಲುತ್ತದೆ.

* ಒಂದು ಚಮಚದಷ್ಟು ಹಸಿ ಶುಂಠಿ ರಸಕ್ಕೆ ಅರ್ಧ ಚಮಚ ಜೇನುತುಪ್ಪ ಸೇರಿಸಿ ಸೇವಿಸಿದರೆ ಕೆಮ್ಮು, ಕಫ, ಅಸ್ತಮಾ ಕಾಯಿಲೆಯೂ ದೂರವಾಗುತ್ತದೆ.

* ಶುಂಠಿ, ಹುರುಳಿ, ನೆಲಗುಳ್ಳ, ಆಡುಸೋಗೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಪುಡಿ ಮಾಡಿ ಕಷಾಯ ಮಾಡಿಕೊಂಡು ಕುಡಿಯುತ್ತಿದ್ದರೆ ಅಸ್ತಮಾ ಕಾಯಿಲೆಗೆ ರಾಮಬಾಣ.

* ಶುಂಠಿ, ಬೆಳ್ಳುಳ್ಳಿ, ಲಕ್ಕಿಸೊಪ್ಪನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಪುಡಿ ಮಾಡಿ ಒಂದು ಲೀಟರ್ ನೀರಿನಲ್ಲಿ ಹಾಕಿ ಸಣ್ಣಗಿನ ಉರಿಯಲ್ಲಿ ಕುದಿಸಬೇಕು. ಈ ಕುದಿಸಿದ ನೀರನ್ನು ಬೆಳಗ್ಗೆ ರಾತ್ರಿ ಎರಡು ವಾರಗಳ ಕಾಲ ಕುಡಿದರೆ ಕೀಲುನೋವು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಕೂದಲು ದಟ್ಟವಾಗಿ ಬೆಳೆಯಬೇಕಾ?; ಶುಂಠಿ ರಸವನ್ನು ಈ ರೀತಿ ಬಳಸಿ

* ಶುಂಠಿ, ಹಿಪ್ಪಲಿ, ಕಾಳು ಮೆಣಸುಗಳನ್ನು ಪುಡಿ ಮಾಡಿಕೊಂಡು, ಜೇನುತುಪ್ಪ ಸೇರಿಸಿ ಸೇವಿಸುತ್ತಿದ್ದರೆ ಅಸ್ತಮಾ ರೋಗ ಕಡಿಮೆಯಾಗುತ್ತದೆ.

* ಶುಂಠಿಯನ್ನು ಹಾಲಿನಲ್ಲಿ ತೇಯ್ದು ಹಣೆಯ ಮೇಲೆ ಹಾಕಿದರೆ ತಲೆನೋವು ನಿವಾರಣೆಯಾಗುತ್ತದೆ.

* ಶುಂಠಿಯ ಕಷಾಯ ತಯಾರಿಸಿ ಅದಕ್ಕೆ ಹಾಲು, ಬೆಲ್ಲ ಸೇರಿಸಿ ಕುಡಿದರೆ ತಲೆನೋವು ಗುಣಮುಖವಾಗುತ್ತದೆ.

* ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವವರು ಶುಂಠಿ, ಮೆಣಸು, ಹಿಪ್ಪಲಿ, ಬೆಲ್ಲ, ನೆಗ್ಗಿಲು ಮುಳ್ಳು, ಕೊಬ್ಬರಿಯನ್ನು ಪುಡಿ ಮಾಡಿಕೊಂಡು ದಿನಕ್ಕೆರಡು ಬಾರಿ ಒಂದು ಚಮಚದಷ್ಟು ಪುಡಿಯನ್ನು ಮೂರು ವಾರಗಳ ಕಾಲ ಸೇವಿಸಿದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

* ಶುಂಠಿ ಮತ್ತು ಅಡಿಕೆಯನ್ನು ಪುಡಿ ಮಾಡಿ, ಅದನ್ನು ತೆಂಗಿನ ಕಾಯಿಯ ಹಾಲಿನಲ್ಲಿ ಬೆರೆಸಿ ನಾಲಿಗೆಗೆ ಲೇಪಿಸಿದರೆ ಬಾಯಿಹುಣ್ಣು ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Mon, 29 January 24

ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​