Goli idli Recipe : ಇದು ಗೋಲಿ ಇಡ್ಲಿ, ಇಲ್ಲಿದೆ ರೆಸಿಪಿ

ರಾತ್ರಿಯಾಗುತ್ತಿದ್ದಂತೆ ನಾಳೆ ಬೆಳಗ್ಗೆ ತಿಂಡಿಗೆ ಏನು ಮಾಡ್ಲಿ ಎನ್ನುವುದು ಎಲ್ಲಾ ಗೃಹಿಣಿಯರ ಪ್ರಶ್ನೆಯಾಗಿರುತ್ತದೆ. ದಿನನಿತ್ಯ ಅದೇ ದೋಸೆ, ಇಡ್ಲಿ, ಚಿತ್ರಾನ್ನ, ಉಪ್ಪಿಟ್ಟು ತಿಂದು ಬೋರ್ ಆಗಿರುತ್ತದೆ. ಹೀಗಾದಾಗ ಮನೆಯಲ್ಲಿರುವ ಈ ಕೆಲವು ಸಾಮಗ್ರಿಗಳನ್ನು ಬಳಸಿಕೊಂಡು ರುಚಿಕರವಾದ ಗೋಲಿ ಇಡ್ಲಿಯನ್ನು ಟ್ರೈ ಮಾಡಬಹುದು. ಹಾಗಾದ್ರೆ ಈ ಸಿಂಪಲ್ ಗೋಲಿ ಇಡ್ಲಿ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Goli idli Recipe : ಇದು ಗೋಲಿ ಇಡ್ಲಿ, ಇಲ್ಲಿದೆ ರೆಸಿಪಿ
ಗೋಲಿ ಇಡ್ಲಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 09, 2024 | 4:45 PM

ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ರವೆ ಇಡ್ಲಿ, ಗೋಧಿ ಹಿಟ್ಟಿನ ಇಡ್ಲಿ, ಮಲ್ಲಿಗೆ ಇಡ್ಲಿ, ಅವಲಕ್ಕಿ ಹಾಕಿ ಹೀಗೆ ವಿವಿಧ ರೀತಿಯ ಇಡ್ಲಿ ರೆಸಿಪಿಯನ್ನು ಸವಿದ್ದಿರಬಹುದು. ಅದಲ್ಲದೇ ಈಗಂತೂ ಇಡ್ಲಿಯಲ್ಲಿ ನಾನಾ ರೀತಿಯ ವೆರೈಂಟಿಗಳು ಬಂದಿದ್ದು, ಅದರಲ್ಲಿ ಒಂದು ಈ ಗೋಲಿ ಇಡ್ಲಿ. ನೋಡುವುದಕ್ಕೆ ರಸಗುಲ್ಲಾದಂತಿದ್ದು, ಮೃದುವಾಗಿರುವ ಈ ತಿನಿಸು ಮಸಾಲೆಯ ಸುವಾಸನೆಯಿಂದಾಗಿ ಒಮ್ಮೆ ತಿಂದರೆ ಮತ್ತೆ ತಿನ್ನಬೇಕೇನಿಸುತ್ತದೆ. ಮಾಡುವುದಕ್ಕೂ ಸ್ವಲ್ಪ ಸಮಯ ತೆಗೆದುಕೊಳ್ಳುವ ಈ ತಿಂಡಿಯನ್ನು ಎಲ್ಲರೂ ಇಷ್ಟ ಪಟ್ಟೆ ಇದನ್ನು ಸವಿಯುತ್ತಾರೆ.

ಗೋಲಿ ಇಡ್ಲಿ ಮಾಡಲು ಬೇಕಾಗುವ ಸಾಮಗ್ರಿಗಳು:

* ಅಕ್ಕಿ ಹಿಟ್ಟು

* ಶುಂಠಿ

* ಕರಿಬೇವು

* ಎಣ್ಣೆ

* ಇಂಗು

* ಉದ್ದಿನ ಬೇಳೆ

* ಕಡಲೆ ಬೇಳೆ

* ಹಸಿ ಮೆಣಸು

* ತುಪ್ಪ

ಇದನ್ನೂ ಓದಿ: ಕೇರಳದ ಸ್ಪೆಷಲ್ ಹಬ್ಬದೂಟ ‘ಓಣಂ ಸದ್ಯ’, ಬೆಂಗಳೂರಿನ ಈ ತಾಣಗಳಲ್ಲಿ ಸಿಗುತ್ತೆ ವಿಶಿಷ್ಟ ಭೋಜನ

ಗೋಲಿ ಇಡ್ಲಿ ಮಾಡುವ ವಿಧಾನ:

* ಸ್ಟವ್ ಮೇಲೆ ಒಂದು ಪಾತ್ರೆಯನ್ನಿಟ್ಟು ಅರ್ಧ ಗ್ಲಾಸ್ ನೀರು ಹಾಕಿ, ಆ ನೀರಿಗೆ ಉಪ್ಪು ತುಪ್ಪ ಹಾಕಿ ಚೆನ್ನಾಗಿ ಕುದಿಯಲು ಬಿಡಿ.

* ಬಳಿಕ ಅದಕ್ಕೆ ಒಂದೂವರೆ ಬಟ್ಟಲು ಅಕ್ಕಿ ಹಿಟ್ಟು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ ಈ ಹಿಟ್ಟು ಹುಡಿ ಹುಡಿಯಾಗುವವರೆಗೂ ಬೇಯಿಸಿಕೊಳ್ಳಿ.

* ಸ್ವಲ್ಪ ಸಮಯ ತಣ್ಣಗಾಗಲು ಬಿಟ್ಟು ನಂತರ ಮೃದುವಾದ ಹಿಟ್ಟನ್ನು ಮಾಡಿಕೊಳ್ಳಿ. ಈ ಹಿಟ್ಟಿನಿಂದ ಸಣ್ಣ ಉಂಡೆಗಳನ್ನು ಮಾಡಿ ಹಬೆಯಲ್ಲಿ ಬೇಯಿಸಿಕೊಳ್ಳಿ.

* ತದನಂತರದಲ್ಲಿ ಸ್ಟವ್ ಮೇಲೆ ಒಂದು ಪಾತ್ರೆಯನ್ನಿಟ್ಟು ಎಣ್ಣೆ ಹಾಕಿ ಕಾಯುತ್ತಿದ್ದಂತೆ ಸಾಸಿವೆ, ಬೇಳೆ, ಉದ್ದಿನ ಬೇಳೆ, ಇಂಗು, ಕರಿಬೇವು ಹಾಕಿ ಫ್ರೈ ಮಾಡಿಕೊಳ್ಳಿ.

* ಆ ಬಳಿಕ ಇದಕ್ಕೆ ಹಸಿ ಮೆಣಸು, ಶುಂಠಿ ಹಾಕಿ ಚೆನ್ನಾಗಿ ಹುರಿದುಕೊಳ್ಳಿ. ಈಗಾಗಲೇ ಬೇಯಿಸಿಕೊಂಡ ಇಡ್ಲಿಯನ್ನು ಹಾಕಿ ಕೈಯಾಡಿಸಿದರೆ ರುಚಿಕರವಾದ ಗೋಲಿ ಇಡ್ಲಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ