AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Shopping: ವಾರದ ಯಾವ ದಿನ ಚಿನ್ನ ಖರೀದಿಸಿದರೆ ಒಳ್ಳೆಯದು ಗೊತ್ತಾ?

ಚಿನ್ನವನ್ನು ಶುಭದ ಸಂಕೇತವೆಂದು ಪರಿಗಣಿಸಲಾಗಿದೆ. ಇದಕ್ಕಾಗಿಯೇ ಅಕ್ಷಯ ತೃತೀಯ, ದೀಪಾವಳಿ ಸೇರಿದಂತೆ ಹಬ್ಬಗಳ ಸಮಯದಲ್ಲಿ ಜನ ಚಿನ್ನವನ್ನು ಖರೀದಿ ಮಾಡುತ್ತಾರೆ. ಅಕ್ಷಯ ತೃತೀಯ ಹಬ್ಬದ ದಿನ ಚಿನ್ನ ಖರೀದಿಸಿದರೆ ಮನೆಯಲ್ಲಿ ಸಂಪತ್ತು, ಸಮೃದ್ಧಿ ನೆಲೆಸುತ್ತದೆ ಅನ್ನೋದು ಹೆಚ್ಚಿನವರಿಗೆ ತಿಳಿದೇ ಇದೆ. ಆದರೆ ಇದನ್ನು ಬಿಟ್ಟು ವಾರದ ಯಾವ ದಿನ ಬಂಗಾರ ಕೊಳ್ಳುವುದು ಶ್ರೇಷ್ಠ ಎಂಬ ವಿಚಾರ ಹಲವರಿಗೆ ತಿಳಿದಿಲ್ಲ. ಹಾಗಿದ್ರೆ ವಾರದ ಯಾವ ದಿನ ಗೋಲ್ಡ್‌ ಖರೀದಿಸುವುದು ಬೆಸ್ಟ್‌ ಅನ್ನೋದನ್ನು ನೋಡೋಣ ಬನ್ನಿ.

Gold Shopping: ವಾರದ ಯಾವ ದಿನ ಚಿನ್ನ ಖರೀದಿಸಿದರೆ ಒಳ್ಳೆಯದು ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 22, 2025 | 5:32 PM

Share

ಶುಭದ ಸಂಕೇತವಾಗಿರುವ ಚಿನ್ನ (Gold) ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯ ನಾರಿಮಣಿಯರಿಗಂತೂ ಚಿನ್ನ ಎಂದ್ರೆ ಪಂಚಪ್ರಾಣ. ಹೀಗೆ ಮಹಿಳೆಯರು ಹಣವನ್ನು ಕೂಡಿಟ್ಟು ಚಿನ್ನವನ್ನು ಖರೀದಿ ಮಾಡುತ್ತಾರೆ. ವಿಶೇಷವಾಗಿ ಅಕ್ಷಯ ತೃತೀಯ ದೀಪಾವಳಿ ಹಬ್ಬದಂದು ಚಿನ್ನ ಖರೀದಿಸಿದರೆ ತುಂಬಾನೇ ಶ್ರೇಷ್ಠ ಅನ್ನೋ ಕಾರಣಕ್ಕೆ ಹಲವರು ಈ ಶುಭ ಸಂದರ್ಭಗಳಲ್ಲಿಯೇ ಹೆಚ್ಚಾಗಿ ಚಿನ್ನಾಭರಣ ಕೊಳ್ಳುತ್ತಾರೆ. ಯಾವ ಹಬ್ಬದ ದಿನ ಬಂಗಾರ ಕೊಳ್ಳುವುದು ಶುಭವೆಂದು ಹೆಚ್ಚಿನವರಿಗೆ ಗೊತ್ತಿದೆ, ಆದ್ರೆ ವಾರದ ಯಾವ ದಿನ (best day to buy gold) ಚಿನ್ನ ಖರೀದಿ ಮಾಡಿದ್ರೆ ಒಳ್ಳೆಯದು ಎಂದು ಹಲವರಿಗೆ ಗೊತ್ತಿಲ್ಲ. ಹಾಗಿದ್ರೆ ವಾರದ ಯಾವ ದಿನ ಬಂಗಾರವನ್ನು ಖರೀದಿಸಿ, ಮನೆಗೆ ತಂದ್ರೆ ಅದೃಷ್ಟ ಎಂಬ ಮಾಹಿತಿಯನ್ನು ತಿಳಿಯಿರಿ.

ಚಿನ್ನವನ್ನು ವಾರದ ಯಾವ ದಿನ ಖರೀದಿಸಿದರೆ ಒಳ್ಳೆಯದು:

ಮದುವೆ, ಗೃಹ ಪ್ರವೇಶ ಇತ್ಯಾದಿ ಶುಭ ಸಮಾರಂಭಗಳಿಗೆ ಸರಿಯಾದ ಸಮಯ, ಘಳಿಗೆಯನ್ನು ಆಯ್ಕೆ ಮಾಡುವಂತೆ, ಶುಭದ ಸಂಕೇತವಾಗಿರುವ ಚಿನ್ನವನ್ನು ಕೂಡ ಸರಿಯಾದ ಸಮಯದಲ್ಲಿ ಖರೀದಿಸುವುದು ಬಹಳ ಮುಖ್ಯ. ಇದಕ್ಕಾಗಿಯೇ ಜನ ದೀಪಾವಳಿ, ಅಕ್ಷಯ ತೃತೀಯ ಹೀಗೆ ಹಬ್ಬದ ಸಂದರ್ಭದಲ್ಲಿ ಬಂಗಾರ ಖರೀದಿ ಮಾಡುತ್ತಾರೆ. ಇದರ ಹೊರತಾಗಿ ವಾರದ ಯಾವ ದಿನ ಚಿನ್ನ ಖರೀದಿಸಿದರೆ ಒಳ್ಳೆಯದು ಗೊತ್ತಾ?

ಶಾಸ್ತ್ರಗಳಲ್ಲಿ ಗುರುವಾರ ಮತ್ತು ಭಾನುವಾರ ಚಿನ್ನ ಖರೀದಿಸುವುದು ಶುಭವೆಂದು ಪರಿಗಣಿಸಲಾಗಿದೆ. ಚಿನ್ನವು ಸೂರ್ಯ ಮತ್ತು ಗುರು ಗ್ರಹಕ್ಕೆ ಸಂಬಂಧಿಸಿರುವುದರಿಂದ ಈ ದಿನಗಳಲ್ಲಿ ಖರೀದಿಸಿದ ಚಿನ್ನವು ನಿಮ್ಮ ಜಾತಕದಲ್ಲಿ ಗುರು ಮತ್ತು ಸೂರ್ಯನ ಸ್ಥಾನವನ್ನು ಬಲಪಡಿಸುತ್ತದೆ ಎಂದು ನಂಬಲಾಗಿದೆ. ಇದಲ್ಲದೆ ಪುಷ್ಯ ನಕ್ಷತ್ರ ಯಾವ ದಿನ ಬರುತ್ತದೆಯೋ ಆ ದಿನ ಚಿನ್ನ ಖರೀದಿಸಿದರೂ ಒಳ್ಳೆಯದು ಎಂದು ಹೇಳಲಾಗುತ್ತದೆ. ಈ ನಕ್ಷತ್ರದಲ್ಲಿ ಬಂಗಾರ ಖರೀದಿಸಿದರೆ ಲಕ್ಷ್ಮೀ ದೇವಿಯ ಆಶೀರ್ವಾದ ಲಭಿಸುತ್ತದೆ,  ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ.

ಇದನ್ನೂ ಓದಿ
Image
ಹಣ, ಯಶಸ್ಸು ಮತ್ತು ಸಂತೋಷಕ್ಕಾಗಿ ಪ್ರತಿ ರಾತ್ರಿ ಮಲಗುವಾಗ ಹೀಗೆ ಮಾಡಿ
Image
ಬೆಕ್ಕು ಆದಾಗೇ ನಿಮ್ಮ ಮನೆಗೆ ಬಂದ್ರೆ ಏನರ್ಥ, ಅದೃಷ್ಟ ಕೈ ಹಿಡಿಯುತ್ತಾ?
Image
Vastu Tips: ನಿಮ್ಮ ಪರ್ಸನಲ್ಲಿಯೂ ಈ ರೀತಿ ನೋಟಿದ್ದರೆ ಕಷ್ಟ ತಪ್ಪಿದ್ದಲ್ಲ
Image
ಪರ್ಸ್‌ನಲ್ಲಿ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?

ಇದನ್ನೂ ಓದಿ: ಗಂಡಸರೇ… ಪರ್ಸ್‌ನಲ್ಲಿ ನಿಮ್‌ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?

ಯಾವ ದಿನ ಚಿನ್ನ ಖರೀದಿಸಬಾರದು?

ಶನಿವಾರ ಚಿನ್ನ ಖರೀದಿಸುವುದು ಅಶುಭದ ಸಂಕೇತವಾಗಿದೆ. ಚಿನ್ನ ಸೂರ್ಯನ ಸಂಕೇತವಾಗಿದ್ದು, ಶನಿ ಮತ್ತು ಸೂರ್ಯ ದ್ವೇಷ ಭಾವನೆಯನ್ನು ಹೊಂದಿದ್ದಾರೆ. ಆದ್ದರಿಂದ ಶನಿ ದೇವರಿಗೆ ಸಮರ್ಪಿತವಾದ ಶನಿವಾರದಂದು ಚಿನ್ನ ಖರೀದಿ ಮಾಡಬಾರದು ಎಂದು ಹೇಳಲಾಗುತ್ತದೆ.  ಶನಿವಾರ ಚಿನ್ನ ಖರೀದಿಸುವುದರಿಂದ ಅದು ನಿಮ್ಮ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ, ಮನೆಯನ್ನು ಬಡತನ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಶನಿವಾರ ಬಂಗಾರ ಕೊಳ್ಳಬೇಡಿ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ