AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goli idli Recipe : ಇದು ಗೋಲಿ ಇಡ್ಲಿ, ಇಲ್ಲಿದೆ ರೆಸಿಪಿ

ರಾತ್ರಿಯಾಗುತ್ತಿದ್ದಂತೆ ನಾಳೆ ಬೆಳಗ್ಗೆ ತಿಂಡಿಗೆ ಏನು ಮಾಡ್ಲಿ ಎನ್ನುವುದು ಎಲ್ಲಾ ಗೃಹಿಣಿಯರ ಪ್ರಶ್ನೆಯಾಗಿರುತ್ತದೆ. ದಿನನಿತ್ಯ ಅದೇ ದೋಸೆ, ಇಡ್ಲಿ, ಚಿತ್ರಾನ್ನ, ಉಪ್ಪಿಟ್ಟು ತಿಂದು ಬೋರ್ ಆಗಿರುತ್ತದೆ. ಹೀಗಾದಾಗ ಮನೆಯಲ್ಲಿರುವ ಈ ಕೆಲವು ಸಾಮಗ್ರಿಗಳನ್ನು ಬಳಸಿಕೊಂಡು ರುಚಿಕರವಾದ ಗೋಲಿ ಇಡ್ಲಿಯನ್ನು ಟ್ರೈ ಮಾಡಬಹುದು. ಹಾಗಾದ್ರೆ ಈ ಸಿಂಪಲ್ ಗೋಲಿ ಇಡ್ಲಿ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Goli idli Recipe : ಇದು ಗೋಲಿ ಇಡ್ಲಿ, ಇಲ್ಲಿದೆ ರೆಸಿಪಿ
ಗೋಲಿ ಇಡ್ಲಿ
ಸಾಯಿನಂದಾ
| Edited By: |

Updated on: Sep 09, 2024 | 4:45 PM

Share

ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ರವೆ ಇಡ್ಲಿ, ಗೋಧಿ ಹಿಟ್ಟಿನ ಇಡ್ಲಿ, ಮಲ್ಲಿಗೆ ಇಡ್ಲಿ, ಅವಲಕ್ಕಿ ಹಾಕಿ ಹೀಗೆ ವಿವಿಧ ರೀತಿಯ ಇಡ್ಲಿ ರೆಸಿಪಿಯನ್ನು ಸವಿದ್ದಿರಬಹುದು. ಅದಲ್ಲದೇ ಈಗಂತೂ ಇಡ್ಲಿಯಲ್ಲಿ ನಾನಾ ರೀತಿಯ ವೆರೈಂಟಿಗಳು ಬಂದಿದ್ದು, ಅದರಲ್ಲಿ ಒಂದು ಈ ಗೋಲಿ ಇಡ್ಲಿ. ನೋಡುವುದಕ್ಕೆ ರಸಗುಲ್ಲಾದಂತಿದ್ದು, ಮೃದುವಾಗಿರುವ ಈ ತಿನಿಸು ಮಸಾಲೆಯ ಸುವಾಸನೆಯಿಂದಾಗಿ ಒಮ್ಮೆ ತಿಂದರೆ ಮತ್ತೆ ತಿನ್ನಬೇಕೇನಿಸುತ್ತದೆ. ಮಾಡುವುದಕ್ಕೂ ಸ್ವಲ್ಪ ಸಮಯ ತೆಗೆದುಕೊಳ್ಳುವ ಈ ತಿಂಡಿಯನ್ನು ಎಲ್ಲರೂ ಇಷ್ಟ ಪಟ್ಟೆ ಇದನ್ನು ಸವಿಯುತ್ತಾರೆ.

ಗೋಲಿ ಇಡ್ಲಿ ಮಾಡಲು ಬೇಕಾಗುವ ಸಾಮಗ್ರಿಗಳು:

* ಅಕ್ಕಿ ಹಿಟ್ಟು

* ಶುಂಠಿ

* ಕರಿಬೇವು

* ಎಣ್ಣೆ

* ಇಂಗು

* ಉದ್ದಿನ ಬೇಳೆ

* ಕಡಲೆ ಬೇಳೆ

* ಹಸಿ ಮೆಣಸು

* ತುಪ್ಪ

ಇದನ್ನೂ ಓದಿ: ಕೇರಳದ ಸ್ಪೆಷಲ್ ಹಬ್ಬದೂಟ ‘ಓಣಂ ಸದ್ಯ’, ಬೆಂಗಳೂರಿನ ಈ ತಾಣಗಳಲ್ಲಿ ಸಿಗುತ್ತೆ ವಿಶಿಷ್ಟ ಭೋಜನ

ಗೋಲಿ ಇಡ್ಲಿ ಮಾಡುವ ವಿಧಾನ:

* ಸ್ಟವ್ ಮೇಲೆ ಒಂದು ಪಾತ್ರೆಯನ್ನಿಟ್ಟು ಅರ್ಧ ಗ್ಲಾಸ್ ನೀರು ಹಾಕಿ, ಆ ನೀರಿಗೆ ಉಪ್ಪು ತುಪ್ಪ ಹಾಕಿ ಚೆನ್ನಾಗಿ ಕುದಿಯಲು ಬಿಡಿ.

* ಬಳಿಕ ಅದಕ್ಕೆ ಒಂದೂವರೆ ಬಟ್ಟಲು ಅಕ್ಕಿ ಹಿಟ್ಟು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ ಈ ಹಿಟ್ಟು ಹುಡಿ ಹುಡಿಯಾಗುವವರೆಗೂ ಬೇಯಿಸಿಕೊಳ್ಳಿ.

* ಸ್ವಲ್ಪ ಸಮಯ ತಣ್ಣಗಾಗಲು ಬಿಟ್ಟು ನಂತರ ಮೃದುವಾದ ಹಿಟ್ಟನ್ನು ಮಾಡಿಕೊಳ್ಳಿ. ಈ ಹಿಟ್ಟಿನಿಂದ ಸಣ್ಣ ಉಂಡೆಗಳನ್ನು ಮಾಡಿ ಹಬೆಯಲ್ಲಿ ಬೇಯಿಸಿಕೊಳ್ಳಿ.

* ತದನಂತರದಲ್ಲಿ ಸ್ಟವ್ ಮೇಲೆ ಒಂದು ಪಾತ್ರೆಯನ್ನಿಟ್ಟು ಎಣ್ಣೆ ಹಾಕಿ ಕಾಯುತ್ತಿದ್ದಂತೆ ಸಾಸಿವೆ, ಬೇಳೆ, ಉದ್ದಿನ ಬೇಳೆ, ಇಂಗು, ಕರಿಬೇವು ಹಾಕಿ ಫ್ರೈ ಮಾಡಿಕೊಳ್ಳಿ.

* ಆ ಬಳಿಕ ಇದಕ್ಕೆ ಹಸಿ ಮೆಣಸು, ಶುಂಠಿ ಹಾಕಿ ಚೆನ್ನಾಗಿ ಹುರಿದುಕೊಳ್ಳಿ. ಈಗಾಗಲೇ ಬೇಯಿಸಿಕೊಂಡ ಇಡ್ಲಿಯನ್ನು ಹಾಕಿ ಕೈಯಾಡಿಸಿದರೆ ರುಚಿಕರವಾದ ಗೋಲಿ ಇಡ್ಲಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?