AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goli idli Recipe : ಇದು ಗೋಲಿ ಇಡ್ಲಿ, ಇಲ್ಲಿದೆ ರೆಸಿಪಿ

ರಾತ್ರಿಯಾಗುತ್ತಿದ್ದಂತೆ ನಾಳೆ ಬೆಳಗ್ಗೆ ತಿಂಡಿಗೆ ಏನು ಮಾಡ್ಲಿ ಎನ್ನುವುದು ಎಲ್ಲಾ ಗೃಹಿಣಿಯರ ಪ್ರಶ್ನೆಯಾಗಿರುತ್ತದೆ. ದಿನನಿತ್ಯ ಅದೇ ದೋಸೆ, ಇಡ್ಲಿ, ಚಿತ್ರಾನ್ನ, ಉಪ್ಪಿಟ್ಟು ತಿಂದು ಬೋರ್ ಆಗಿರುತ್ತದೆ. ಹೀಗಾದಾಗ ಮನೆಯಲ್ಲಿರುವ ಈ ಕೆಲವು ಸಾಮಗ್ರಿಗಳನ್ನು ಬಳಸಿಕೊಂಡು ರುಚಿಕರವಾದ ಗೋಲಿ ಇಡ್ಲಿಯನ್ನು ಟ್ರೈ ಮಾಡಬಹುದು. ಹಾಗಾದ್ರೆ ಈ ಸಿಂಪಲ್ ಗೋಲಿ ಇಡ್ಲಿ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Goli idli Recipe : ಇದು ಗೋಲಿ ಇಡ್ಲಿ, ಇಲ್ಲಿದೆ ರೆಸಿಪಿ
ಗೋಲಿ ಇಡ್ಲಿ
ಸಾಯಿನಂದಾ
| Edited By: |

Updated on: Sep 09, 2024 | 4:45 PM

Share

ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ರವೆ ಇಡ್ಲಿ, ಗೋಧಿ ಹಿಟ್ಟಿನ ಇಡ್ಲಿ, ಮಲ್ಲಿಗೆ ಇಡ್ಲಿ, ಅವಲಕ್ಕಿ ಹಾಕಿ ಹೀಗೆ ವಿವಿಧ ರೀತಿಯ ಇಡ್ಲಿ ರೆಸಿಪಿಯನ್ನು ಸವಿದ್ದಿರಬಹುದು. ಅದಲ್ಲದೇ ಈಗಂತೂ ಇಡ್ಲಿಯಲ್ಲಿ ನಾನಾ ರೀತಿಯ ವೆರೈಂಟಿಗಳು ಬಂದಿದ್ದು, ಅದರಲ್ಲಿ ಒಂದು ಈ ಗೋಲಿ ಇಡ್ಲಿ. ನೋಡುವುದಕ್ಕೆ ರಸಗುಲ್ಲಾದಂತಿದ್ದು, ಮೃದುವಾಗಿರುವ ಈ ತಿನಿಸು ಮಸಾಲೆಯ ಸುವಾಸನೆಯಿಂದಾಗಿ ಒಮ್ಮೆ ತಿಂದರೆ ಮತ್ತೆ ತಿನ್ನಬೇಕೇನಿಸುತ್ತದೆ. ಮಾಡುವುದಕ್ಕೂ ಸ್ವಲ್ಪ ಸಮಯ ತೆಗೆದುಕೊಳ್ಳುವ ಈ ತಿಂಡಿಯನ್ನು ಎಲ್ಲರೂ ಇಷ್ಟ ಪಟ್ಟೆ ಇದನ್ನು ಸವಿಯುತ್ತಾರೆ.

ಗೋಲಿ ಇಡ್ಲಿ ಮಾಡಲು ಬೇಕಾಗುವ ಸಾಮಗ್ರಿಗಳು:

* ಅಕ್ಕಿ ಹಿಟ್ಟು

* ಶುಂಠಿ

* ಕರಿಬೇವು

* ಎಣ್ಣೆ

* ಇಂಗು

* ಉದ್ದಿನ ಬೇಳೆ

* ಕಡಲೆ ಬೇಳೆ

* ಹಸಿ ಮೆಣಸು

* ತುಪ್ಪ

ಇದನ್ನೂ ಓದಿ: ಕೇರಳದ ಸ್ಪೆಷಲ್ ಹಬ್ಬದೂಟ ‘ಓಣಂ ಸದ್ಯ’, ಬೆಂಗಳೂರಿನ ಈ ತಾಣಗಳಲ್ಲಿ ಸಿಗುತ್ತೆ ವಿಶಿಷ್ಟ ಭೋಜನ

ಗೋಲಿ ಇಡ್ಲಿ ಮಾಡುವ ವಿಧಾನ:

* ಸ್ಟವ್ ಮೇಲೆ ಒಂದು ಪಾತ್ರೆಯನ್ನಿಟ್ಟು ಅರ್ಧ ಗ್ಲಾಸ್ ನೀರು ಹಾಕಿ, ಆ ನೀರಿಗೆ ಉಪ್ಪು ತುಪ್ಪ ಹಾಕಿ ಚೆನ್ನಾಗಿ ಕುದಿಯಲು ಬಿಡಿ.

* ಬಳಿಕ ಅದಕ್ಕೆ ಒಂದೂವರೆ ಬಟ್ಟಲು ಅಕ್ಕಿ ಹಿಟ್ಟು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ ಈ ಹಿಟ್ಟು ಹುಡಿ ಹುಡಿಯಾಗುವವರೆಗೂ ಬೇಯಿಸಿಕೊಳ್ಳಿ.

* ಸ್ವಲ್ಪ ಸಮಯ ತಣ್ಣಗಾಗಲು ಬಿಟ್ಟು ನಂತರ ಮೃದುವಾದ ಹಿಟ್ಟನ್ನು ಮಾಡಿಕೊಳ್ಳಿ. ಈ ಹಿಟ್ಟಿನಿಂದ ಸಣ್ಣ ಉಂಡೆಗಳನ್ನು ಮಾಡಿ ಹಬೆಯಲ್ಲಿ ಬೇಯಿಸಿಕೊಳ್ಳಿ.

* ತದನಂತರದಲ್ಲಿ ಸ್ಟವ್ ಮೇಲೆ ಒಂದು ಪಾತ್ರೆಯನ್ನಿಟ್ಟು ಎಣ್ಣೆ ಹಾಕಿ ಕಾಯುತ್ತಿದ್ದಂತೆ ಸಾಸಿವೆ, ಬೇಳೆ, ಉದ್ದಿನ ಬೇಳೆ, ಇಂಗು, ಕರಿಬೇವು ಹಾಕಿ ಫ್ರೈ ಮಾಡಿಕೊಳ್ಳಿ.

* ಆ ಬಳಿಕ ಇದಕ್ಕೆ ಹಸಿ ಮೆಣಸು, ಶುಂಠಿ ಹಾಕಿ ಚೆನ್ನಾಗಿ ಹುರಿದುಕೊಳ್ಳಿ. ಈಗಾಗಲೇ ಬೇಯಿಸಿಕೊಂಡ ಇಡ್ಲಿಯನ್ನು ಹಾಕಿ ಕೈಯಾಡಿಸಿದರೆ ರುಚಿಕರವಾದ ಗೋಲಿ ಇಡ್ಲಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ