AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ತಿನ್ನುವುದನ್ನು ಸಂಪೂರ್ಣವಾಗಿ ಬಿಟ್ಟುಬಿಡಬೇಡಿ, ಅದರಿಂದಲೂ ಅನಾರೋಗ್ಯ ಕಾಡಬಹುದು

ತುಂಬಾ ಸಿಹಿ ತಿನ್ನುವುದು ಆರೋಗ್ಯಕ್ಕೆ ಅಪಾಯಕಾರಿ, ತೂಕ ಹೆಚ್ಚಳದ ಜತೆಗೆ ಅನೇಕ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಆದರೆ ಸಿಹಿಯನ್ನು ಸಂಪೂರ್ಣವಾಗಿ ಬಿಟ್ಟುಬಿಡುವುದು ಕೂಡ ನಿಮ್ಮ ಆರೋಗ್ಯಕ್ಕೆ ಹಾನಿ ಮಾಡಬಹುದು. ಸಕ್ಕರೆ ಅಥವಾ ಸಿಹಿ ಅಂಶವು ದೇಹಕ್ಕೆ ಹೋಗದೆ ಇದ್ದರೆ ಕೆಲವರ ಮನಸ್ಥಿತಿ ಪದೇ ಪದೇ ಬದಲಾಗುತ್ತಿರುತ್ತದೆ. ಮನಸ್ಸನ್ನು ಕ್ರಿಯಾಶೀಲವಾಗಿರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸಿಹಿಯನ್ನು ಸಂಪೂರ್ಣವಾಗಿ ಬಿಟ್ಟುಬಿಡಬೇಡಿ.

ಸಿಹಿ ತಿನ್ನುವುದನ್ನು ಸಂಪೂರ್ಣವಾಗಿ ಬಿಟ್ಟುಬಿಡಬೇಡಿ, ಅದರಿಂದಲೂ ಅನಾರೋಗ್ಯ ಕಾಡಬಹುದು
ಸಿಹಿ
ನಯನಾ ರಾಜೀವ್
|

Updated on: Sep 04, 2023 | 3:00 PM

Share

ತುಂಬಾ ಸಿಹಿ ತಿನ್ನುವುದು ಆರೋಗ್ಯಕ್ಕೆ ಅಪಾಯಕಾರಿ, ತೂಕ ಹೆಚ್ಚಳದ ಜತೆಗೆ ಅನೇಕ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಆದರೆ ಸಿಹಿಯನ್ನು ಸಂಪೂರ್ಣವಾಗಿ ಬಿಟ್ಟುಬಿಡುವುದು ಕೂಡ ನಿಮ್ಮ ಆರೋಗ್ಯಕ್ಕೆ ಹಾನಿ ಮಾಡಬಹುದು. ಸಕ್ಕರೆ ಅಥವಾ ಸಿಹಿ ಅಂಶವು ದೇಹಕ್ಕೆ ಹೋಗದೆ ಇದ್ದರೆ ಕೆಲವರ ಮನಸ್ಥಿತಿ ಪದೇ ಪದೇ ಬದಲಾಗುತ್ತಿರುತ್ತದೆ. ಮನಸ್ಸನ್ನು ಕ್ರಿಯಾಶೀಲವಾಗಿರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸಿಹಿಯನ್ನು ಸಂಪೂರ್ಣವಾಗಿ ಬಿಟ್ಟುಬಿಡಬೇಡಿ.

ತಲೆನೋವು ನೀವು ಸಕ್ಕರೆಯನ್ನು ಸಂಪೂರ್ಣವಾಗಿ ಸೇವಿಸುವುದನ್ನು ನಿಲ್ಲಿಸಿದರೆ, ಅದು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ . ಇದರಿಂದ ದೇಹದಲ್ಲಿ ಆಯಾಸದ ಅನುಭವವಾಗುವುದು, ಜತೆಗೆ ತಲೆನೋವು ಬರುವ ಸಾಧ್ಯತೆ ಇರುತ್ತದೆ. ಸಕ್ಕರೆಯನ್ನು ಸೇವಿಸದ ಕಾರಣ, ಸಕ್ಕರೆಯ ಮಟ್ಟವು ಏರಿಳಿತಗೊಳ್ಳಲು ಪ್ರಾರಂಭಿಸುತ್ತದೆ. ಈ ಕಾರಣದಿಂದಾಗಿ, ಹಾರ್ಮೋನುಗಳ ಅಸಮತೋಲನವು ಹೆಚ್ಚಾಗುತ್ತದೆ. ಇದು ಹೈಪೊಗ್ಲಿಸಿಮಿಯಾಕ್ಕೆ ಕಾರಣವಾಗುತ್ತದೆ, ಅಂದರೆ ಕಡಿಮೆ ರಕ್ತದ ಗ್ಲೂಕೋಸ್.

ಏನೇನೋ ತಿನ್ನುತ್ತೀರಿ ಸಿಹಿ ತಿನ್ನದೇ ಇರುವಾಗ ಕಂಡಿದ್ದೆಲ್ಲವನ್ನೂ ತಿನ್ನಬೇಕೆಂಬ ಬಯಕೆ ಶುರುವಾಗುತ್ತದೆ, ಜಂಕ್​ಫುಡ್​ ತಿನ್ನಲು ಶುರು ಮಾಡುತ್ತೀರಿ. ಇದರಿಂದ ಒತ್ತಡದ ಹಾರ್ಮೋನ್​ಗಳು ನಿಮ್ಮೊಳಗೆ ಹೆಚ್ಚಾಗಲು ಪ್ರಾರಂಭವಾಗುತ್ತದೆ.

ಮಲಗುವ ಮಾದರಿಯಲ್ಲಿ ಬದಲಾವಣೆ ಸಕ್ಕರೆ ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ನಿಮ್ಮ ನಿದ್ರೆಯ ಮೇಲೂ ಪರಿಣಾಮ ಬೀರುತ್ತದೆ. ಸಮಯಕ್ಕೆ ಸರಿಯಾಗಿ ನೀವು ಮಲಗಲು ಸಾಧ್ಯವಾಗುವುದಿಲ್ಲ. ಆಳವಾದ ನಿದ್ರೆಯು ಕೂಡ ಬರುವುದಿಲ್ಲ.

ಶಕ್ತಿಯ ಕೊರತೆ ಸಕ್ಕರೆಯಿಂದ ದೇಹವು ತ್ವರಿತ ಶಕ್ತಿಯನ್ನು ಪಡೆಯುತ್ತದೆ. ನೀವು ಅದನ್ನು ಸೇವಿಸುವುದನ್ನು ನಿಲ್ಲಿಸಿದರೆ, ದೇಹವು ಸಾರ್ವಕಾಲಿಕ ದೌರ್ಬಲ್ಯವನ್ನು ಅನುಭವಿಸಲು ಪ್ರಾರಂಭಿಸುತ್ತದೆ. ಇದರಿಂದ ನಿಮ್ಮಲ್ಲಿ ಏಕಾಗ್ರತೆಯ ಕೊರತೆಯೂ ಉಂಟಾಗುತ್ತದೆ. ಸಕ್ಕರೆಯ ಸಹಾಯದಿಂದ ನಮ್ಮ ಸ್ನಾಯುಗಳು ಶಕ್ತಿಯನ್ನು ಪಡೆಯುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಮಿತವಾದ ರೀತಿಯಲ್ಲಿ ಸಿಹಿ ಪದಾರ್ಥಗಳನ್ನು ಸೇವಿಸಬಹುದು.

ಸಹಿಯನ್ನು ತಿನ್ನದೇ ಇದ್ದರೆ ಏನೇನು ಪ್ರಯೋಜನಗಳಾಗಲಿವೆ ಸಿಹಿ ಪದಾರ್ಥಗಳನ್ನು ಸೇವಿಸಿದೇ ಇರುವುದರಿಂದ ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು ಈ ಕಾರಣದಿಂದಾಗಿ, ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲಾಗುತ್ತದೆ, ಇದರಿಂದಾಗಿ ಟೈಪ್ 2 ಮಧುಮೇಹದ ಅಪಾಯವು ಕಡಿಮೆಯಾಗುತ್ತದೆ ಸಕ್ಕರೆ ಮತ್ತು ಸಿಹಿಕಾರಕಗಳನ್ನು ನಿಷೇಧಿಸುವುದು ಹಲ್ಲಿನ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಕುಹರದ ಸಮಸ್ಯೆಯನ್ನು ಸಹ ತಪ್ಪಿಸುತ್ತದೆ. ಸಿಹಿ ತಿನ್ನುವುದರಿಂದ ಮುಖದ ಮೇಲಿನ ಮೊಡವೆಗಳಿಗೂ ಪರಿಹಾರ ಸಿಗುತ್ತದೆ. ಸಿಹಿತಿಂಡಿಗಳನ್ನು ಸೇವಿಸದಿರುವುದರಿಂದ, ನಿಮ್ಮ ಚರ್ಮವು ಕೋಮಲವಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?