AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Doodle: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯ ಇಂದಿನಿಂದ ಆರಂಭ, ಡೂಡಲ್‌ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್

ಗೂಗಲ್‌ ಬೇರೆ ಬೇರೆ ಸ್ಪೋರ್ಟ್ಸ್‌ ಈವೆಂಟ್‌ ಗಳ ಡೂಡಲ್‌ಗಳನ್ನು ಹಂಚಿಕೊಳ್ಳುತ್ತಲೇ ಬಂದಿದೆ. ಸಿಂಗಾಪುರದಲ್ಲಿ ಇಂದಿನಿಂದ (ನವೆಂಬರ್ 25) ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಆರಂಭವಾಗುತ್ತಿದ್ದು, ಗೂಗಲ್ ವಿಶೇಷವಾದ ಗೂಗಲ್ ಡೂಡಲ್‌ ರಚಿಸಿದೆ. ಇಂದು ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯದ ಆರಂಭದಲ್ಲಿಯೇ ಡೂಡಲ್‌ ರಚಿಸುವ ಮೂಲಕ ಗೂಗಲ್‌ ವಿಶೇಷ ಗೌರವವನ್ನು ಸಲ್ಲಿಸಿದೆ.

Google Doodle: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯ ಇಂದಿನಿಂದ ಆರಂಭ, ಡೂಡಲ್‌ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 25, 2024 | 2:10 PM

Share

ಗೂಗಲ್‌ ಸ್ಪೋರ್ಟ್ಸ್‌ ಈವೆಂಟ್‌ಗಳ ಡೂಡಲ್‌ಗಳನ್ನು ಹಂಚಿಕೊಳ್ಳುತ್ತಿರುವುದು ಹೊಸದೇನಲ್ಲ. ಇತ್ತೀಚೆಗಷ್ಟೇ ಗೂಗಲ್‌ ದಿನಕ್ಕೊಂದು ಡೂಡಲ್‌ ಮೂಲಕ ಪ್ಯಾರಿಸ್‌ ಒಲಿಂಪಿಕ್ಸ್‌ 2024 ಕ್ರೀಡಾಕೂಟಕ್ಕೆ ಗೌರವ ಸಲ್ಲಿಸಿತ್ತು. ಆದರೆ ಇಂದು ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ವಿಶೇಷ ಡೂಡಲ್‌ ರಚಿಸುವ ಮೂಲಕ ಗೂಗಲ್‌ ವಿಶೇಷ ಗೌರವವನ್ನು ಸಲ್ಲಿಸಿದೆ.

ಅತ್ಯಂತ ಹಳೆಯ ಆಟಗಳಲ್ಲಿ ಒಂದಾಗಿರುವ ಚೆಸ್ ಆಟವು, ತನ್ನ ಬುದ್ಧಿವಂತಿಕೆ ಹಾಗೂ ಕಾರ್ಯತಂತ್ರದಿಂದಲೇ ಶತಮಾನಗಳಿಂದ ಎಲ್ಲರ ಮನಸ್ಸನ್ನು ಗೆದ್ದುಕೊಂಡಿದೆ. 64 ಕಪ್ಪು ಬಿಳುಪು ಚೌಕಗಳನ್ನು ಹೊಂದಿರುವ ಬೋರ್ಡ್‌ನಲ್ಲಿ ಆಡುವ ಚೆಸ್‌ನ ಐತಿಹಾಸಿಕ ಮತ್ತು ಕಾರ್ಯತಂತ್ರದ ಆಟವನ್ನು ಇಂದಿನ ಡೂಡಲ್‌ನೊಂದಿಗೆ ಗೂಗಲ್ ಆಚರಿಸಿದೆ. ಈ ಗೂಗಲ್ ಡೂಡಲ್ ನಲ್ಲಿ ಹಳದಿ, ಕೆಂಪು, ನೀಲಿ ಹಾಗೂ ಬಿಳಿ ಬಣ್ಣದ ಚೆಸ್ ದಾಳದ ಚಿಹ್ನೆಗಳನ್ನು ತೋರಿಸಲಾಗಿದೆ. ಇಂದಿನ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯವನ್ನು ಗೂಗಲ್‌ ಈ ವಿಶೇಷ ಡೂಡಲ್‌ ಮೂಲಕ ಹೈ ಲೈಟ್ ಮಾಡಿದೆ.

ಇದನ್ನೂ ಓದಿ: ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳು

ಇಂದಿನಿಂದ ವಿಶ್ವ ಚಾಂಪಿಯನ್‌ಶಿಪ್ ಪಂದ್ಯ ಆರಂಭ

ವಿಶ್ವ ಚಾಂಪಿಯನ್‌ಶಿಪ್ ಪಂದ್ಯವು (ಇಂದು) ನವೆಂಬರ್ 25 ರಿಂದ ಡಿಸೆಂಬರ್ 13 ರವರೆಗೆ ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆಯಲಿದೆ. ಸಿಂಗಾಪುರದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಕೂಟದ ಮೊದಲ ಸುತ್ತಿನಲ್ಲೇ ಗುಕೇಶ್‌, ಚೀನಾದ ಹಾಲಿ ಚಾಂಪಿಯನ್ ಡಿಂಗ್ ಲಿರೆನ್ ಅವರನ್ನು ಎದುರಿಸಲಿದ್ದಾರೆ. ಒಂದು ವೇಳೆ ಭಾರತೀಯ ಚೆಸ್ ಆಟಗಾರ ಗುಕೇಶ್ ಈ ವಿಶ್ವ ಚೆಸ್ ಚಾಂಪಿಯನ್​ಶಿಪ್ ಗೆದ್ದು ಕೊಂಡರೆ ವಿಶ್ವದ ಅತ್ಯಂತ ಕಿರಿಯ ಚೆಸ್ ಚತುರ ಎನ್ನುವ ಖ್ಯಾತಿಗೆ ಪಾತ್ರರಾಗಲಿದ್ದಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ