AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಬಿಳಿಕೂದಲು ಕಿತ್ತರೆ ಸುತ್ತಲಿನ ಕೂದಲು ಬಿಳಿಯಾಗುತ್ತಾ?

ಕೂದಲನ್ನು ಕಿತ್ತುಕೊಳ್ಳುವುದರಿಂದ ಕೂದಲ ಬೇರಿಗೆ ತೊಂದರೆಯಾಗಬಹುದು. ಹೀಗಾಗಿ, ಕೂದಲು ಕೀಳುವುದು ಒಳ್ಳೆಯ ಅಭ್ಯಾಸವಲ್ಲ. ಆದರೆ, ಬೇರೆ ಕೂದಲು ಬಿಳಿಯಾಗುವುದಕ್ಕೂ ನಿಮ್ಮ ಕೂದಲು ಕಿತ್ತುಕೊಳ್ಳುವುದಕ್ಕೂ ಸಂಬಂಧವಿಲ್ಲ.

ಒಂದು ಬಿಳಿಕೂದಲು ಕಿತ್ತರೆ ಸುತ್ತಲಿನ ಕೂದಲು ಬಿಳಿಯಾಗುತ್ತಾ?
ಬಿಳಿ ಕೂದಲುImage Credit source: iStock
ಸುಷ್ಮಾ ಚಕ್ರೆ
|

Updated on: Nov 23, 2023 | 6:50 PM

Share

ಕೂದಲಿನ ಬಗ್ಗೆ ನಮಗೆ ಹಲವು ನಂಬಿಕೆಗಳಿವೆ. ಅದರಲ್ಲೂ ಬಿಳಿಯಾದ ಕೂದಲನ್ನು ಕಿತ್ತರೆ ಅದರ ಸುತ್ತಲಿನ ಕೂದಲು ಬಿಳಿಯಾಗುತ್ತದೆ ಎಂಬುದು ಅನೇಕರ ನಂಬಿಕೆ. ಆದರೆ, ಇದು ನಿಜವಾ? ಕೂದಲಿನ ಕೋಶಕದಲ್ಲಿ ಮೆಲನಿನ್ ಕಡಿಮೆಯಾದಾಗ ನಿಮ್ಮ ಕೂದಲಿನ ಬಣ್ಣ ಬದಲಾವಣೆಯಾಗುತ್ತದೆ. ನಿಮ್ಮ ಜೀವಕೋಶಗಳು ಮೆಲನಿನ್ ಉತ್ಪಾದನೆಯನ್ನು ನಿಲ್ಲಿಸಿದಂತೆ, ನಿಮ್ಮ ಕೂದಲು ಬೂದು ಅಥವಾ ಬಿಳಿ ಬಣ್ಣಕ್ಕೆ ತಿರುಗುತ್ತದೆ. ಆದ್ದರಿಂದ, ನಿಮ್ಮ ಬೂದು ಕೂದಲನ್ನು ಕಿತ್ತುಕೊಳ್ಳುವುದರಿಂದ ಉಳಿದ ಕೂದಲುಗಳು ಕೂಡ ಬಿಳಿಯಾಗುತ್ತವೆ ಎಂಬುದು ನಿಜವಲ್ಲ.

ಆದರೆ, ಕೂದಲನ್ನು ಕಿತ್ತುಕೊಳ್ಳುವುದರಿಂದ ಕೂದಲ ಬೇರಿಗೆ ತೊಂದರೆಯಾಗಬಹುದು. ಹೀಗಾಗಿ, ಕೂದಲು ಕೀಳುವುದು ಒಳ್ಳೆಯ ಅಭ್ಯಾಸವಲ್ಲ. ಆದರೆ, ಬೇರೆ ಕೂದಲು ಬಿಳಿಯಾಗುವುದಕ್ಕೂ ನಿಮ್ಮ ಕೂದಲು ಕಿತ್ತುಕೊಳ್ಳುವುದಕ್ಕೂ ಸಂಬಂಧವಿಲ್ಲ. ಒಂದು ಕೂದಲು ಕಿತ್ತುಕೊಂಡರೆ ಅದು ಇತರ ಕೂದಲಿನ ಬೇರುಗಳನ್ನು ದುರ್ಬಲಗೊಳಿಸಬಹುದು. ಇದು ನಿರ್ದಿಷ್ಟ ಸ್ಥಳದಲ್ಲಿ ಕೂದಲು ಮತ್ತೆ ಬೆಳೆಯುವುದನ್ನು ತಡೆಯಬಹುದು.

ನಮ್ಮ ಜೀವನಶೈಲಿಯು ನಮ್ಮ ಜೀವಕೋಶಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀವು ಬಯಸಿದರೆ ನೀವು ಸೇವಿಸಬೇಕಾದ ಮತ್ತು ತಪ್ಪಿಸಬೇಕಾದ ಆಹಾರಗಳು ಇಲ್ಲಿವೆ. ಯಾವ ಆಹಾರಗಳು ಉತ್ತಮ ಮೆಲನಿನ್ ಉತ್ಪಾದನೆಯನ್ನು ಉತ್ತೇಜಿಸುತ್ತವೆ? ಎಂಬ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Hair Growth: ನಿಮ್ಮ ಕೂದಲು ಉದ್ದವಾಗಿ ಬೆಳೆಯಲು ಈ ಹಣ್ಣುಗಳನ್ನು ಸೇವಿಸಿ

ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ನಮ್ಮ ಚರ್ಮಕ್ಕೆ ಸಾಕಷ್ಟು ಹಾನಿ ಉಂಟಾಗುತ್ತದೆ. ಸೂರ್ಯನಿಗೆ ಅತಿಯಾದ ಶಾಖ ಕೂದಲಲ್ಲಿ ಮೆಲನಿನ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಕೂದಲು ಅಕಾಲಿಕವಾಗಿ ಬಿಳಿಯಾಗಲು ಕಾರಣವಾಗುತ್ತದೆ.

ಧೂಮಪಾನವು ದೇಹದ ಮೇಲೆ ವಿವಿಧ ನೆಗೆಟಿವ್ ಪರಿಣಾಮಗಳನ್ನು ಬೀರುತ್ತದೆ. ಅತಿಯಾದ ಧೂಮಪಾನವು ನೆತ್ತಿಯಲ್ಲಿ ರಕ್ತದ ಹರಿವನ್ನು ತಡೆಯುತ್ತದೆ. ಇದು ಕೂದಲಿನ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ. ವಾಸ್ತವವಾಗಿ, ಧೂಮಪಾನವು ಅಕಾಲಿಕವಾಗಿ ಕೂದಲು ಬಿಳಿಯಾಗುವುದು ಹಾಗೂ ಕೂದಲು ಉದುರುವಿಕೆಗೆ ಕಾರಣವಾಗಬಹುದು. ಒತ್ತಡ ಮತ್ತು ಆತಂಕದಂತಹ ಇತರ ಅಸ್ವಸ್ಥತೆಗಳು ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅತಿಯಾದ ಒತ್ತಡವು ನಿದ್ರೆಯ ಕೊರತೆ, ಹಸಿವಿನ ಕೊರತೆ ಮತ್ತು ಇತರ ಸಮಸ್ಯೆಗಳಿಗೆ ಕಾರಣವಾಗಬಹುದು. ಇವುಗಳು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಮತ್ತು ಕೂದಲು ಅಕಾಲಿಕವಾಗಿ ಬಿಳಿಯಾಗುವುದಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ಧೂಳು, ಮಾಲಿನ್ಯದಿಂದ ನಿಮ್ಮ ಕೂದಲು ಉದುರದಂತೆ ತಡೆಯುವುದು ಹೇಗೆ?

ಕೂದಲಿನಲ್ಲಿ ಮೆಲನಿನ್ ಉತ್ಪಾದನೆಯನ್ನು ಉತ್ತೇಜಿಸುವಲ್ಲಿ ವಿಟಮಿನ್‌ಗಳು ಪ್ರಮುಖ ಪೋಷಕಾಂಶವಾಗಿದೆ. ಇದಲ್ಲದೆ, ವಿಶೇಷವಾಗಿ ವಿಟಮಿನ್ ಬಿ 12 ಕೆಂಪು ರಕ್ತ ಕಣಗಳನ್ನು ಉಳಿಸಿಕೊಳ್ಳಲು ದೇಹಕ್ಕೆ ಅಗತ್ಯವಾಗಿರುತ್ತದೆ. ದೇಹದಲ್ಲಿ ವಿಟಮಿನ್ ಬಿ 12 ಕೊರತೆಯು ಕೂದಲಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಕೊರತೆಯು ಕೂದಲು ಬಿಳಿಯಾಗುವುದು ಮುಂತಾದ ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ