AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Doodle: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯ ಇಂದಿನಿಂದ ಆರಂಭ, ಡೂಡಲ್‌ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್

ಗೂಗಲ್‌ ಬೇರೆ ಬೇರೆ ಸ್ಪೋರ್ಟ್ಸ್‌ ಈವೆಂಟ್‌ ಗಳ ಡೂಡಲ್‌ಗಳನ್ನು ಹಂಚಿಕೊಳ್ಳುತ್ತಲೇ ಬಂದಿದೆ. ಸಿಂಗಾಪುರದಲ್ಲಿ ಇಂದಿನಿಂದ (ನವೆಂಬರ್ 25) ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಆರಂಭವಾಗುತ್ತಿದ್ದು, ಗೂಗಲ್ ವಿಶೇಷವಾದ ಗೂಗಲ್ ಡೂಡಲ್‌ ರಚಿಸಿದೆ. ಇಂದು ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯದ ಆರಂಭದಲ್ಲಿಯೇ ಡೂಡಲ್‌ ರಚಿಸುವ ಮೂಲಕ ಗೂಗಲ್‌ ವಿಶೇಷ ಗೌರವವನ್ನು ಸಲ್ಲಿಸಿದೆ.

Google Doodle: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯ ಇಂದಿನಿಂದ ಆರಂಭ, ಡೂಡಲ್‌ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 25, 2024 | 2:10 PM

Share

ಗೂಗಲ್‌ ಸ್ಪೋರ್ಟ್ಸ್‌ ಈವೆಂಟ್‌ಗಳ ಡೂಡಲ್‌ಗಳನ್ನು ಹಂಚಿಕೊಳ್ಳುತ್ತಿರುವುದು ಹೊಸದೇನಲ್ಲ. ಇತ್ತೀಚೆಗಷ್ಟೇ ಗೂಗಲ್‌ ದಿನಕ್ಕೊಂದು ಡೂಡಲ್‌ ಮೂಲಕ ಪ್ಯಾರಿಸ್‌ ಒಲಿಂಪಿಕ್ಸ್‌ 2024 ಕ್ರೀಡಾಕೂಟಕ್ಕೆ ಗೌರವ ಸಲ್ಲಿಸಿತ್ತು. ಆದರೆ ಇಂದು ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ವಿಶೇಷ ಡೂಡಲ್‌ ರಚಿಸುವ ಮೂಲಕ ಗೂಗಲ್‌ ವಿಶೇಷ ಗೌರವವನ್ನು ಸಲ್ಲಿಸಿದೆ.

ಅತ್ಯಂತ ಹಳೆಯ ಆಟಗಳಲ್ಲಿ ಒಂದಾಗಿರುವ ಚೆಸ್ ಆಟವು, ತನ್ನ ಬುದ್ಧಿವಂತಿಕೆ ಹಾಗೂ ಕಾರ್ಯತಂತ್ರದಿಂದಲೇ ಶತಮಾನಗಳಿಂದ ಎಲ್ಲರ ಮನಸ್ಸನ್ನು ಗೆದ್ದುಕೊಂಡಿದೆ. 64 ಕಪ್ಪು ಬಿಳುಪು ಚೌಕಗಳನ್ನು ಹೊಂದಿರುವ ಬೋರ್ಡ್‌ನಲ್ಲಿ ಆಡುವ ಚೆಸ್‌ನ ಐತಿಹಾಸಿಕ ಮತ್ತು ಕಾರ್ಯತಂತ್ರದ ಆಟವನ್ನು ಇಂದಿನ ಡೂಡಲ್‌ನೊಂದಿಗೆ ಗೂಗಲ್ ಆಚರಿಸಿದೆ. ಈ ಗೂಗಲ್ ಡೂಡಲ್ ನಲ್ಲಿ ಹಳದಿ, ಕೆಂಪು, ನೀಲಿ ಹಾಗೂ ಬಿಳಿ ಬಣ್ಣದ ಚೆಸ್ ದಾಳದ ಚಿಹ್ನೆಗಳನ್ನು ತೋರಿಸಲಾಗಿದೆ. ಇಂದಿನ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಪಂದ್ಯವನ್ನು ಗೂಗಲ್‌ ಈ ವಿಶೇಷ ಡೂಡಲ್‌ ಮೂಲಕ ಹೈ ಲೈಟ್ ಮಾಡಿದೆ.

ಇದನ್ನೂ ಓದಿ: ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳು

ಇಂದಿನಿಂದ ವಿಶ್ವ ಚಾಂಪಿಯನ್‌ಶಿಪ್ ಪಂದ್ಯ ಆರಂಭ

ವಿಶ್ವ ಚಾಂಪಿಯನ್‌ಶಿಪ್ ಪಂದ್ಯವು (ಇಂದು) ನವೆಂಬರ್ 25 ರಿಂದ ಡಿಸೆಂಬರ್ 13 ರವರೆಗೆ ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆಯಲಿದೆ. ಸಿಂಗಾಪುರದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಕೂಟದ ಮೊದಲ ಸುತ್ತಿನಲ್ಲೇ ಗುಕೇಶ್‌, ಚೀನಾದ ಹಾಲಿ ಚಾಂಪಿಯನ್ ಡಿಂಗ್ ಲಿರೆನ್ ಅವರನ್ನು ಎದುರಿಸಲಿದ್ದಾರೆ. ಒಂದು ವೇಳೆ ಭಾರತೀಯ ಚೆಸ್ ಆಟಗಾರ ಗುಕೇಶ್ ಈ ವಿಶ್ವ ಚೆಸ್ ಚಾಂಪಿಯನ್​ಶಿಪ್ ಗೆದ್ದು ಕೊಂಡರೆ ವಿಶ್ವದ ಅತ್ಯಂತ ಕಿರಿಯ ಚೆಸ್ ಚತುರ ಎನ್ನುವ ಖ್ಯಾತಿಗೆ ಪಾತ್ರರಾಗಲಿದ್ದಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ