AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಬೇಗ ನಿದ್ರೆ ಬಂದು, ಬೆಳಿಗ್ಗೆ ಬೇಗ ಎಚ್ಚರವಾಗಬೇಕು, ಈ 10-3-2-1 ಸೂತ್ರ ಪಾಲಿಸಿ

ನಿದ್ದೆ ಪ್ರತಿಯೊಬ್ಬ ಮನುಷ್ಯನಿಗೆ ಅಗತ್ಯ, ಅದು ಆರೋಗ್ಯದ ಕಾರಣದಿಂದ ಹೆಚ್ಚು ಪ್ರಮುಖ್ಯತೆಯನ್ನು ವಹಿಸಿದೆ. ನಿದ್ರೆ ಆತನ ಆರೋಗ್ಯದ ಮೇಲೆ ಹೆಚ್ಚು ಪರಿಣಾಮವನ್ನು ಉಂಟು ಮಾಡುತ್ತದೆ. ಸರಿಯಾಗಿ ನಿದ್ದೆ ಮಾಡಿದ್ರೆ ಮಾತ್ರ ಆರೋಗ್ಯ ಸಮತೋಲನೆ ಇರುತ್ತದೆ. ಆದರೆ ಕೆಲವರಿಗೆ ನಿದ್ದೆಯೇ ಬರುವುದಿಲ್ಲ. ಇನ್ನು ಕೆಲವರಿಗೆ ನಿದ್ದೆ ಬಂದರು ಬೆಳಿಗ್ಗೆ ಬೇಗ ಎಚ್ಚರ ಆಗುವುದಿಲ್ಲ. ಈ ಸಮಸ್ಯೆಗೆ ವೈದ್ಯರು ಕೆಲವೊಂದು ಸೂತ್ರಗಳನ್ನು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ನೋಡಿ.

ರಾತ್ರಿ ಬೇಗ ನಿದ್ರೆ ಬಂದು, ಬೆಳಿಗ್ಗೆ ಬೇಗ ಎಚ್ಚರವಾಗಬೇಕು, ಈ 10-3-2-1 ಸೂತ್ರ ಪಾಲಿಸಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
| Edited By: |

Updated on:Apr 29, 2025 | 5:28 PM

Share

ನಿದ್ರೆ ಎಂಬುದು (sleep deprivation,) ಒಬ್ಬ ಮನುಷ್ಯನಿಗೆ ಬಹಳ ಮುಖ್ಯ, ಯಾವ ಪ್ರಮಾಣದಲ್ಲಿ ನಿದ್ದೆ ಮಾಡಬೇಕು ಎನ್ನುವುದು ಕೂಡ ಮುಖ್ಯವಾಗಿರುತ್ತದೆ. ರಾತ್ರಿ ಹಾಗೂ ಹಗಲು ಯಾವ ಸಮಯದಲ್ಲಿ ಹೆಚ್ಚು ನಿದ್ದೆ ಮಾಡಬೇಕು ಎಂಬ ಬಗ್ಗೆಯೂ ಗಮನ ಇರಬೇಕು. ಅದಕ್ಕಾಗಿ ಕೆಲವೊಂದು ಸೂತ್ರಗಳನ್ನು ಅಳವಡಿಸಿಕೊಳ್ಳುವುದು ಅತೀಮುಖ್ಯವಾಗಿದೆ. ನಿದ್ರೆಗೂ ಸೂತ್ರ ಇದ್ದೀಯಾ ಎಂಬ ಪ್ರಶ್ನೆಗಳು ಇರಬಹುದು. ಹೌದು ಇದೆ, ಈ ಸೂತ್ರವನ್ನು ಪಾಲಿಸಿದ್ರೆ ರಾತ್ರಿ ಬೇಗ ಮಲಗುವಂತೆ ಹಾಗೂ ಬೆಳಿಗ್ಗೆ ಆನಂದಾಯವಾಗಿ ಎಚ್ಚರಗೊಳ್ಳಬಹುದು. ಇದು ನಿದ್ರೆಯ ನೈರ್ಮಲ್ಯ ತಂತ್ರವಾಗಿದೆ. ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆಯ ಸ್ಪಾರ್ಷ್ ಆಸ್ಪತ್ರೆಯ ಸಲಹೆಗಾರ ನರವಿಜ್ಞಾನಿ ಡಾ. ನಿಖಿಲ್ ಬಿ ( Dr. Nikhil B) ಈ ಬಗ್ಗೆ ವಿವರಿಸಿದ್ದಾರೆ. ಮಲಗುವ 10 ಗಂಟೆಗಳ ಮೊದಲು ಕೆಫೀನ್ (ಕಾಫಿ, ಟೀ) ಕುಡಿಯಬೇಡಿ. ಊಟ, ಏನಾದರೂ ತಿನ್ನುವುದಿದ್ದರೆ ಮಲಗುವ 3 ಗಂಟೆಗಳ ಮೊದಲು ಮುಗಿಸಿಕೊಳ್ಳಬೇಕು ಎಂದು ಡಾ. ನಿಖಿಲ್ ಬಿ ಹೇಳುತ್ತಾರೆ. ಈ ಬಗ್ಗೆ indianexpress ವರದಿ ಮಾಡಿದೆ.

ಇನ್ನು ಒತ್ತಡವನ್ನು ಕಡಿಮೆ ಮಾಡಲು ಮಲಗುವ 2 ಗಂಟೆಗಳ ಮೊದಲು ಯಾವುದೇ ಕೆಲಸಗಳನ್ನು ಮಾಡಬಾರದು, ಅಂದತೆ ಆಫೀಸ್​​ ಕೆಲಸ ಅಥವಾ ಮನೆಯ ಕೆಲಸಗಳನ್ನ. ಕಣ್ಣುಗಳ ಊರಿ ಅಥವಾ ಕಣ್ಣಿನ ಆರೋಗ್ಯವಾಗಿರಬೇಕಾದರೆ ಮಲಗುವ 1 ಗಂಟೆ ಮೊದಲು ಮೊಬೈಲ್​​​​ ನೋಡುವುದನ್ನು ಬಿಡಿ. ಈ ವಿಧಾನವು ಮನಸ್ಸು ಮತ್ತು ದೇಹಕ್ಕೆ ವಿಶ್ರಾಂತಿ ಪಡೆಯಲು ಸಮಯವನ್ನು ನೀಡುತ್ತದೆ. ಹಾಗೂ ಇದು ಸುಲಭವಾಗಿ ನಿದ್ರೆ ಆರಂಭವಾಗಲು ಹಾಗೂ ಬೆಳಿಗ್ಗೆ ಸಂತೃಪ್ತಿ ಮನಸ್ಸಿನಿಂದ ಹೇಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮೇಕೆ ಮಾಂಸಕ್ಕಿಂತ ರಕ್ತ ತಿನ್ನುವುದು ಉತ್ತಮ, ಯಾಕೆ? ಅತಿಯಾದರೆ ಸಮಸ್ಯೆ ಖಂಡಿತ

ನಿದ್ರೆಯ ಬಗ್ಗೆ ಹಾಗೂ ಎಷ್ಟು ಹೊತ್ತು ನಿದ್ದೆ ಮಾಡಬೇಕು ಎನ್ನುವ ಬಗ್ಗೆ ಡಾ. ಮಂಜುಷಾ ಅಗರ್ವಾಲ್ ಹೀಗೆ ಹೇಳುತ್ತಾರೆ. 7-9 ಗಂಟೆಗಳ ನಿದ್ರೆಗೆ ಆದ್ಯತೆ ನೀಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಯೋಗಕ್ಷೇಮಕ್ಕೆ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ನಿದ್ರೆ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಚಿಕಿತ್ಸೆಗಾಗಿ ತಜ್ಞರನ್ನು ಸಂಪರ್ಕಿಸುವುದು ಒಳ್ಳೆಯದು. ಆದರೆ ನಿದ್ರೆಯ ಸಮಸ್ಯೆ ನಿವಾರಣೆ ಮಾಡಲು ಈ 10-3-2-1 ವಿಧಾನವನ್ನು ಪ್ರಯತ್ನಿಸಿ. ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಲು ಸೂಕ್ತವಾದ ನಿದ್ರೆಯ ಅವಧಿ ರಾತ್ರಿ 7-9 ಗಂಟೆಗಳು ಎಂದು ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆಯ ಸ್ಪಾರ್ಷ್ ಆಸ್ಪತ್ರೆಯ ಸಲಹೆಗಾರ ನರವಿಜ್ಞಾನಿ ಡಾ. ನಿಖಿಲ್ ಬಿ ಹೇಳುತ್ತಾರೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Tue, 29 April 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ