AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima Wishes 2024: ಗುರು ಪೂರ್ಣಿಮಾದಂದು ನಿಮ್ಮ ಪ್ರೀತಿಯ ಗುರುಗಳಿಗೆ ಈ ರೀತಿ ಶುಭಾಶಯ ಕೋರಿ

ಬದುಕಲ್ಲಿ ಏನಾದರೂ ಸಾಧಿಸಬೇಕೆಂದರೆ ಗುರುವಿನ ಮಾರ್ಗದರ್ಶನವೀರಲೇ ಬೇಕು. ಸರಿ ದಾರಿ ತೋರಿ ಮುನ್ನಡೆಸಿದ ಗುರುವಿಗೆ ನಮನ ಸಲ್ಲಿಸುವ ದಿನವೇ ಈ ಗುರುಪೂರ್ಣಿಮ. ಈ ಬಾರಿ ಗುರು ಪೂರ್ಣಿಮಾವನ್ನು ಜುಲೈ 21ರಂದು ಆಚರಣೆ ಮಾಡಲಾಗುತ್ತಿದೆ. ಈ ದಿನದಂದು ನಿಮ್ಮ ನೆಚ್ಚಿನ ಗುರುವಿಗೆ ಈ ಸಂದೇಶಗಳನ್ನು ಕಳುಹಿಸುವ ಮೂಲಕ ಶುಭಾಶಯಗಳನ್ನು ಕೋರಬಹುದು.

Guru Purnima Wishes 2024: ಗುರು ಪೂರ್ಣಿಮಾದಂದು ನಿಮ್ಮ ಪ್ರೀತಿಯ ಗುರುಗಳಿಗೆ ಈ ರೀತಿ ಶುಭಾಶಯ ಕೋರಿ
ಗುರು ಪೂರ್ಣಿಮಾ
ಸಾಯಿನಂದಾ
| Edited By: |

Updated on: Jul 18, 2024 | 9:36 AM

Share

ಒಬ್ಬ ವ್ಯಕ್ತಿಯ ಜೀವನದಲ್ಲಿ ತಂದೆ ತಾಯಿಯನ್ನು ಹೊರತು ಪಡಿಸಿ ಗುರುವಿನ ಪಾತ್ರವು ಬಹುದೊಡ್ಡದು. ಗುರುವಿಗೆ ನಮನ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಗುರು ಪೂರ್ಣಿಮಾವನ್ನು ಆಚರಿಸಲಾಗುತ್ತದೆ. ಅದಲ್ಲದೇ, ವೇದವ್ಯಾಸರು ಈ ದಿನದಂದೇ ಜನಿಸಿದ್ದು, ಈ ದಿನದಂದು ವೇದವ್ಯಾಸರ ಜನ್ಮದಿನವೆಂದು ಆಚರಿಸಲಾಗುತ್ತದೆ. ಈ ದಿನವನ್ನು ಬದುಕಿಗೆ ಸರಿ ದಾರಿ ತೋರಿದ ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ಮತ್ತು ಕೃತಜ್ಞತೆಯನ್ನು ಸಲ್ಲಿಸುವ ದಿನವಾಗಿದೆ. ಹೀಗಾಗಿ ವಿಶೇಷ ದಿನದಂದು ಗುರುಗಳಿಗೆ ಈ ರೀತಿಯಾಗಿ ಸಂದೇಶ ಕಳುಹಿಸಿ, ಅವರಿಗೆ ಗೌರವವನ್ನು ಸಲ್ಲಿಸಬಹುದಾಗಿದೆ.

  • ಗುರುಬ್ರಹ್ಮ ಗುರುರ್ವಿಷ್ಣುಃ ಗುರುದೇವೋ ಮಹೇಶ್ವರಃ ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಸರ್ವರಿಗೂ ಗುರುಪೂರ್ಣಿಮ ದಿನದ ಶುಭಾಶಯಗಳು.
  • ಎದೆಯ ಹಣತೆಯಲ್ಲಿ ಅಕ್ಷರದ ದೀಪ ಹೊತ್ತಿಸಿ ಅನೇಕ ಮಂದಿಯ ಬಾಳಿಗೆ ಭವ್ಯ ಬೆಳಕು ಚೆಲ್ಲುವ ಗುರುಗಳಿಗೆ ಗುರು ಪೂರ್ಣಿಮಾದ ಶುಭಾಶಯಗಳು.
  • ನನ್ನನ್ನು ಉತ್ತಮ ವ್ಯಕ್ತಿಯನ್ನಾಗಿ ಮಾಡಿದ್ದಕ್ಕಾಗಿ ಎಲ್ಲಾ ಗುರುಗಳಿಗೆ ತುಂಬು ಹೃದಯದ ಧನ್ಯವಾದಗಳು. ಗುರು ಪೂರ್ಣಿಮೆಯ ಶುಭಾಶಯಗಳು.
  • ನನ್ನ ಬದುಕಿನ ಪುಸ್ತಕಕ್ಕೆ ರೂಪಕೊಟ್ಟು, ಗುರಿಯೆಡೆಗೆ ನಕ್ಷೆ ಹಾಕಿ ಕೊಟ್ಟು ನನ್ನ ಯಶಸ್ಸಿನಲ್ಲಿ ಖುಷಿಕಂಡ ಗುರುವಿಗೆ ಗುರುಪೂರ್ಣಿಮದ ಶುಭಾಶಯಗಳು.
  • ನನ್ನ ಜೀವನದ ದಾರಿ ತೋರಿ ಮುನ್ನಡೆಸಿದ ಗುರುವಿಗೆ ಗುರುಪೂರ್ಣಿಮದ ಶುಭಾಶಯಗಳು.
  • ತಪ್ಪಿದ್ದಲ್ಲಿ ತಿದ್ದಿ, ಬುದ್ದಿ ಹೇಳಿ ಮಾರ್ಗದರ್ಶನವಿತ್ತ ಗುರುವೃಂದಕ್ಕೆ ಗುರುಪೂರ್ಣಿಮದ ಶುಭಾಶಯಗಳು.
  • ಗುರುವೆಂದರೆ ಕೇವಲ ಶಿಕ್ಷಕರಷ್ಟೇ ಅಲ್ಲ, ಜೀವನದಲ್ಲಿ ಸರಿಯಾದ ದಾರಿ ತೋರುವ ಪ್ರತಿಯೊಬ್ಬರೂ ಗುರುಗಳೇ, ಇಂತಹ ಎಲ್ಲಾ ಗುರುವೃಂದಕ್ಕೂ ಗುರುಪೂರ್ಣಿಮದ ಶುಭಾಶಯಗಳು.
  • ಅಜ್ಞಾನವೆಂಬ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಮಹಾನ್ ಬೆಳಕು ಈ ಗುರು. ನಿಮಗೆ ಗುರು ಪೂರ್ಣಿಮೆಯ ಶುಭಾಶಯಗಳು.
  • ನೀವು ನನಗೆ ಹೇಳಿಕೊಟ್ಟ ಪ್ರತಿಯೊಂದು ಪಾಠಕ್ಕೂ ನಾನು ಆಭಾರಿಯಾಗಿದ್ದೇನೆ. ನಿಮಗೆ ಗುರು ಪೂರ್ಣಿಮಾ ಶುಭಾಶಯಗಳು
  • ನನ್ನ ಜೀವನದ ಪ್ರತಿಯೊಂದು ಹಂತದಲ್ಲಿ, ನನ್ನನ್ನು ತಿದ್ದಿ ತೀಡಿದ ಪ್ರೀತಿಯ ಗುರುವಿಗೆ ಗುರುಪೂರ್ಣಿಮ ದಿನದ ಶುಭಾಶಯಗಳು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?